ಕಳೆದ ಕೆಲವು ತಿಂಗಳಿಂದ ಬಹುಮಟ್ಟಿಗೆ ಗಮನಸೆಳೆದಿದ್ದ ಐಶ್ವರ್ಯಾ ಗೌಡ ಪ್ರಕರಣಕ್ಕೆ ಇದೀಗ (ಇಡಿ) ಹೊಸ ತಿರುವು ನೀಡಿದ್ದು, ಇಂದು ಅವರ ಮನೆಗಳಿಗೆ ದಾಳಿ ನಡೆಸಲಾಗಿದೆ. ತಮ್ಮನ್ನು ಡಿ.ಕೆ. ಸುರೇಶ್ ಅವರ ಸಹೋದರಿ ಎಂದು ಪರಿಚಯಿಸಿ ಮೋಸ ಎಸಗಿದ ಆರೋಪ ಎದುರಿಸುತ್ತಿರುವ ಐಶ್ವರ್ಯಾ ಗೌಡ ಇದೀಗ ಇಡಿಯ ನಿಗಾ ಸೆಳೆದುಕೊಂಡಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಐಶ್ವರ್ಯಾ ಮನೆ ಹಾಗೂ ಬೆಂಗಳೂರಿನ ನಿವಾಸಗಳ ಮೇಲೆ ಈ ದಾಳಿ ನಡೆದಿದೆ. ಇಡಿ ಅಧಿಕಾರಿಗಳು ದಾಖಲೆಗಳು, ಹಣಕಾಸು ವ್ಯವಹಾರಗಳು ಹಾಗೂ ಇತರ ಮಹತ್ವದ ವಿವರಗಳ ಪರಿಶೀಲನೆ ನಡೆಸಿದ್ದಾರೆ.

ಈ ನಡುವೆಯೇ, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಯವರ ಮನೆ ಮೇಲೆಯೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ದಾಖಲೆ ಪರಿಶೀಲನೆ ನಡೆದಿದೆ. ಈ ದಾಳಿಗೆ ಯಾವ ಪ್ರಕರಣದ ಸಂಪರ್ಕವಿದೆ ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.

ಐಶ್ವರ್ಯಾ ಗೌಡ ವಿರುದ್ಧ ವನಿತಾ ಎಸ್. ಐತಾಳ್ ಎಂಬ ಚಿನ್ನದ ಅಂಗಡಿ ಮಾಲಕಿ ನೀಡಿರುವ ದೂರಿನ ಪ್ರಕಾರ, ಸುಮಾರು 9.82 ಕೋಟಿ ರೂ. ಮೌಲ್ಯದ 14 ಕೆಜಿ 660 ಗ್ರಾಂ ಚಿನ್ನವನ್ನು ವಂಚನೆ ಮೂಲಕ ಕಬಳಿಸಲಾಗಿದೆ. ಐಶ್ವರ್ಯಾ ಗೌಡ ಅವರು ರಾಜಕೀಯ ಸಂಬಂಧಗಳನ್ನು ನಂಬಿಸಿ ಚಿನ್ನ ಪಡೆದಿದ್ದಾರೆ ಎಂಬ ಗಂಭೀರ ಆರೋಪ ದಾಖಲಾಗಿದೆ. ಈ ಬಗ್ಗೆ ಸಾಕ್ಷ್ಯವಾಗಿ ಆಡಿಯೋ ಕ್ಲಿಪಿಂಗ್ ಹಾಗೂ ಇತರ ದಾಖಲೆಗಳು ಪೊಲೀಸರು ಬಳಿ ದಾಖಲಾಗಿವೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸಕ್ರಿಯ ತನಿಖೆ ಮುಂದುವರೆಸಿದ್ದು, ಮತ್ತಷ್ಟು ರಾಜಕೀಯ ಮುಖಂಡರು ಕೂಡಾ ಇಡಿಯ ತಪಾಸಣೆಯ ದಾರಿಯಲ್ಲಿದ್ದಾರೆ ಎಂಬ ಅಂದಾಜುಗಳು ಹರಡುತ್ತಿದ್ದವೆಯೆಂದು ಮೂಲಗಳು ತಿಳಿಸಿದ್ದಾರೆ.

Related News

error: Content is protected !!