Latest

ಲೋಕ ಅದಾಲತ್ ನಲ್ಲಿ 92 ಪ್ರಕರಣಗಳು ಇತ್ಯರ್ಥ

ಕುಂದಗೋಳ; ಪಟ್ಟಣದ ಜೆ. ಎಮ್. ಎಫ್. ಸಿ ನ್ಯಾಯಾಲಯ ಪೀಠದಲ್ಲಿ ಮಾರ್ಚ್ 16 ರಂದು ಜರುಗಿದ ರಾಷ್ಟ್ರೀಯ ಲೋಕ ಆದಾಲತ್ ನಲ್ಲಿ ಒಟ್ಟು 92 ರಾಜಿ ಸಂಧಾನ ಪ್ರಕರಣಗಳನ್ನು ಎರಡು ನ್ಯಾಯಾಲಯದಲ್ಲಿ ಒಟ್ಟು ರೂ 3,888,248 ಮೊತ್ತಕ್ಕೆ ಇತ್ಯರ್ಥಪಡಿಸಿಲಾಯಿತು.

ಕುಂದಗೋಳ ಪಟ್ಟಣದ ಜೆ. ಎಮ್. ಎಫ್. ಸಿ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ ಆದಾಲತ್ ನಲ್ಲಿ ಹಿರಿಯ ದಿವಾಣಿ ನ್ಯಾಯಾಲಯದಲ್ಲಿ ಚಕ್ ಬೌನ್ಸ್ 4, ವೈವಾಹಿಕ 4, ಆಸ್ತಿ 13, ಒಟ್ಟು ಪ್ರಕರಣಗಳು 21 ರಾಜಿಯಾಗಿದ್ದು, ರಾಜಿ ಮೊತ್ತ 17,55,437 ಪರಿಹಾರ ಹಣವನ್ನು ವಸೂಲಿ ಮಾಡಲಾಗಿದೆ. ಅದರಂತೆ ದಿವಾಣಿ ನ್ಯಾಯಾಲಯದಲ್ಲಿ ಆಸ್ತಿ ಪ್ರಕರಣ 31, ಅಂತಿಮ ಡಿಕ್ರಿ 1, ಅಮಲ್ಮಾರಿ 1, ಚಕ್ ಬೌನ್ಸ್ 14, ಕಂಪೋಡೆಂಟ್ 4, ಲಘು ಪ್ರಕರಣ 12, ಕ್ರಿಮಿನಲ್ ಮಿಸಲಾನಿಸ್ 8 ಒಟ್ಟು 71 ಪ್ರಕರಣಗಳು ರಾಜಿಯಾಗಿದ್ದು, ರಾಜಿ ಸಂದಾನದಲ್ಲಿ ಮೊತ್ತ 21,32,811 ಪರಿಹಾರ ಒದಗಿಸಲಾಗಿದೆ.

ಇನ್ನೂ ದಾಂಪತ್ಯದಲ್ಲಿ ಜೀವನ ನಡೆಸಬೇಕಾದ ಕುಟುಂಬದಲ್ಲಿನ ಮನಸ್ತಾಪದಿಂದ ದೂರವಾಗಿ ವಿವಾಹ ವಿಚ್ಛೇದನ ಬಯಸಿ ತಾಲೂಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ ಜೋಡಿಗಳು ಮೇಘಾ ಲೋಕ ಆದಾಲತ್ ನ ರಾಜಿ ಸಂಧಾನ ಮೂಲಕ ಒಂದಾದರು. ನ್ಯಾಯಾಲಯದ ಆವರಣದಲ್ಲಿ ಪರಸ್ಪರ ಹಾರ ಬದಲಾಯಿಸಿಕೊಂಡರು ಮರಳಿ ನಿಮ್ಮ ದಾಂಪತ್ಯ ಜೀವನ ಸುಖಕರವಾಗಲಿ ಎಂದು ಕಾನೂನು ಸೇವಾ ಸಮಿತಿ ಅಧ್ಯಕ್ಷರು ಹಾಗೂ ಹಿರಿಯ ನ್ಯಾಯದೀಶರು ಪಿ. ಜೆ ಪರಮೇಶ್ವರ ಶುಭ ಹಾರೈಸಿದರು. ಈ ಲೋಕ ಆದಾಲತ್ ನಲ್ಲಿ ಹಿರಿಯ ದಿವಾಣಿ ನ್ಯಾಯಾಲಯ, ದಿವಾಣಿ ನ್ಯಾಯಾಲಯದಲ್ಲಿ ಒಟ್ಟು 92 ಪ್ರಕರಣಗಳು ಇತ್ಯರ್ಥಗೊಂಡಿವೆ. ನ್ಯಾಯಾಧೀಶರಾದ ಪಿ. ಜೆ. ಪರಮೇಶ್ವರ, ಶ್ರೀಮತಿ ಗಾಯತ್ರೀ ಮೇಡಂ ರಾಷ್ಟ್ರೀಯ ಲೋಕ ಆದಾಲತ್ ಯಶಸ್ವಿಗೊಳಿಸಿದರು.

ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

7 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

7 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

7 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago