ದೆಹಲಿಯ ಓಖ್ಲಾ ಪ್ರದೇಶದಲ್ಲಿ ಗಣರಾಜ್ಯೋತ್ಸವದ ಭದ್ರತಾ ಪರಿಧಿಯಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ, ಅಜಾಗರೂಕವಾಗಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಇಬ್ಬರು ಯುವಕರ ಮೇಲೆ ಪೊಲೀಸರು ಮೋಟಾರು ವಾಹನ ಕಾಯ್ದೆ ಉಲ್ಲಂಘನೆಯ ದೋಷಾರೋಪ ಮಾಡಿದ್ದು, ₹20,000 ದಂಡ ವಿಧಿಸಿದ್ದಾರೆ.

ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಈ ಇಬ್ಬರು ಲೈಸನ್ಸ್ ಇಲ್ಲದೆ ಬೈಕ್ ಚಲಾಯಿಸುತ್ತಿದ್ದರು. ತಪಾಸಣೆಗಾಗಿ ಅವರನ್ನು ತಡೆದು ನಿಲ್ಲಿಸಿದಾಗ, ಈ ಯುವಕರಲ್ಲಿ ಒಬ್ಬ ತನ್ನನ್ನು ಎಎಪಿ ಶಾಸಕ ಅಮಾನತುಲ್ಲಾ ಖಾನ್ ಅವರ ಪುತ್ರ ಎಂದು ಪರಿಚಯಿಸಿಕೊಂಡು, ಪೊಲೀಸರೊಂದಿಗೆ ಅವಾಚ್ಯ ಶಬ್ದಗಳಲ್ಲಿ ಮಾತನಾಡಿದ್ದಾನೆ.

ಆದರೆ, ಅಧಿಕಾರಿಗಳು ಡ್ರೈವಿಂಗ್ ಲೈಸನ್ಸ್ ಮತ್ತು ಗುರುತಿನ ಚೀಟಿ ಕೇಳಿದಾಗ, ಯುವಕರು ಅದನ್ನು ನೀಡಲು ನಿರಾಕರಿಸಿದ್ದಾರೆ ಹಾಗೂ “ಅದರ ಅಗತ್ಯವಿಲ್ಲ” ಎಂದು ಉತ್ತರಿಸಿದ್ದಾರೆ. ಪೊಲೀಸರು ಮುಂದಿನ ಕ್ರಮವಾಗಿ ಅವರ ಬೈಕ್ ವಶಪಡಿಸಿಕೊಂಡು ₹20,000 ದಂಡವನ್ನು ವಿಧಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕಾನೂನಾತ್ಮಕ ಕ್ರಮ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related News

error: Content is protected !!