Categories: CorruptionLatest

ಆಸ್ತಿ ವರ್ಗಾವಣೆಗೆ ₹9,950 ಲಂಚ: ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆ ಸಂಬಂಧದ ಕಡತವನ್ನು ವಿಲೇವಾರಿ ಮಾಡುವುದಕ್ಕಾಗಿ ಲಂಚ ಪಡೆಯುತ್ತಿದ್ದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಯನ್ನು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಹಾಗರಗಾ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ವೇದಾಂಗ್ ಅವರು ₹9,950 ಲಂಚ ಸ್ವೀಕರಿಸುತ್ತಿದ್ದ ವೇಳೆ ಕರ್ನಾಟಕ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಾಚರಣೆ ಕರ್ನಾಟಕ ಲೋಕಾಯುಕ್ತ ಕಲಬುರಗಿ ಪೊಲೀಸ್ ಅಧೀಕ್ಷಕ ಸಿದ್ದರಾಜು ಸಿ. ಅವರ ಮಾರ್ಗದರ್ಶನದಲ್ಲಿ ನಡೆದಿದೆ.

ದೂರುದಾರ ಸಂಜೀವ್ ಅವರ ಮಾವ ಕಿಶನ್ ಪವಾರ್ ಮೃತಪಟ್ಟ ಹಿನ್ನೆಲೆ, ಅವರ ಹೆಸರಿನಲ್ಲಿದ್ದ ಹಾಗರಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಜಾದಪುರ ಗ್ರಾಮದ ಸರ್ವೆ ನಂ.111/1ರ ಖುಲ್ಲಾ ನಿವೇಶನ ಸಂಖ್ಯೆ 12 ಅನ್ನು ತಮ್ಮ ಹೆಸರಿಗೆ ವರ್ಗಾವಣೆ ಮಾಡಿಕೊಡುವಂತೆ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಲಾಗಿತ್ತು. ಇದಕ್ಕಾಗಿ ಮರಣ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನೂ ಸಲ್ಲಿಸಲಾಗಿತ್ತು.

ಆದರೆ, ಆಸ್ತಿ ವರ್ಗಾವಣೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ವೇದಾಂಗ್ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಸಂಜೀವ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನ ಪರಿಶೀಲನೆಯ ಬಳಿಕ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿ, ಕಾರ್ಯದರ್ಶಿ ಲಂಚದ ಹಣ ಸ್ವೀಕರಿಸುತ್ತಿದ್ದ ಕ್ಷಣದಲ್ಲೇ ಅವರನ್ನು ಬಂಧಿಸಿದರು.

ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ರವಿ ಪವಾರ್ ಅವರ ನೇತೃತ್ವದಲ್ಲಿ ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

₹10.50 ಲಕ್ಷ ಲಂಚ ಆರೋಪ: ಹುಣಸೂರು ಉಪವಿಭಾಗಾಧಿಕಾರಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ

ಮೈಸೂರು: ಮೈಸೂರು ಜಿಲ್ಲೆಯ ಹುಣಸೂರು ಉಪವಿಭಾಗಾಧಿಕಾರಿ ಕಾವ್ಯಾರಾಣಿ ಹಾಗೂ ಅವರ ಆಪ್ತ ಸಹಾಯಕ ಶಿವಕುಮಾರ್ ಅವರನ್ನು ಲಂಚದ ಹಣ ಸ್ವೀಕರಿಸುತ್ತಿದ್ದ…

12 hours ago

ಗೇ ಡೇಟಿಂಗ್ ಆ್ಯಪ್ ಹೆಸರಿನಲ್ಲಿ ಹನಿಟ್ರ್ಯಾಪ್: ಯುವಕರನ್ನು ಬೆದರಿಸಿ ದರೋಡೆ ಮಾಡುತ್ತಿದ್ದ 6 ಮಂದಿಯ ಗ್ಯಾಂಗ್ ಅರೆಸ್ಟ್!

