ಸಿದ್ದಾಪುರ ತಾಲೂಕಿನ ಶೇಡಿಮನೆ ಹೊಳೆಯಿಂದ ಅಕ್ರಮವಾಗಿ ಮರಳು ತೆಗೆಯುವ ಕಾರ್ಯಕ್ಕೆ ಶಂಕರನಾರಾಯಣ ಪೊಲೀಸರು ಶನಿವಾರ ಮುಂಜಾನೆ ತಡೆ ಹಾಕಿದ್ದಾರೆ.
ಪೊಲೀಸರ ಪ್ರಕಾರ, ಆರೋಪಿಗಳು ಹೊಳೆಯಿಂದ ಮರಳನ್ನು ಅಕ್ರಮವಾಗಿ ತೆಗೆದು, ಮೂರು ಟಿಪ್ಪರ್ ಲಾರಿಗಳಲ್ಲಿ ತುಂಬಿ ಕುಳ್ಳುಂಜೆ ಗ್ರಾಮದ ಬಾಕುಡೆ ಪ್ರದೇಶದಲ್ಲಿ ಇಟ್ಟಿದ್ದರು. ಖಚಿತ ಮಾಹಿತಿಯ ಆಧಾರದ ಮೇಲೆ ಪಿಎಸ್ಐ ಯೂನೂಸ್ ಆರ್. ಗಡ್ಡೇಕರ್ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿ, ಮೂರು ಟಿಪ್ಪರ್ಗಳನ್ನು ವಶಕ್ಕೆ ಪಡೆದುಕೊಂಡಿದೆ.
ಈ ಪ್ರಕರಣದಲ್ಲಿ ಚರಣ್, ಮಹೇಶ್ ಹಾಗೂ ಸುಧೀರ್ ಎಂಬ ಮೂವರು ವಿರುದ್ಧ ಮರಳು ಕಳ್ಳತನದ ಆರೋಪ ದಾಖಲಿಸಲಾಗಿದೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
