Latest

ಚಾಕ್ಲೇಟ್ ಆಮಿಷ ಒಡ್ಡಿ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ!

ಮನೆಯಲ್ಲಿ ಯಾರೂ ಹಿರಿಯರು ಇಲ್ಲದ ವೇಳೆ ಬಾಲಕಿಗೆ ಚಾಕ್ಲೇಟ್ ಕೊಡಿಸುವ ಆಮಿಷ ಒಡ್ಡಿ ಲೈಂಗಿಕ ದೌರ್ಜನ್ಯ ನಡೆಸಿದ ಹೀನಾಯ ಘಟನೆಯೊಂದು ದಾವಣಗೆರೆಯಲ್ಲಿ ನಡೆದಿದೆ. ಕಳೆದ ಫೆಬ್ರವರಿ ೧೪ರಂದು ಘಟನೆ ನಡೆದಿದೆ. ೨ನೇ ತರಗತಿಯಲ್ಲಿ ಕಲಿಯುತ್ತಿರುವ ಏಳು ವರ್ಷದ ಬಾಲಕಿಗೆ ಅವತ್ತು ಶಾಲೆ ರಜೆ ಇದ್ದ ಕಾರಣ. ಆಕೆಯ ತಂದೆ-ತಾಯಿ ಮಗಳನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಮಗುವಿಗೆ ನೀನು ಇಲ್ಲೇ ಮನೆಯಲ್ಲಿ ಆಟವಾಡುತ್ತಿರು ಎಂದು ಹೇಳಿ ಹೋಗಿದ್ದರು. ಆ ದಿನ ಮಧ್ಯಾಹ್ನ 1:00ರ ಸುಮಾರಿಗೆ ಮನೆಗೆ ಬಂದಾಗ ಬಾಲಕಿ ಅಳುತ್ತಿರುವುದು ಕಂಡುಬಂತು. ತೀವ್ರ ಯಾತನೆಯಿಂದ ನರಳುತ್ತಿದ್ದ ಆಕೆಯನ್ನು ವಿಚಾರಿಸಿದಾಗ ಆಕೆ ಅಲ್ಲಿ ನಡೆದ ಘನ ಘೋರ ಘಟನೆಯನ್ನು ವಿವರಿಸಿದಳು. ಮಧ್ಯಾಹ್ನ ೧೨ ಗಂಟೆಯ ಹೊತ್ತಿಗೆ ಪಕ್ಕದ ಮನೆಯ ನಾಗ ಎಂಬ ವ್ಯಕ್ತಿ ಚಾಕ್ಲೇಟ್ ನೀಡುವ ಆಮಿಷ ಒಡ್ಡಿ ದೇವಸ್ಥಾನದ ಪಕ್ಕದ ಬಚ್ಚಲು ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದು ಬೆಳಕಿಗೆ ಬಂತು. ಬಾಲಕಿಯ ಮೇಲೆ ದೌರ್ಜನ್ಯ ನಡೆಸಿದ ಕಾಮುಕ ನಾಗನನ್ನು ಹುಡುಕಿಕೊಂಡು ಹೋದಾಗ ಆತ ಯಾವುದೋ ರಿಕ್ಷಾ ಹತ್ತಿ ಹೋಗಿರುವುದು ತಿಳಿಯಿತು. ಕೂಡಲೇ ಪೊಲೀಸ್‌ ಠಾಣೆಗೆ ದೂರು ನೀಡಿದಾಗ ಕೆಲವೇ ಗಂಟೆಗಳಲ್ಲಿ ಆತನನ್ನು ಬಂಧಿಸಲಾಗಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತೆ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಬಾಲಕಿ ಇನ್ನು ಭಯದಲ್ಲೇ ಇದ್ದಾಳೆ. ಈ ಕುರಿತು ಆರೋಪಿಯ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ.

ಭ್ರಷ್ಟರ ಬೇಟೆ

Recent Posts

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಗನ ಹತ್ಯೆ: 60 ವರ್ಷದ ತಾಯಿ ಬಂಧನ

ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…

11 hours ago

ಖಾಸಗಿ ವಿಡಿಯೋ ಬೆದರಿಕೆ, ಕೋಟಿ ರೂ. ಬೇಡಿಕೆ: ಸಾಧನಾ ಶೆಟ್ಟಿ ವಿರುದ್ಧ ಎಫ್‌ಐಆರ್

ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್‌ಐಆರ್…

11 hours ago

ಆಂಬ್ಯುಲೆನ್ಸ್‌ನಲ್ಲೇ ರೋಮ್ಯಾನ್ಸ್: 5 ಕಿಮೀ ಬೆನ್ನಟ್ಟಿದ ಸಾರ್ವಜನಿಕರು, ವಿಡಿಯೋ ವೈರಲ್

ಛತ್ತರ್‌ಪುರದಲ್ಲಿ ಗುರುವಾರ ನಡೆದ ಒಂದು ಅಚ್ಚರಿಯ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಲಿಸುತ್ತಿದ್ದ ಆಂಬ್ಯುಲೆನ್ಸ್‌ನೊಳಗೆ ಯುವತಿ ಹಾಗೂ ಇಬ್ಬರು…

12 hours ago

ವಿಚ್ಛೇದಿತ ಐಐಟಿ ವರನ ವಿವಾದಾತ್ಮಕ ಬೇಡಿಕೆ: ‘ವರ್ಜಿನ್ ಬ್ರಾಹ್ಮಣ ವಧು ಬೇಕು’ ಹೇಳಿಕೆಗೆ ಚರ್ಚೆ

ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…

16 hours ago

ಸಚಿವ ಡಿ. ಸುಧಾಕರ್ ಆರೋಗ್ಯ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ.!

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…

21 hours ago

ನಿಶ್ಚಿತಾರ್ಥದ ಬಳಿಕ ನಿಜ ಮುಖ ಬಯಲು: ಭಾವಿ ಪತಿಯ ಅವಮಾನಕ್ಕೆ ಮನನೊಂದು ಎಂ.ಎಸ್ಸಿ ಪದವೀಧರೆ ಆತ್ಮಹತ್ಯೆ

ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…

21 hours ago