ಹೈದರಾಬಾದಿನ ಚಂದನ್ ನಗರದಲ್ಲಿ ವಾಸಿಸುತ್ತಿದ್ದ 27 ವರ್ಷದ ಅವಿವಾಹಿತ ಮಹಿಳೆ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ತಮ್ಮ ಶಾಲೆಯಲ್ಲಿಯೇ ವ್ಯಾಸಂಗ ಮಾಡುತ್ತಿದ್ದ ಹತ್ತನೇ ತರಗತಿ ವಿದ್ಯಾರ್ಥಿ ಪ್ರೇಮ ಪಾಶದಲ್ಲಿ ಈಕೆ ಬಿದ್ದಿದ್ದರು. ಫೆಬ್ರವರಿ 16 ರಂದು ಶಾಲೆಗೆ ಹೋಗುತ್ತೇನೆ ಎಂದು ಹೇಳಿದ್ದ ಶಿಕ್ಷಕಿ ಮನೆಗೆ ಬಾರದೆ ನಾಪತ್ತೆಯಾಗಿದ್ದು ಫೆಬ್ರವರಿ 17ರಂದು ಪ್ರಕರಣ ದಾಖಲಿಸಲಾಗಿತ್ತು. ಫೆಬ್ರವರಿ 20ರಂದು ಅದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಕೂಡ ನಾಪತ್ತೆಯಾಗಿದ್ದು, ಪೋಷಕರು ಶಿಕ್ಷಕಿ ಮೇಲೆ ಅನುಮಾನ ವ್ಯಕ್ತಪಡಿಸಿ ದೂರು ದಾಖಲಿಸಿದ್ದರು.
ಇವರಿಬ್ಬರೂ ರೈಲಿನಲ್ಲಿ ಬೆಂಗಳೂರಿಗೆ ತೆರಳಿದ್ದು ತಿಳಿದುಬಂದ ಬಳಿಕ ಅವರುಗಳ ಪತ್ತೆಗಾಗಿ ಪೊಲೀಸರು ವ್ಯಾಪಕ ತನಿಖೆ ಕೈಗೊಂಡಿದ್ದರು. ಬೆಂಗಳೂರು – ಹೈದರಾಬಾದಿನ ವಿವಿಧ ಲಾಡ್ಜ್ ಗಳಲ್ಲಿ ತಂಗಿದ್ದ ಇವರುಗಳು ಫೆಬ್ರವರಿ 27ರಂದು ಹೈದರಾಬಾದಿನ ಗಚ್ಚಿಬೊಲಿ ಠಾಣೆಯ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಶನಿವಾರದಂದು ಶಿಕ್ಷಕಿಯನ್ನು ಕಳುಹಿಸಿದ್ದ ಪೊಲೀಸರು ಕೌನ್ಸೆಲಿಂಗ್ ನಡೆಸಿದ್ದು, ಒಂದೊಮ್ಮೆ ಹದಿನಾರು ವರ್ಷದ ಅಪ್ರಾಪ್ತ ವಿದ್ಯಾರ್ಥಿ ಜೊತೆಗೆ ಹೋಗುವುದಾಗಿ ಹೇಳಿದರೆ ಅಪಹರಣ ಕೇಸ್ ದಾಖಲಿಸುವುದಾಗಿ ಎಚ್ಚರಿಸಿದ್ದಾರೆ. ಇದೀಗ ಇಬ್ಬರನ್ನು ಅವರವರ ಮನೆಗೆ ಕಳುಹಿಸಿಕೊಡಲಾಗಿದೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…