ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಉಟಕನೂರು ಗ್ರಾಮ ಪಂಚಾಯಿತಿಯಲ್ಲಿ ಸೇವೆ ನಿರ್ವಹಿಸುತ್ತಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಶ್ವೇತಾ ಕುಲಕರ್ಣಿ ಅವರನ್ನು ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿರುವ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಈ ಸಂಬಂಧ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ರಾಹುಲ್ ತುಕಾರಾಂ ಪಾಂಡ್ವೆ ಅವರು ಗುರುವಾರದಂದು ಅಮಾನತು ಆದೇಶ ಹೊರಡಿಸಿದ್ದಾರೆ.

ಪಿಡಿಒ ಶ್ವೇತಾ ಕುಲಕರ್ಣಿ ಅವರು ಮೇಲಧಿಕಾರಿಗಳ ಸೂಚನೆಗಳನ್ನು ಪಾಲಿಸದೇ, ತಮ್ಮಸ್ವಂತ ಮೆಚ್ಚಿನಂತೆ ಆರ್ಥಿಕ ವ್ಯವಹಾರಗಳಲ್ಲಿ ತೊಡಗಿದ್ದು, ಕೆಲ ಹಣಕಾಸು ವ್ಯವಹಾರಗಳಲ್ಲಿ ದುರ್ನಿಯೋಗ ನಡೆಸಿರುವುದು ತನಿಖೆಯಿಂದ ಪತ್ತೆಯಾಗಿದೆ. ಈ ಕುರಿತು ಮಾನ್ವಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಲ್ಲಿಸಿದ ವರದಿಯನ್ನಾಧಾರವಾಗಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಈ ಪ್ರಕ್ರಿಯೆ ಹಿನ್ನೆಲೆಯಲ್ಲಿ ಶ್ವೇತಾ ಕುಲಕರ್ಣಿಯವರ ವಿರುದ್ಧ ಮುಂದಿನ ತನಿಖೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Related News

error: Content is protected !!