Latest

ಚಾಕ್ಲೇಟ್ ಆಮಿಷ ಒಡ್ಡಿ 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ!

ಮನೆಯಲ್ಲಿ ಯಾರೂ ಹಿರಿಯರು ಇಲ್ಲದ ವೇಳೆ ಬಾಲಕಿಗೆ ಚಾಕ್ಲೇಟ್ ಕೊಡಿಸುವ ಆಮಿಷ ಒಡ್ಡಿ ಲೈಂಗಿಕ ದೌರ್ಜನ್ಯ ನಡೆಸಿದ ಹೀನಾಯ ಘಟನೆಯೊಂದು ದಾವಣಗೆರೆಯಲ್ಲಿ ನಡೆದಿದೆ. ಕಳೆದ ಫೆಬ್ರವರಿ ೧೪ರಂದು ಘಟನೆ ನಡೆದಿದೆ. ೨ನೇ ತರಗತಿಯಲ್ಲಿ ಕಲಿಯುತ್ತಿರುವ ಏಳು ವರ್ಷದ ಬಾಲಕಿಗೆ ಅವತ್ತು ಶಾಲೆ ರಜೆ ಇದ್ದ ಕಾರಣ. ಆಕೆಯ ತಂದೆ-ತಾಯಿ ಮಗಳನ್ನು ಮನೆಯಲ್ಲಿ ಬಿಟ್ಟು ಕೆಲಸಕ್ಕೆ ಹೋಗಿದ್ದರು. ಮಗುವಿಗೆ ನೀನು ಇಲ್ಲೇ ಮನೆಯಲ್ಲಿ ಆಟವಾಡುತ್ತಿರು ಎಂದು ಹೇಳಿ ಹೋಗಿದ್ದರು. ಆ ದಿನ ಮಧ್ಯಾಹ್ನ 1:00ರ ಸುಮಾರಿಗೆ ಮನೆಗೆ ಬಂದಾಗ ಬಾಲಕಿ ಅಳುತ್ತಿರುವುದು ಕಂಡುಬಂತು. ತೀವ್ರ ಯಾತನೆಯಿಂದ ನರಳುತ್ತಿದ್ದ ಆಕೆಯನ್ನು ವಿಚಾರಿಸಿದಾಗ ಆಕೆ ಅಲ್ಲಿ ನಡೆದ ಘನ ಘೋರ ಘಟನೆಯನ್ನು ವಿವರಿಸಿದಳು. ಮಧ್ಯಾಹ್ನ ೧೨ ಗಂಟೆಯ ಹೊತ್ತಿಗೆ ಪಕ್ಕದ ಮನೆಯ ನಾಗ ಎಂಬ ವ್ಯಕ್ತಿ ಚಾಕ್ಲೇಟ್ ನೀಡುವ ಆಮಿಷ ಒಡ್ಡಿ ದೇವಸ್ಥಾನದ ಪಕ್ಕದ ಬಚ್ಚಲು ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದು ಬೆಳಕಿಗೆ ಬಂತು. ಬಾಲಕಿಯ ಮೇಲೆ ದೌರ್ಜನ್ಯ ನಡೆಸಿದ ಕಾಮುಕ ನಾಗನನ್ನು ಹುಡುಕಿಕೊಂಡು ಹೋದಾಗ ಆತ ಯಾವುದೋ ರಿಕ್ಷಾ ಹತ್ತಿ ಹೋಗಿರುವುದು ತಿಳಿಯಿತು. ಕೂಡಲೇ ಪೊಲೀಸ್‌ ಠಾಣೆಗೆ ದೂರು ನೀಡಿದಾಗ ಕೆಲವೇ ಗಂಟೆಗಳಲ್ಲಿ ಆತನನ್ನು ಬಂಧಿಸಲಾಗಿದೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತೆ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಬಾಲಕಿ ಇನ್ನು ಭಯದಲ್ಲೇ ಇದ್ದಾಳೆ. ಈ ಕುರಿತು ಆರೋಪಿಯ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ.

ಭ್ರಷ್ಟರ ಬೇಟೆ

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

1 hour ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

1 hour ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

1 hour ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

1 hour ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

1 hour ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

1 hour ago