ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಕೆಂಪವಾಡ ಗ್ರಾಮದಲ್ಲಿ ಆಕಳು ಕಾಲು ಜಾರಿ ಬಾವಿಯಲ್ಲಿ ಬಿದ್ದಿರುವ ಘಟನೆ ದಿನಾಂಕ 21/07/2022 ರಂದು ಸಮಯ 11:09 ಕ್ಕೆ ಗುರುವಾರ ನಡೆದಿದೆ. ತಕ್ಷಣ ಊರಿನ ಗ್ರಾಮಸ್ಥರು ಅಥಣಿ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ತಿಳಿದ ತಕ್ಷಣ ಸ್ಥಳಕ್ಕೆ ಜಲವಾಹನ ಮತ್ತು ಸಿಬ್ಬಂದಿಯವರು ರಕ್ಷಣಾ ಸಾಮಗ್ರಿಗಳೊಂದಿಗೆ ಶ್ರೀ ವಾಯ್.ಬಿ.ಕೌಜಲಗಿ ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ರವರ ನೇತೃತ್ವದಲ್ಲಿ ಸಿಬ್ಬಂದಿಯವರು ಒಳಗೂಡಿ ಘಟನಾ ಸ್ಥಳಕ್ಕೆ ಹೋಗಿ ನೋಡಲಾಗಿ ತೆರೆದ ನೀರಿರುವ ಬಾವಿಯಲ್ಲಿ ಅಂದಾಜು 70ರಿಂದ 80 ಅಡಿ ಆಳದಲ್ಲಿ ಆಕಳು ಕಾಲು ಜಾರಿ ಬಾವಿಯಲ್ಲಿ ಬಿದ್ದಿರುವುದನ್ನು ಸುಮಾರು 01 ಗಂಟೆ 20 ನಿಮಿಷಗಳ ಕಾಲ ಕಷ್ಟಕರ ಕಾರ್ಯಚರಣೆಯಲ್ಲಿ ಆಕಳನ್ನು ಜೀವಂತವಾಗಿ ರಕ್ಷಣೆ ಮಾಡಲಾಗಿದೆ.

 

 

Related News

error: Content is protected !!