ಹುಬ್ಬಳ್ಳಿ: ನಗರದಲ್ಲಿ ನಡೆಯುತ್ತಿದ್ದ ಪೈಪ್‌ಲೈನ್ ಕಾಮಗಾರಿಯ ವೇಳೆ ಭೀಕರ ದುರಂತ ಸಂಭವಿಸಿದ್ದು, ಮಣ್ಣು ಕುಸಿತದಿಂದ ಒಬ್ಬ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ. ಈ ದುರ್ಘಟನೆ ಹುಬ್ಬಳ್ಳಿಯ ಅರಳಿಕಟ್ಟಿ ಓಣಿಯಲ್ಲಿ ಗುರುವಾರ ನಡೆದಿದೆ.

ಮೃತಪಟ್ಟ ಕಾರ್ಮಿಕನನ್ನು 35 ವರ್ಷದ ಚೇತನ್ ಜಾಧವ್ ಎಂದು ಗುರುತಿಸಲಾಗಿದೆ. ಚೇತನ್ ಹುಬ್ಬಳ್ಳಿಯ ತಾಜನಗರ್ ನಿವಾಸಿಯಾಗಿದ್ದ. ಇನ್ನೊಬ್ಬ ಗಾಯಗೊಂಡ ಕಾರ್ಮಿಕನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಧಾರವಾಡ-ಹುಬ್ಬಳ್ಳಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಈ ನೀರಿನ ಪೈಪ್‌ಲೈನ್ ಕಾಮಗಾರಿ ನಡೆಯುತ್ತಿದ್ದು, ಎಲ್ ಅಂಡ್ ಟಿ (L&T) ಕಂಪನಿಗೆ ಈ ಯೋಜನೆಯ ಗುತ್ತಿಗೆ ನೀಡಲಾಗಿದೆ. ಕಾಮಗಾರಿಯ ವೇಳೆ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೆ ನಿರ್ಲಕ್ಷ್ಯದಿಂದ ಕೆಲಸ ನಡೆಸಲಾಗಿದೆ ಎಂಬ ಗಂಭೀರ ಆರೋಪಗಳು ಉದ್ಭವವಾಗಿವೆ.

ಸ್ಥಳೀಯರು ಮತ್ತು ಕಾರ್ಮಿಕ ಸಂಘಟನೆಗಳು ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು,  ಈ ಸಂಬಂಧ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಆಕ್ರೋಶ ವ್ಯಕ್ತವಾಗಿದೆ.

ಈ ಘಟನೆ ಬಳಿಕ ಪಾಲಿಕೆ ಹಾಗೂ ಗುತ್ತಿಗೆದಾರ ಸಂಸ್ಥೆ ಎಲ್ ಅಂಡ್ ಟಿ ಮೇಲ್ನೋಟದಲ್ಲಿ ಇದ್ದರೂ ನಿರ್ಲಕ್ಷ್ಯತೆಯೊಂದಿಗೆ ಕಾಮಗಾರಿ ನಡೆಸುತ್ತಿರುವುದರ ಪರಿಣಾಮ ಈ ರೀತಿಯ ದುರಂತಗಳು ಸಂಭವಿಸುತ್ತಿವೆ ಎಂಬ ಚರ್ಚೆ ಸಾರ್ವಜನಿಕ ವಲಯದಲ್ಲಿ ನಡೆಯುತ್ತಿದೆ.

ವರದಿ: ಶಿವರಾಜ್ ಪಿ.ಆರ್.

Leave a Reply

Your email address will not be published. Required fields are marked *

Related News

error: Content is protected !!