ಕೊಟ್ಟ ಸಾಲವನ್ನು ಸ್ನೇಹಿತರು ವಾಪಸ್ ಹಿಂದಿರುಗಿಸಿಲ್ಲ ಎಂದು ಮನನೊಂದು ಪಶುವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಂಕಣವಾಡಿ ಗ್ರಾಮದಲ್ಲಿ ನಡೆದಿದೆ.
ನಂದೆಪ್ಪ ಬಾಗೇವಾಡಿ ಮೃತ ಪಶುವೈದ್ಯ. ಬನಹಟ್ಟಿ ತಾಲೂಕಿನ ಹಿಪ್ಪರಗಿ ನಿವಾಸಿಯಾಗಿರುವ ನಂದೆಪ್ಪ ಅವರು ತನ್ನ ಓರ್ವ ಸಹೋದ್ಯೋಗಿ ಪಶುವೈದ್ಯನಿಗೆ 5 ಲಕ್ಷ ರೂಪಾಯಿ ಹಾಗೂ ಮತ್ತೊಬ್ಬ ಗೆಳೆಯನಿಗೆ 7 ಲಕ್ಷ ರೂಪಾಯಿ ಸಾಲು ನೀಡಿದ್ದರು. ಆದರೆ ಸಾಲ ಹಿಂದಿರುಗಿಸದ ಹಿನ್ನಲೆ ಮನೆಯಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಡೆತ್​ನೋಟ್ ಪತ್ತೆಯಾಗಿದ್ದು, ಇದರಲ್ಲಿ ಸಾಲ ನೀಡಿದ್ದರ ಬಗ್ಗೆ ಉಲ್ಲೇಖಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಜಮಖಂಡಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Related News

error: Content is protected !!