ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ ಕಿರುಕುಳದಿಂದ ಬೇಸತ್ತ ಪತ್ನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತಳನ್ನು ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಹೊಸವೀರಾಪುರ ಗ್ರಾಮದ ಮೂಲದ ಮಂಜುಳಾ (38) ಎಂದು ಗುರುತಿಸಲಾಗಿದೆ. ಅವರು ಸೊರಬ ಪುರಸಭೆಯ ಮಾಜಿ ಅಧ್ಯಕ್ಷ ಹಾಗೂ Bharatiya Janata Party (ಬಿಜೆಪಿ) ಮುಖಂಡ ಪ್ರಭು ಮೇಸ್ತ್ರಿ ಅವರ ಪತ್ನಿಯಾಗಿದ್ದರು.

ಆರೋಪದ ಪ್ರಕಾರ, ಪ್ರಭು ಮೇಸ್ತ್ರಿ ತಮ್ಮ ಹಾರ್ಡ್‌ವೇರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರು. ಈ ಸಂಬಂಧವನ್ನು ಕೊನೆಗಾಣಿಸುವಂತೆ ಕುಟುಂಬದವರು ಹಾಗೂ ಹಿರಿಯರು ಹಲವು ಬಾರಿ ಮನವಿ ಮಾಡಿದರೂ, ಅವರು ಅದನ್ನು ಮುಂದುವರಿಸಿದ್ದರೆಂದು ತಿಳಿದುಬಂದಿದೆ. ಇದೇ ವಿಚಾರವಾಗಿ ಪತ್ನಿ ಮಂಜುಳಾ ಅವರಿಗೆ ಪದೇಪದೇ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಲಾಗುತ್ತಿತ್ತು ಎಂಬ ಆರೋಪವೂ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಮೃತಳ ತಾಯಿ ಸೊರಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರು ಆಧರಿಸಿ ಪ್ರಭು ಮೇಸ್ತ್ರಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Related News

error: Content is protected !!