ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆಗ್ಗೋಡಿಯಲ್ಲಿ 14 ವರ್ಷದ ವಿದ್ಯಾರ್ಥಿನಿ ಬಿಳಿ ಜಾಂಡಿಸ್ ಸೋಂಕಿನಿಂದ ಬಳಲುತ್ತಾ ಮರಣ ಹೊಂದಿದ ದುರ್ಘಟನೆ ನಡೆದಿದೆ.
ಮೃತ ಬಾಲಕಿಯನ್ನು ಐಸಿರಿ ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿಯ ಬೆಟ್ಟಮಕ್ಕಿ ಸಹ್ಯಾದ್ರಿ (ICSC) ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದ ಈಕೆ, ಕಳೆದ ಕೆಲವು ದಿನಗಳಿಂದ ಬಿಳಿ ಜಾಂಡಿಸ್ ಕಾಯಿಲೆಯಿಂದ ಪೀಡಿತೆಯಾಗಿದ್ದಳು.
ಆರೋಗ್ಯ ಸ್ಥಿತಿ ಗಂಭೀರಗೊಂಡ ಕಾರಣ ಐಸಿರಿಯನ್ನು ತಕ್ಷಣವೇ ಬೆಂಗಳೂರುದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಮುಂದುವರಿಸುತ್ತಿದ್ದಂತೆ ಆಕೆಗೆ ಕಿಡ್ನಿ ವೈಫಲ್ಯವೂ ಉಂಟಾಗಿ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಳು.
ಈ ಹೃದಯವಿದ್ರಾವಕ ಘಟನೆಯಿಂದ ಕುಟುಂಬಸ್ಥರು ದುಃಖದಲ್ಲಿ ಮುಳುಗಿದ್ದಾರೆ. ಸಹ್ಯಾದ್ರಿ ಶಾಲೆಯ ಶಿಕ್ಷಕರು ಹಾಗೂ ಸಹಪಾಠಿಗಳು ಆಕೆಯ ಅಕಾಲಿಕ ಮರಣಕ್ಕೆ ಸಂತಾಪ ಸೂಚಿಸಿದ್ದಾರೆ.
(ಈ ರೀತಿಯ ಘಟನೆಗಳು ಮತ್ತೆ ನಡೆಯದಂತೆ ಆರೋಗ್ಯ ಜಾಗೃತಿಗೆ ಹೆಚ್ಚಿನ ಗಮನ ನೀಡಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ.)
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…