ಧಾರವಾಡ: ಜಿಲ್ಲೆಯ ಕುಂದಗೋಳ ತಾಲೂಕಿನ ಗುಡಿಗೇರಿ ಗ್ರಾಮದ ಕೆಳಗಿನ ಬಸ್ ನಿಲ್ದಾಣದ ಸಮೀಪ ಅಕ್ರಮವಾಗಿ ಮಟ್ಕಾ (ಓಸಿ) ಸಂಖ್ಯೆಗಳನ್ನು ಬರೆಯುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ, ನಗದು ಹಣ ಸೇರಿದಂತೆ ದಂಧೆಗೆ ಬಳಸುತ್ತಿದ್ದ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ನಿಂಗಪ್ಪ ರಾಮಪ್ಪ ಭದ್ರಾಪೂರ್ ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿಯ ಆಧಾರದ ಮೇಲೆ ಜುಲೈ 24ರಂದು ದಾಳಿ ನಡೆಸಿದ ಗುಡಿಗೇರಿ ಠಾಣೆ ಪೊಲೀಸರು, ಆರೋಪಿಯನ್ನು ಸ್ಥಳದಲ್ಲೇ ವಶಕ್ಕೆ ಪಡೆದರು.

ಆರೋಪಿಯಿಂದ ₹1,500 ನಗದು ಹಾಗೂ ಓಸಿ ಬರೆಯಲು ಬಳಸುತ್ತಿದ್ದ ವಿವಿಧ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ. ಈ ಸಂಬಂಧ ಗುಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.

ವರದಿ: ಶಿವರಾಜ್ ಪಿ.ಆರ್.

Related News

error: Content is protected !!