ಹೈದರಾಬಾದಿನ ಚಂದನ್ ನಗರದಲ್ಲಿ ವಾಸಿಸುತ್ತಿದ್ದ 27 ವರ್ಷದ ಅವಿವಾಹಿತ ಮಹಿಳೆ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ತಮ್ಮ ಶಾಲೆಯಲ್ಲಿಯೇ ವ್ಯಾಸಂಗ ಮಾಡುತ್ತಿದ್ದ ಹತ್ತನೇ ತರಗತಿ ವಿದ್ಯಾರ್ಥಿ ಪ್ರೇಮ ಪಾಶದಲ್ಲಿ ಈಕೆ ಬಿದ್ದಿದ್ದರು. ಫೆಬ್ರವರಿ 16 ರಂದು ಶಾಲೆಗೆ ಹೋಗುತ್ತೇನೆ ಎಂದು ಹೇಳಿದ್ದ ಶಿಕ್ಷಕಿ ಮನೆಗೆ ಬಾರದೆ ನಾಪತ್ತೆಯಾಗಿದ್ದು ಫೆಬ್ರವರಿ 17ರಂದು ಪ್ರಕರಣ ದಾಖಲಿಸಲಾಗಿತ್ತು. ಫೆಬ್ರವರಿ 20ರಂದು ಅದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೂಡ ನಾಪತ್ತೆಯಾಗಿದ್ದು, ಪೋಷಕರು ಶಿಕ್ಷಕಿ ಮೇಲೆ ಅನುಮಾನ ವ್ಯಕ್ತಪಡಿಸಿ ದೂರು ದಾಖಲಿಸಿದ್ದರು.
ಇವರಿಬ್ಬರೂ ರೈಲಿನಲ್ಲಿ ಬೆಂಗಳೂರಿಗೆ ತೆರಳಿದ್ದು ತಿಳಿದುಬಂದ ಬಳಿಕ ಅವರುಗಳ ಪತ್ತೆಗಾಗಿ ಪೊಲೀಸರು ವ್ಯಾಪಕ ತನಿಖೆ ಕೈಗೊಂಡಿದ್ದರು. ಬೆಂಗಳೂರು – ಹೈದರಾಬಾದಿನ ವಿವಿಧ ಲಾಡ್ಜ್ ಗಳಲ್ಲಿ ತಂಗಿದ್ದ ಇವರುಗಳು ಫೆಬ್ರವರಿ 27ರಂದು ಹೈದರಾಬಾದಿನ ಗಚ್ಚಿಬೊಲಿ ಠಾಣೆಯ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಶನಿವಾರದಂದು ಶಿಕ್ಷಕಿಯನ್ನು ಕಳುಹಿಸಿದ್ದ ಪೊಲೀಸರು ಕೌನ್ಸೆಲಿಂಗ್ ನಡೆಸಿದ್ದು, ಒಂದೊಮ್ಮೆ ಹದಿನಾರು ವರ್ಷದ ಅಪ್ರಾಪ್ತ ವಿದ್ಯಾರ್ಥಿ ಜೊತೆಗೆ ಹೋಗುವುದಾಗಿ ಹೇಳಿದರೆ ಅಪಹರಣ ಕೇಸ್ ದಾಖಲಿಸುವುದಾಗಿ ಎಚ್ಚರಿಸಿದ್ದಾರೆ. ಇದೀಗ ಇಬ್ಬರನ್ನು ಅವರವರ ಮನೆಗೆ ಕಳುಹಿಸಿಕೊಡಲಾಗಿದೆ.
ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…