ಪ್ರೀತಿ ಮತ್ತು ಸ್ನೇಹದ ಹೆಸರಿನಲ್ಲಿ ಡೇಟಿಂಗ್ ಆ್ಯಪ್‌ಗಳ ಮೂಲಕ ಯುವಕರನ್ನು ಬಲೆಗೆ ಬೀಳಿಸಿ, ಬಳಿಕ ನಿರ್ಜನ ಪ್ರದೇಶಗಳಿಗೆ ಕರೆಸಿಕೊಂಡು ಬೆದರಿಸಿ…

14 hours ago

ಅಪ್ರಾಪ್ತ ಮಗಳ ಮೇಲೆ ಕಣ್ಣು ಹಾಕಿದ ಪ್ರೇಮಿ; ರೊಚ್ಚಿಗೆದ್ದ ತಾಯಿ ಮರ್ಮಾಂಗ ಕತ್ತರಿಸಿ ತಕ್ಕ ಪಾಠ ಕಲಿಸಿದಳು!

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಮಹಿಳೆಯೊಬ್ಬಳು ತನ್ನ ಪ್ರೇಮಿಯ ಮರ್ಮಾಂಗವನ್ನು ಕತ್ತರಿಸಿರುವ…

19 hours ago

ರಾಂಗ್ ಕಾಲ್‌ನಿಂದ ಆರಂಭವಾದ ಪ್ರೇಮಕಥೆ; ಗಂಡನ ಹತ್ಯೆಗೆ ಸಂಚು! ಪಂಚಾಯಿತಿಯಲ್ಲಿ ಬಯಲಾಯ್ತು ಕಿಲಾಡಿ ಪತ್ನಿಯ ಪ್ಲಾನ್

ಒಂದೇ ಒಂದು ರಾಂಗ್ ಕಾಲ್ ಹತ್ತು ವರ್ಷಗಳ ಸುಖಿ ದಾಂಪತ್ಯವನ್ನು ಛಿದ್ರಗೊಳಿಸಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ಕ್ಷೇತ್ರದಲ್ಲಿ…

19 hours ago

ಅಂಗಡಿಗಳಿಗೆ ಟಾರ್ಗೆಟ್‌: ಗಮನ ಬೇರೆಡೆ ಸೆಳೆದು ಹಣ–ಒಡವೆ ಕಳವು; ಇಬ್ಬರು ಶಂಕಿತರ ಬಗ್ಗೆ ಪೊಲೀಸರ ಎಚ್ಚರಿಕೆ

ಮುಂಡಗೋಡ: ತಾಲೂಕಿನ ಅಂಗಡಿಗಳಿಗೆ ಭೇಟಿ ನೀಡಿ ಅಂಗಡಿ ಮಾಲೀಕರು ಹಾಗೂ ಸಿಬ್ಬಂದಿಯ ಗಮನವನ್ನು ಬೇರೆಡೆ ಸೆಳೆದು ಹಣ, ಒಡವೆ ಸೇರಿದಂತೆ…

1 day ago

ಅನೈತಿಕ ಸಂಬಂಧದ ಶಂಕೆ: ಪತ್ನಿಯನ್ನು ಕೊಂದು ಬಳಿಕ ಪತಿ ಆತ್ಮಹತ್ಯೆ; ಹಾಸನ ಜಿಲ್ಲೆಯಲ್ಲಿ ಬೆಚ್ಚಿಬೀಳಿಸಿದ ಘಟನೆ

ಹಾಸನ: ಪತ್ನಿಗೆ ಬೇರೊಬ್ಬನೊಂದಿಗೆ ಅನೈತಿಕ ಸಂಬಂಧವಿದೆ ಎಂಬ ಶಂಕೆಯಿಂದ ಪತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿ ಬಳಿಕ ಆತ್ಮಹತ್ಯೆಗೆ ಶರಣಾಗಿರುವ…

2 days ago