ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರಬೆಟ್ಟ-ಕೌದಳ್ಳಿ ಬಳಿ ಕಾಡಾನೆಯ ದಂತವನ್ನು ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ತಮಿಳುನಾಡಿನ ಶಕ್ತಿವೇಲು (45) ಮತ್ತು ಹನೂರಿನ ನಾಗೇಂದ್ರಬಾಬು (63) ಎಂದು ಗುರುತಿಸಲಾಗಿದೆ.ಖಚಿತ ಮಾಹಿತಿಯ ಮೇರೆಗೆ, ಆರೋಪಿಗಳು ಬೈಕ್‌ನಲ್ಲಿ ಆನೆ ದಂತವನ್ನು ಮಾರಾಟಕ್ಕಾಗಿ ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ರಾಮಾಪುರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಎಸ್‌ಐ ಲೋಕೇಶ್ ಮತ್ತು ಸಿಬ್ಬಂದಿ ಗಿರೀಶ್, ಮಹೇಂದ್ರ, ಲಿಯಾಖತ್ ಖಾನ್, ಪರಶುರಾಮ್ ಮತ್ತು ಮಕಂದರ್ ತಂಡ, ಕೌದಳ್ಳಿ-ಮಹದೇಶ್ವರಬೆಟ್ಟ ಮುಖ್ಯರಸ್ತೆಯಲ್ಲಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದರು. ತಪಾಸಣೆಯ ವೇಳೆ ಚೀಲದಲ್ಲಿ ಆನೆ ದಂತ ಪತ್ತೆಯಾಗಿದೆ.ಈ ಘಟನೆಗೆ ಸಂಬಂಧಿಸಿದಂತೆ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ

Related News

error: Content is protected !!