ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತದ ಪ್ರಕರಣಗಳು ಆತಂಕಕಾರಿ ಮಟ್ಟಕ್ಕೆ ಹೆಚ್ಚುತ್ತಿರುವುದು ದುರಂತ ಸಂಗತಿ. ಇತ್ತೀಚೆಗಷ್ಟೇ ಹಾಸನದಲ್ಲಿ ಯುವತಿಯೊಬ್ಬಳು ಹೃದಯಾಘಾತದಿಂದ ಸಾವನ್ನಪ್ಪಿದ್ದರೆ, ಇದೀಗ ಬೆಂಗಳೂರಿನಲ್ಲಿ ಕೂಡ ಇಂಥದ್ದೇ ಭೀಕರ ಘಟನೆ ನಡೆದಿದೆ.
ಅರಕಲಗೂಡು ತಾಲ್ಲೂಕಿನ ಕಾಡನೂರು ಗ್ರಾಮಕ್ಕೆ ಸೇರಿದ 19 ವರ್ಷದ ಅಭಿಷೇಕ್ ಎಂಬ ಯುವಕ, ನಗರದ ಬಸವೇಶ್ವರನಗರದಲ್ಲಿ ತನ್ನ ಕೆಲಸದ ಮಧ್ಯೆ ಏಕಾಏಕಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾನೆ. ಕ್ಯಾಬ್ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದ ಅವನು, ವಾಹನ ನಿಲ್ಲಿಸಿದ್ದ ಜಾಗದಲ್ಲೇ ಕುಸಿದುಬಿದ್ದಿದ್ದಾನೆ. ಈ ದೃಶ್ಯ ಕಂಡ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ, ಆತ ಆಗಲೇ ಪ್ರಾಣಬಿಟ್ಟಿದ್ದನೆಂದು ವೈದ್ಯರು ದೃಢಪಡಿಸಿದ್ದಾರೆ.
ಮಗನನ್ನು ಕಳೆದುಕೊಂಡ ಕುಟುಂಬ ತೀವ್ರ ಆಘಾತಕ್ಕೆ ಒಳಗಾಗಿ ಆಕ್ರಂದನದಲ್ಲಿ ಮುಳುಗಿದೆ. ತನ್ನ ಬಾಲ್ಯವನ್ನೇ ಬಿಟ್ಟುಕೊಡಬೇಕಾದ ಪರಿಸ್ಥಿತಿಯಲ್ಲಿ ಮನೆಮಂದಿಯು ಬಿಂಬಲಾಗಿ ಹೋಗಿದ್ದು, ಗ್ರಾಮದಲ್ಲಿ ದುಃಖದ ಛಾಯೆ ಆವರಿಸಿಕೊಂಡಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…