ಹುಬ್ಬಳ್ಳಿಯ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಿಲ್ಲಿಸಲಾಗಿದ್ದ ಕ್ರೇನ್‌ನ್ನು ಕಳ್ಳತನ ಮಾಡಿ, ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಹಳಿಯಾಳ ತಾಲೂಕಿನ ಅಜಂಗಾವ ಗ್ರಾಮದ ರಘುನಾಥ ಕದಂ ಅವರ ಮಾಲಕತ್ವದ ಈ ಕ್ರೇನ್‌ನ್ನು ಖಾನಾಪುರ ತಾಲೂಕಿನ ನಂದಗಾವ ಗ್ರಾಮದ ಸೈಫುಲ್ಲಾ ಕಮಾಲಸಾಹೇಬ ಮುಲ್ಲಾ ಎಂಬಾತ ಕದಿದಿದ್ದಾನೆ. ಈ ಕ್ರೇನ್‌ ಬೆಲೆ ಸುಮಾರು 14 ಲಕ್ಷ ರೂಪಾಯಿಯಾಗಿದ್ದು, ಸಾಲಭಾರದ ಕಾರಣದಿಂದಾಗಿ ಆರೋಪಿಯು ಈ ಕೃತ್ಯಕ್ಕೆ ಮುಂದಾಗಿದ್ದನೆಂದು ತಿಳಿದುಬಂದಿದೆ.

ಪ್ರಾರಂಭದಲ್ಲಿ ಯಾವುದೇ ಸುಳಿವಿಲ್ಲದ ಈ ಪ್ರಕರಣದಲ್ಲಿ, ಪೊಲೀಸರು ಸಿಸಿಟಿವಿ ಕ್ಯಾಂಮೆರಾಗಳ ಸಹಾಯದಿಂದ ಆರೋಪಿಯ ಹಾದಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಅದರ ಆಧಾರದಲ್ಲಿ ಆರೋಪಿ ಇರುವ ಸ್ಥಳವನ್ನು ಗುರುತಿಸಿ ಬಂಧಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಇನ್ಸಪೆಕ್ಟರ್ ಮುರಗೇಶ ಚೆನ್ನಣ್ಣನವರ ನೇತೃತ್ವದ ತಂಡ ಈ ಪ್ರಕರಣವನ್ನು ಯಶಸ್ವಿಯಾಗಿ

ಪಿಎಸ್‌ಐ ಎಂ.ಡಿ. ಪಾಟೀಲ ಹಾಗೂ ಸಿಬ್ಬಂದಿಗಳಾದ ಎಚ್.ಬಿ. ಐಹೊಳೆ, ಅಬ್ರಹಾರ್ ಪಾಟೀಲ, ಅಬ್ದುಲ ಕಾಕರ, ಚೆನ್ನಪ್ಪ ಬಳ್ಳೊಳ್ಳಿ, ಮಹಾಂತೇಶ ಮದ್ದಿನ, ಗಿರೀಶ ತಿಪ್ಪಣಷನವರ, ತಿಪ್ಪಣ್ಣ ಆಲೂರ ಹಾಗೂ ತಾಂತ್ರಿಕ ಸಿಬ್ಬಂದಿಗಳಾದ ಆರೀಫ್ ಗೋಲಂದಾಜ್ ಮತ್ತು ವಿಠ್ಠಲ ಡಂಗನವರ ಈ ಕಾರ್ಯಾಚರಣೆಯಲ್ಲಿ ಭಾಗಿ ಆಗಿದ್ದರು.

Related News

error: Content is protected !!