Latest

ಲೋಕ ಅದಾಲತ್ ನಲ್ಲಿ 92 ಪ್ರಕರಣಗಳು ಇತ್ಯರ್ಥ

ಕುಂದಗೋಳ; ಪಟ್ಟಣದ ಜೆ. ಎಮ್. ಎಫ್. ಸಿ ನ್ಯಾಯಾಲಯ ಪೀಠದಲ್ಲಿ ಮಾರ್ಚ್ 16 ರಂದು ಜರುಗಿದ ರಾಷ್ಟ್ರೀಯ ಲೋಕ ಆದಾಲತ್ ನಲ್ಲಿ ಒಟ್ಟು 92 ರಾಜಿ ಸಂಧಾನ ಪ್ರಕರಣಗಳನ್ನು ಎರಡು ನ್ಯಾಯಾಲಯದಲ್ಲಿ ಒಟ್ಟು ರೂ 3,888,248 ಮೊತ್ತಕ್ಕೆ ಇತ್ಯರ್ಥಪಡಿಸಿಲಾಯಿತು.

ಕುಂದಗೋಳ ಪಟ್ಟಣದ ಜೆ. ಎಮ್. ಎಫ್. ಸಿ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ ಆದಾಲತ್ ನಲ್ಲಿ ಹಿರಿಯ ದಿವಾಣಿ ನ್ಯಾಯಾಲಯದಲ್ಲಿ ಚಕ್ ಬೌನ್ಸ್ 4, ವೈವಾಹಿಕ 4, ಆಸ್ತಿ 13, ಒಟ್ಟು ಪ್ರಕರಣಗಳು 21 ರಾಜಿಯಾಗಿದ್ದು, ರಾಜಿ ಮೊತ್ತ 17,55,437 ಪರಿಹಾರ ಹಣವನ್ನು ವಸೂಲಿ ಮಾಡಲಾಗಿದೆ. ಅದರಂತೆ ದಿವಾಣಿ ನ್ಯಾಯಾಲಯದಲ್ಲಿ ಆಸ್ತಿ ಪ್ರಕರಣ 31, ಅಂತಿಮ ಡಿಕ್ರಿ 1, ಅಮಲ್ಮಾರಿ 1, ಚಕ್ ಬೌನ್ಸ್ 14, ಕಂಪೋಡೆಂಟ್ 4, ಲಘು ಪ್ರಕರಣ 12, ಕ್ರಿಮಿನಲ್ ಮಿಸಲಾನಿಸ್ 8 ಒಟ್ಟು 71 ಪ್ರಕರಣಗಳು ರಾಜಿಯಾಗಿದ್ದು, ರಾಜಿ ಸಂದಾನದಲ್ಲಿ ಮೊತ್ತ 21,32,811 ಪರಿಹಾರ ಒದಗಿಸಲಾಗಿದೆ.

ಇನ್ನೂ ದಾಂಪತ್ಯದಲ್ಲಿ ಜೀವನ ನಡೆಸಬೇಕಾದ ಕುಟುಂಬದಲ್ಲಿನ ಮನಸ್ತಾಪದಿಂದ ದೂರವಾಗಿ ವಿವಾಹ ವಿಚ್ಛೇದನ ಬಯಸಿ ತಾಲೂಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ ಜೋಡಿಗಳು ಮೇಘಾ ಲೋಕ ಆದಾಲತ್ ನ ರಾಜಿ ಸಂಧಾನ ಮೂಲಕ ಒಂದಾದರು. ನ್ಯಾಯಾಲಯದ ಆವರಣದಲ್ಲಿ ಪರಸ್ಪರ ಹಾರ ಬದಲಾಯಿಸಿಕೊಂಡರು ಮರಳಿ ನಿಮ್ಮ ದಾಂಪತ್ಯ ಜೀವನ ಸುಖಕರವಾಗಲಿ ಎಂದು ಕಾನೂನು ಸೇವಾ ಸಮಿತಿ ಅಧ್ಯಕ್ಷರು ಹಾಗೂ ಹಿರಿಯ ನ್ಯಾಯದೀಶರು ಪಿ. ಜೆ ಪರಮೇಶ್ವರ ಶುಭ ಹಾರೈಸಿದರು. ಈ ಲೋಕ ಆದಾಲತ್ ನಲ್ಲಿ ಹಿರಿಯ ದಿವಾಣಿ ನ್ಯಾಯಾಲಯ, ದಿವಾಣಿ ನ್ಯಾಯಾಲಯದಲ್ಲಿ ಒಟ್ಟು 92 ಪ್ರಕರಣಗಳು ಇತ್ಯರ್ಥಗೊಂಡಿವೆ. ನ್ಯಾಯಾಧೀಶರಾದ ಪಿ. ಜೆ. ಪರಮೇಶ್ವರ, ಶ್ರೀಮತಿ ಗಾಯತ್ರೀ ಮೇಡಂ ರಾಷ್ಟ್ರೀಯ ಲೋಕ ಆದಾಲತ್ ಯಶಸ್ವಿಗೊಳಿಸಿದರು.

ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

4 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

4 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

4 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

4 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

19 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

19 hours ago