ಬೆಂಗಳೂರು: ಕರ್ತವ್ಯ ನಿರ್ವಹಣೆಯ ನಡುವೆ ಗಂಭೀರ ಅಪಘಾತಕ್ಕೊಳಗಾಗಿ ಚಿಕಿತ್ಸೆ ಫಲಕಾರಿಯಾಗದೇ ಪಿಎಸ್‌ಐ ಒಬ್ಬರು ಮೃತಪಟ್ಟ ದುಃಖಾಂತ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ತಲಘಟ್ಟಪುರ ಪೊಲೀಸ್ ಠಾಣೆಯ ಪಿಎಸ್‌ಐ ಮೆಹಬೂಬ್ ಗುಡಳ್ಳಿ (ವಯಸ್ಸು 40) ಅವರು ಇಹಲೋಕ ತ್ಯಜಿಸಿದ್ದಾರೆ.

ಜೂನ್ 24ರ ರಾತ್ರಿ, ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ ಕರೆತರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮೆಹಬೂಬ್ ಅವರು ಅತ್ತಿಬೆಲೆಯಿಂದ ಬೆಂಗಳೂರು ಕಡೆಗೆ ಆರೋಪಿಗಳನ್ನು ಕರೆತರಲು ಹೊರಟಿದ್ದರು. ಮಾರ್ಗಮಧ್ಯೆ ಅವರ ವಾಹನಕ್ಕೆ ತಾಂತ್ರಿಕ ದೋಷ ಉಂಟಾಗಿದ್ದರಿಂದ ಅವರು ಕಾರು ನಿಲ್ಲಿಸಿ ಪರಿಶೀಲನೆ ನಡೆಸುತ್ತಿದ್ದರು.

ಇದರ ನಡುವೆ ಹಿಂದಿನಿಂದ ವೇಗವಾಗಿ ಬಂದ ಲಾರಿಯೊಂದು ಕಾರಿಗೆ ಗುದ್ದಿದೆ. ಈ ಹೊಡೆತದಲ್ಲಿ ಮೆಹಬೂಬ್ ಗಂಭೀರವಾಗಿ ಗಾಯಗೊಂಡರು. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಅವರು ಜೀವತ್ಯಾಗ ಮಾಡಿದರು.

ಕರ್ತವ್ಯದಲ್ಲಿದ್ದಾಗ ಪ್ರಾಣ ಕಳೆದುಕೊಂಡ ಪಿಎಸ್‌ಐ ಮೆಹಬೂಬ್ ಅವರ ನಿಧನದಿಂದ ಪೊಲೀಸ್ ಇಲಾಖೆ ಮತ್ತು ಸಹೋದ್ಯೋಗಿಗಳಲ್ಲಿ ಆಘಾತ ಮತ್ತು ದುಃಖದ ಆಲೆಯೆದ್ದಿದೆ.

Leave a Reply

Your email address will not be published. Required fields are marked *

Related News

error: Content is protected !!