ಬೆಂಗಳೂರು ನಗರದಲ್ಲಿ ಲಂಚ ಹಗರಣಕ್ಕೆ ಸಂಬಂಧಿಸಿದಂತೆ ಬೆಳವಣಿಗೆ ಕಂಡಿದೆ. ಕೆಐಎಡಿಬಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸರ್ವೆ ಮೇಲ್ವಿಚಾರಕ (ಸೂಪರ್ ವೈಸರ್) ನರೇಂದ್ರ ಕುಮಾರ್, ಅನುಮೋದನೆಗಾಗಿ 1.50 ಲಕ್ಷ ರೂಪಾಯಿ ಲಂಚ ಪಡೆಯುತ್ತಿರುವ ವೇಳೆ ಲೋಕಾಯುಕ್ತ ಪೊಲೀಸರ ಜಾಲಕ್ಕೆ ಬಿದ್ದು ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

ರವಿ ಎಂಬ ವ್ಯಕ್ತಿ, ಬೆಂಗಳೂರು ಪ್ರದೇಶದ ಕೆಐಎಡಿಬಿಗೆ ತನ್ನ ಸ್ಕೆಚ್ ಸಲ್ಲಿಸಿದ್ದರು. ಅರ್ಜಿಗೆ ಅನುಮೋದನೆ ನೀಡುವ ಬಗ್ಗೆ ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲೇ, ನರೇಂದ್ರ ಕುಮಾರ್ 1.50 ಲಕ್ಷ ರೂ. ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಲಂಚದ ಒತ್ತಡಕ್ಕೆ ಗುರಿಯಾದ ರವಿ, ತಕ್ಷಣವೇ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದರು.

ಈ ದೂರಿನ ಹಿನ್ನೆಲೆಯಲ್ಲಿ, ಲೋಕಾಯುಕ್ತ ಎಸ್‌ಪಿ ಡಾ. ವಂಶಿ ಕೃಷ್ಣ ಅವರ ಮಾರ್ಗದರ್ಶನದಲ್ಲಿ ಪಿಐ ಅನೀಲ್ ಕುಮಾರ್, ಪ್ರಶಾಂತ್ ಹಾಗೂ ಅಂಜನ್ ಕುಮಾರ್ ನೇತೃತ್ವದ ವಿಶೇಷ ತಂಡದ ಪೊಲೀಸರು ನಿಗದಿತ ಸಮಯದಲ್ಲಿ ದಾಳಿ ನಡೆಸಿ, ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ನರೇಂದ್ರ ಕುಮಾರ್ ಅವರನ್ನು ಬಲೆಗೆಳ್ಳಿದರು.

ಪ್ರಸ್ತುತ ಆರೋಪಿಯನ್ನು ಬಂಧಿಸಿದ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಹಂತದ ತನಿಖೆ ಮುಂದುವರೆಸಿದ್ದಾರೆ. ಪ್ರಾಮಾಣಿಕತೆ ಹಾಗೂ ಸಾರ್ವಜನಿಕ ಸೇವೆಯಲ್ಲಿ ಪಾರದರ್ಶಕತೆ ಕಾಪಾಡುವ ದೃಷ್ಟಿಯಿಂದ ಈ ಕಾರ್ಯಾಚರಣೆಗೆ ಸಾರ್ವಜನಿಕರಿಂದ ಶ್ಲಾಘನೆ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

Related News

error: Content is protected !!