ಮಂಡ್ಯ ಜಿಲ್ಲೆಯ ಮದ್ದೂರು ಪೊಲೀಸ್‌ ಠಾಣೆಯ ಇಬ್ಬರು ಕಾನ್‌ಸ್ಟೆಬಲ್‌ಗಳು, ಸಮನ್ಸ್‌ ಮತ್ತು ವಾರಂಟ್‌ಗಳನ್ನು ಜಾರಿ ಮಾಡದೆ, ನ್ಯಾಯಾಲಯಕ್ಕೆ ಸುಳ್ಳು ವರದಿಗಳನ್ನು ನೀಡಿದ ಆರೋಪದ ಮೇಲೆ ಅಮಾನತುಗೊಂಡಿದ್ದಾರೆ.
2023ರಲ್ಲಿ, ಮದ್ದೂರು ತಾಲ್ಲೂಕಿನ ಚನ್ನಸಂದ್ರ ಗ್ರಾಮದಲ್ಲಿ ಜಮೀನು ಗಲಾಟೆ ಸಂಬಂಧ ಪ್ರಕರಣ ದಾಖಲಾಗಿತ್ತು. ಈ ಸಂದರ್ಭದಲ್ಲಿ, ಕಾನ್‌ಸ್ಟೆಬಲ್‌ಗಳು ಸಮನ್ಸ್‌ ಮತ್ತು ವಾರಂಟ್‌ಗಳನ್ನು ಜಾರಿ ಮಾಡಬೇಕಾದರೂ, ಅವರು ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿಸಿ ದೂರುದಾರರೊಂದಿಗೆ ಕೈಜೋಡಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ, ಮದ್ದೂರು ಪೊಲೀಸ್‌ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ರವಿ ಮತ್ತು ಕಾನ್‌ಸ್ಟೆಬಲ್‌ ವಿಷ್ಣುವರ್ಧನ ಅವರನ್ನು ಜಿಲ್ಲಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅಮಾನತು ಮಾಡಿದ್ದಾರೆ.

Related News

error: Content is protected !!