ಮಂಗಳೂರು: ಮುಡಿಪು ಮಾರ್ಗವಾಗಿ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ದಲ್ಲಿ ನಿದ್ದೆಹೋಗಿದ್ದ ಯುವತಿಗೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ  ಬಸ್ ನಿರ್ವಾಹಕನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನು ಬಾಗಲಕೋಟೆ ಜಿಲ್ಲೆ ಮೂಲದ ಪ್ರದೀಪ್ ಎಂಬಾತನೆಂಬ ಮಾಹಿತಿ ಲಭ್ಯವಾಗಿದೆ. ಬುಧವಾರ ರಾತ್ರಿ ಮುಡಿಪುವಿನಿಂದ ಮಂಗಳೂರಿಗೆ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಯುವತಿ ಬಸ್‌ನಲ್ಲೇ ನಿದ್ದೆಮಗ್ನವಾಗಿದ್ದ ವೇಳೆ, ನಿರ್ವಾಹಕ ಆಕೆಯ ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸಲು ಯತ್ನಿಸಿದ. ಈ ಕೃತ್ಯವನ್ನು ಗಮನಿಸಿದ್ದ ಮತ್ತೊಬ್ಬ ಪ್ರಯಾಣಿಕನು ಮೊಬೈಲ್ ಫೋನ್‌ನಲ್ಲಿ ಈ ದೃಶ್ಯವನ್ನು ದಾಖಲಿಸಿ, , ವಿಡಿಯೋ ವೈರಲ್  ಮಾಡಿದ್ದಾರೆ.

ವೀಡಿಯೋ ವೈರಲ್ ಆದ ತಕ್ಷಣ ಪೊಲೀಸರು ಸ್ಪಂದಿಸಿ ಪ್ರದೀಪ್ ಎಂಬ ನಿರ್ವಾಹಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಮುಂದಿನ ತನಿಖೆ ಜಾರಿಯಲ್ಲಿದೆ.

ಸರ್ಕಾರಿ ಬಸ್‌ನಲ್ಲಿ ಈ ರೀತಿ ನಡೆದಿರುವ ಅಸಭ್ಯ ನಡೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಬಂಧಿತ ಇಲಾಖೆ ನಿರ್ವಾಹಕನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

Related News

error: Content is protected !!