Latest

ಲೋಕ ಅದಾಲತ್ ನಲ್ಲಿ 92 ಪ್ರಕರಣಗಳು ಇತ್ಯರ್ಥ

ಕುಂದಗೋಳ; ಪಟ್ಟಣದ ಜೆ. ಎಮ್. ಎಫ್. ಸಿ ನ್ಯಾಯಾಲಯ ಪೀಠದಲ್ಲಿ ಮಾರ್ಚ್ 16 ರಂದು ಜರುಗಿದ ರಾಷ್ಟ್ರೀಯ ಲೋಕ ಆದಾಲತ್ ನಲ್ಲಿ ಒಟ್ಟು 92 ರಾಜಿ ಸಂಧಾನ ಪ್ರಕರಣಗಳನ್ನು ಎರಡು ನ್ಯಾಯಾಲಯದಲ್ಲಿ ಒಟ್ಟು ರೂ 3,888,248 ಮೊತ್ತಕ್ಕೆ ಇತ್ಯರ್ಥಪಡಿಸಿಲಾಯಿತು.

ಕುಂದಗೋಳ ಪಟ್ಟಣದ ಜೆ. ಎಮ್. ಎಫ್. ಸಿ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ ಆದಾಲತ್ ನಲ್ಲಿ ಹಿರಿಯ ದಿವಾಣಿ ನ್ಯಾಯಾಲಯದಲ್ಲಿ ಚಕ್ ಬೌನ್ಸ್ 4, ವೈವಾಹಿಕ 4, ಆಸ್ತಿ 13, ಒಟ್ಟು ಪ್ರಕರಣಗಳು 21 ರಾಜಿಯಾಗಿದ್ದು, ರಾಜಿ ಮೊತ್ತ 17,55,437 ಪರಿಹಾರ ಹಣವನ್ನು ವಸೂಲಿ ಮಾಡಲಾಗಿದೆ. ಅದರಂತೆ ದಿವಾಣಿ ನ್ಯಾಯಾಲಯದಲ್ಲಿ ಆಸ್ತಿ ಪ್ರಕರಣ 31, ಅಂತಿಮ ಡಿಕ್ರಿ 1, ಅಮಲ್ಮಾರಿ 1, ಚಕ್ ಬೌನ್ಸ್ 14, ಕಂಪೋಡೆಂಟ್ 4, ಲಘು ಪ್ರಕರಣ 12, ಕ್ರಿಮಿನಲ್ ಮಿಸಲಾನಿಸ್ 8 ಒಟ್ಟು 71 ಪ್ರಕರಣಗಳು ರಾಜಿಯಾಗಿದ್ದು, ರಾಜಿ ಸಂದಾನದಲ್ಲಿ ಮೊತ್ತ 21,32,811 ಪರಿಹಾರ ಒದಗಿಸಲಾಗಿದೆ.

ಇನ್ನೂ ದಾಂಪತ್ಯದಲ್ಲಿ ಜೀವನ ನಡೆಸಬೇಕಾದ ಕುಟುಂಬದಲ್ಲಿನ ಮನಸ್ತಾಪದಿಂದ ದೂರವಾಗಿ ವಿವಾಹ ವಿಚ್ಛೇದನ ಬಯಸಿ ತಾಲೂಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ ಜೋಡಿಗಳು ಮೇಘಾ ಲೋಕ ಆದಾಲತ್ ನ ರಾಜಿ ಸಂಧಾನ ಮೂಲಕ ಒಂದಾದರು. ನ್ಯಾಯಾಲಯದ ಆವರಣದಲ್ಲಿ ಪರಸ್ಪರ ಹಾರ ಬದಲಾಯಿಸಿಕೊಂಡರು ಮರಳಿ ನಿಮ್ಮ ದಾಂಪತ್ಯ ಜೀವನ ಸುಖಕರವಾಗಲಿ ಎಂದು ಕಾನೂನು ಸೇವಾ ಸಮಿತಿ ಅಧ್ಯಕ್ಷರು ಹಾಗೂ ಹಿರಿಯ ನ್ಯಾಯದೀಶರು ಪಿ. ಜೆ ಪರಮೇಶ್ವರ ಶುಭ ಹಾರೈಸಿದರು. ಈ ಲೋಕ ಆದಾಲತ್ ನಲ್ಲಿ ಹಿರಿಯ ದಿವಾಣಿ ನ್ಯಾಯಾಲಯ, ದಿವಾಣಿ ನ್ಯಾಯಾಲಯದಲ್ಲಿ ಒಟ್ಟು 92 ಪ್ರಕರಣಗಳು ಇತ್ಯರ್ಥಗೊಂಡಿವೆ. ನ್ಯಾಯಾಧೀಶರಾದ ಪಿ. ಜೆ. ಪರಮೇಶ್ವರ, ಶ್ರೀಮತಿ ಗಾಯತ್ರೀ ಮೇಡಂ ರಾಷ್ಟ್ರೀಯ ಲೋಕ ಆದಾಲತ್ ಯಶಸ್ವಿಗೊಳಿಸಿದರು.

ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

30 minutes ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

32 minutes ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

4 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

4 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

4 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

4 hours ago