ಕಾರ್ಕಳ, ಉಡುಪಿ ಜಿಲ್ಲೆ: ಕಾರಿನಲ್ಲಿ ಕುಳಿತುಕೊಂಡೇ ತಲೆಗೆ ಗುಂಡು ಹೊಡೆದು ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ಸಮೀಪದ ನಿಟ್ಟೆ ಬಳಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ಮಂಗಳೂರಿನ ಉದ್ಯಮಿ ಎನ್.ಆರ್. ದಿಲೀಪ್ ಎಂದು ಗುರುತಿಸಲಾಗಿದೆ.

ಈ ದಾರುಣ ಘಟನೆ ನಿಟ್ಟೆಯ ದೂಪದ ಕಟ್ಟೆಯ ಹೆದ್ದಾರಿಯಲ್ಲಿ ನಡೆದಿದೆ. ದಿಲೀಪ್ ಅವರು ತಮ್ಮ ಕಾರಿನೊಳಗೆ ಮೂಲಕ ತಲೆಗೆ ಗುಂಡು ಹೊಡೆದಿದ್ದಾರೆ. ಘಟನೆಯ ಮಾಹಿತಿ ಲಭುತ್ತಿದ್ದಂತೆ ಕಾರ್ಕಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ, ಘಟನಾ ಸ್ಥಳವನ್ನು ಪರಿಶೀಲಿಸಿದ್ದಾರೆ. ಕಾರಿನಲ್ಲಿದ್ದ ರಿವಾಲ್ವರ್‌ ಹಾಗೂ ಒಂದು ಗುಂಡನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನಲ್ಲಿ ವ್ಯಾಪಾರ ನಡೆಸುತ್ತಿದ್ದ ದಿಲೀಪ್ ಅವರು ಇತ್ತೀಚೆಗೆ ವ್ಯಾಪಾರದಲ್ಲಿ ಭಾರಿ ನಷ್ಟ ಅನುಭವಿಸುತ್ತಿದ್ದು, ಸಾಲಗಾರರ ಒತ್ತಡದಿಂದ ಮಾನಸಿಕ ತೊಂದರೆಗೆ ಒಳಗಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲೇ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ.

ದಿಲೀಪ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕಳಿಸಲಾಗಿದ್ದು, ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

error: Content is protected !!