ಮನೆಯಲ್ಲಿ ಯಾರೂ ಹಿರಿಯರು ಇಲ್ಲದ ವೇಳೆ ಬಾಲಕಿಗೆ ಚಾಕ್ಲೇಟ್ ಕೊಡಿಸುವ ಆಮಿಷ ಒಡ್ಡಿ ಲೈಂಗಿಕ ದೌರ್ಜನ್ಯ ನಡೆಸಿದ ಹೀನಾಯ ಘಟನೆಯೊಂದು ದಾವಣಗೆರೆಯಲ್ಲಿ ನಡೆದಿದೆ. ಕಳೆದ ಫೆಬ್ರವರಿ ೧೪ರಂದು ಘಟನೆ ನಡೆದಿದೆ. ೨ನೇ ತರಗತಿಯಲ್ಲಿ ಕಲಿಯುತ್ತಿರುವ ಏಳು ವರ್ಷದ ಬಾಲಕಿಗೆ ಅವತ್ತು ಶಾಲೆ ರಜೆ ಇದ್ದ ಕಾರಣ. ಆಕೆಯ ತಂದೆ-ತಾಯಿ ಮಗಳನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಮಗುವಿಗೆ ನೀನು ಇಲ್ಲೇ ಮನೆಯಲ್ಲಿ ಆಟವಾಡುತ್ತಿರು ಎಂದು ಹೇಳಿ ಹೋಗಿದ್ದರು. ಆ ದಿನ ಮಧ್ಯಾಹ್ನ 1:00ರ ಸುಮಾರಿಗೆ ಮನೆಗೆ ಬಂದಾಗ ಬಾಲಕಿ ಅಳುತ್ತಿರುವುದು ಕಂಡುಬಂತು. ತೀವ್ರ ಯಾತನೆಯಿಂದ ನರಳುತ್ತಿದ್ದ ಆಕೆಯನ್ನು ವಿಚಾರಿಸಿದಾಗ ಆಕೆ ಅಲ್ಲಿ ನಡೆದ ಘನ ಘೋರ ಘಟನೆಯನ್ನು ವಿವರಿಸಿದಳು. ಮಧ್ಯಾಹ್ನ ೧೨ ಗಂಟೆಯ ಹೊತ್ತಿಗೆ ಪಕ್ಕದ ಮನೆಯ ನಾಗ ಎಂಬ ವ್ಯಕ್ತಿ ಚಾಕ್ಲೇಟ್ ನೀಡುವ ಆಮಿಷ ಒಡ್ಡಿ ದೇವಸ್ಥಾನದ ಪಕ್ಕದ ಬಚ್ಚಲು ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದು ಬೆಳಕಿಗೆ ಬಂತು. ಬಾಲಕಿಯ ಮೇಲೆ ದೌರ್ಜನ್ಯ ನಡೆಸಿದ ಕಾಮುಕ ನಾಗನನ್ನು ಹುಡುಕಿಕೊಂಡು ಹೋದಾಗ ಆತ ಯಾವುದೋ ರಿಕ್ಷಾ ಹತ್ತಿ ಹೋಗಿರುವುದು ತಿಳಿಯಿತು. ಕೂಡಲೇ ಪೊಲೀಸ್ ಠಾಣೆಗೆ ದೂರು ನೀಡಿದಾಗ ಕೆಲವೇ ಗಂಟೆಗಳಲ್ಲಿ ಆತನನ್ನು ಬಂಧಿಸಲಾಗಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತೆ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಬಾಲಕಿ ಇನ್ನು ಭಯದಲ್ಲೇ ಇದ್ದಾಳೆ. ಈ ಕುರಿತು ಆರೋಪಿಯ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…