ಹೈದರಾಬಾದಿನ ಚಂದನ್ ನಗರದಲ್ಲಿ ವಾಸಿಸುತ್ತಿದ್ದ 27 ವರ್ಷದ ಅವಿವಾಹಿತ ಮಹಿಳೆ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ತಮ್ಮ ಶಾಲೆಯಲ್ಲಿಯೇ ವ್ಯಾಸಂಗ ಮಾಡುತ್ತಿದ್ದ ಹತ್ತನೇ ತರಗತಿ ವಿದ್ಯಾರ್ಥಿ ಪ್ರೇಮ ಪಾಶದಲ್ಲಿ ಈಕೆ ಬಿದ್ದಿದ್ದರು. ಫೆಬ್ರವರಿ 16 ರಂದು ಶಾಲೆಗೆ ಹೋಗುತ್ತೇನೆ ಎಂದು ಹೇಳಿದ್ದ ಶಿಕ್ಷಕಿ ಮನೆಗೆ ಬಾರದೆ ನಾಪತ್ತೆಯಾಗಿದ್ದು ಫೆಬ್ರವರಿ 17ರಂದು ಪ್ರಕರಣ ದಾಖಲಿಸಲಾಗಿತ್ತು. ಫೆಬ್ರವರಿ 20ರಂದು ಅದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೂಡ ನಾಪತ್ತೆಯಾಗಿದ್ದು, ಪೋಷಕರು ಶಿಕ್ಷಕಿ ಮೇಲೆ ಅನುಮಾನ ವ್ಯಕ್ತಪಡಿಸಿ ದೂರು ದಾಖಲಿಸಿದ್ದರು.
ಇವರಿಬ್ಬರೂ ರೈಲಿನಲ್ಲಿ ಬೆಂಗಳೂರಿಗೆ ತೆರಳಿದ್ದು ತಿಳಿದುಬಂದ ಬಳಿಕ ಅವರುಗಳ ಪತ್ತೆಗಾಗಿ ಪೊಲೀಸರು ವ್ಯಾಪಕ ತನಿಖೆ ಕೈಗೊಂಡಿದ್ದರು. ಬೆಂಗಳೂರು – ಹೈದರಾಬಾದಿನ ವಿವಿಧ ಲಾಡ್ಜ್ ಗಳಲ್ಲಿ ತಂಗಿದ್ದ ಇವರುಗಳು ಫೆಬ್ರವರಿ 27ರಂದು ಹೈದರಾಬಾದಿನ ಗಚ್ಚಿಬೊಲಿ ಠಾಣೆಯ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಶನಿವಾರದಂದು ಶಿಕ್ಷಕಿಯನ್ನು ಕಳುಹಿಸಿದ್ದ ಪೊಲೀಸರು ಕೌನ್ಸೆಲಿಂಗ್ ನಡೆಸಿದ್ದು, ಒಂದೊಮ್ಮೆ ಹದಿನಾರು ವರ್ಷದ ಅಪ್ರಾಪ್ತ ವಿದ್ಯಾರ್ಥಿ ಜೊತೆಗೆ ಹೋಗುವುದಾಗಿ ಹೇಳಿದರೆ ಅಪಹರಣ ಕೇಸ್ ದಾಖಲಿಸುವುದಾಗಿ ಎಚ್ಚರಿಸಿದ್ದಾರೆ. ಇದೀಗ ಇಬ್ಬರನ್ನು ಅವರವರ ಮನೆಗೆ ಕಳುಹಿಸಿಕೊಡಲಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…