ಉತ್ತರ ಪ್ರದೇಶದ ಬರೇಲಿಯಲ್ಲಿ ಪೊಲೀಸರು ನಡೆಸಿದ ಏಕಾಏಕಿ ದಾಳಿಯಲ್ಲಿ, ಪ್ರಭಾವಶಾಲಿ ರಾಜಕೀಯ ನಾಯಕರೊಂದಿಗಿನ ಸಂಪರ್ಕ ಹೊಂದಿರುವ ಹೋಟೆಲ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಬೆಳಕಿಗೆ ಬಂದಿದೆ. ಕಳೆದ ಕೆಲ ದಿನಗಳಿಂದ ಶಂಕೆ ವ್ಯಕ್ತವಾಗುತ್ತಿದ್ದ ಹಿನ್ನೆಲೆ, ಪೊಲೀಸರು ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದಾರೆ.
ದಾಳಿಯಲ್ಲಿ ಹೋಟೆಲ್ನೊಳಗೆ ಅಕ್ರಮವಾಗಿ ವಾಸ್ತವ್ಯ ಹೊಂದಿದ್ದ ಏಳು ಮಹಿಳೆಯರು ಹಾಗೂ ಮೂವರು ಯುವಕರನ್ನು ಬಂಧಿಸಲಾಗಿದೆ. ಬಂಧಿತ ಮಹಿಳೆಯರು ಪಶ್ಚಿಮ ಬಂಗಾಳ, ಜಾರ್ಖಂಡ್, ಲಕ್ನೋ, ಬುಡೌನ್ ಮತ್ತು ರಾಜಸ್ಥಾನ ರಾಜ್ಯಗಳಿಗೆ ಸೇರಿದವರಾಗಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸರ ಪ್ರಕಾರ, ಈ ಜಾಲವನ್ನು ಚಲಾಯಿಸುತ್ತಿದ್ದ ಪ್ರಮುಖ ಮಾಫಿಯಾ ಗುಂಪು ಇನ್ನೂ ಪತ್ತೆಯಾಗಿಲ್ಲ. ದಂಧೆಯ ಹಿಂದೆ ಇರುವ ಬೃಹತ್ ನೆಟ್ವರ್ಕ್ ಹಾಗೂ ಹೋಟೆಲ್ ಮಾಲಿಕನ ಪಾತ್ರದ ಬಗ್ಗೆ ತನಿಖೆ ಮುಂದುವರಿಸಲಾಗಿದ್ದು, ಪ್ರಮುಖ ಆರೋಪಿಗಳನ್ನು ಬಂಧಿಸಲು ವಿಶೇಷ ತಂಡವನ್ನು ರಚಿಸಲಾಗಿದೆ.
ಈ ಬೆಳವಣಿಗೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಹುಟ್ಟಿಸಿರುವುದು ಹಾಗೂ ಬಿಜೆಪಿ ನಾಯಕರ ಹೋಟೆಲ್ ಎಂಬ ಮಾಹಿತಿಯು ಪ್ರಕರಣಕ್ಕೆ ಮತ್ತಷ್ಟು ತೀವ್ರತೆ ನೀಡಿದೆ.
