ಬಳ್ಳಾರಿ: ನಗರದ ಹೊರವಲಯದಲ್ಲಿರುವ ಪ್ರತಿಷ್ಠಿತ ಖಾಸಗಿ ಕಾಲೇಜಿನ ಉಪನ್ಯಾಸಕನೊಬ್ಬ ತಾನು ಮದುವೆಯಾಗಿಲ್ಲ ಎಂದು ನಂಬಿಸಿ ವಿದ್ಯಾರ್ಥಿನಿಯೊಂದಿಗೆ ಆತ್ಮೀಯತೆ ಬೆಳೆಸಿ, ಬಳಿಕ ಅತ್ಯಾಚಾರ ಎಸಗಿ ವಂಚಿಸಿರುವ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದಾನೆ.

ಬಂಧಿತ ಆರೋಪಿಯನ್ನು ಮೂಲತಃ ಆಂಧ್ರ ಪ್ರದೇಶದ ರವಿಕಿರಣ್ (43) ಎಂದು ಗುರುತಿಸಲಾಗಿದೆ. ಆತ ತಾಳೂರು ರಸ್ತೆಯ ಶ್ರೀಧರಗಡ್ಡೆ ಗ್ರಾಮ ಸಮೀಪದ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ 2025ರ ಜೂನ್ 2ರಿಂದ ಸಸ್ಯಶಾಸ್ತ್ರ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದನು.

ಆರೋಪಿ ವಿದ್ಯಾರ್ಥಿನಿಯೊಂದಿಗೆ ಸಲುಗೆ ಬೆಳೆಸಿಕೊಂಡು, ನಗರದ ಹೊರವಲಯದಲ್ಲಿ ಕಾರಿನಲ್ಲೇ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಅಲ್ಲದೆ, ಘಟನೆಯ ವೇಳೆ ಫೋಟೋಗಳನ್ನು ತೆಗೆದು, ಅವುಗಳನ್ನು ಬಹಿರಂಗಪಡಿಸುವುದಾಗಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ವಿದ್ಯಾರ್ಥಿನಿಯ ಪೋಷಕರು ಆರೋಪಿಸಿದ್ದಾರೆ.

ಈ ಸಂಬಂಧ ವಿದ್ಯಾರ್ಥಿನಿಯ ಪೋಷಕರು ನೀಡಿದ ದೂರಿನ ಮೇರೆಗೆ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಳಿಕ ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣದ ಕುರಿತು ಮಹಿಳಾ ಠಾಣೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Related News

error: Content is protected !!