Latest

ಕಾಂಗ್ರೆಸ್ ಮುಖಂಡನ ಅಂತ್ಯಕ್ರಿಯೆಗೆ ಬಂದಿದ್ದ ಬಿಜೆಪಿ ಮುಖಂಡನಿಗೆ ಮಾರಣಾಂತಿಕ ಹಲ್ಲೆ.!

ರಾಮನಗರ: ರಾಮನಗರ ಜಿಲ್ಲೆಯ ಸಾತನೂರು ತಾಲೂಕಿನ ಹೊಂಗಾಣಿದೊಡ್ಡಿ ಗ್ರಾಮದಲ್ಲಿ ಬಿಜೆಪಿ ಮುಖಂಡನೊಬ್ಬರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯ ಘಟನೆ ಸ್ಥಳೀಯರ ಶಂಕೆ ಮತ್ತು ಆತಂಕಕ್ಕೆ ಕಾರಣವಾಗಿದೆ. ಈ ಘಟನೆ ಒಂದು ದಿನದ ಹಿಂದೆಯಷ್ಟೇ ನಡೆದಿದ್ದ ಕಾಂಗ್ರೆಸ್ ಮುಖಂಡನ ಹತ್ಯೆಯ ಹಿನ್ನೆಲೆಯಲ್ಲಿ ನಡೆದಿದೆ.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ನಾಯಕ ನಂಜೇಶ್ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಲೆ ಮಾಡಿದ ಘಟನೆ ಶನಿವಾರ ಬೆಳಕಿಗೆ ಬಂದಿತ್ತು. ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀನಿವಾಸ್ ಎಂಬಾತನ ವಿರುದ್ಧ ಶಂಕೆ ವ್ಯಕ್ತವಾಗಿದೆ.

ನಂಜೇಶ್ ಅವರ ಅಂತ್ಯಕ್ರಿಯೆ ಕಾರ್ಯಕ್ರಮದಲ್ಲಿ ಅವರ ಹಿರಿತನದ ಸ್ನೇಹಿತನಾಗಿದ್ದ ಬಿಜೆಪಿ ಕಾರ್ಯಕರ್ತ ಅಚ್ಚಲು ಕುಮಾರ್ ಭಾಗಿಯಾಗಿದ್ದರು. ಅಂತ್ಯಸಂಸ್ಕಾರದಿಂದ ವೇಳೆ, ಮಾರಣಾಂತಿಕವಾಗಿ ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಮುಖಕ್ಕೆ ಗಂಭೀರವಾಗಿ ಹೊಡೆದ ಪರಿಣಾಮ ಅಚ್ಚಲು ಕುಮಾರ್ ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ ಎಂಬ ಮಾಹಿತಿ ಬಂದಿದೆ.

ಈ ಘಟನೆ ಹಿನ್ನೆಲೆ ಈಗ ಸ್ಥಳೀಯ ರಾಜಕೀಯದಲ್ಲಿ ತೀವ್ರ ಉದ್ವಿಗ್ನತೆ ಮೂಡಿದ್ದು, ಎರಡು ಪಕ್ಷಗಳ ನಡುವೆ ಇರುವ ದ್ವೇಷಕ್ಕೆ ಮತ್ತಷ್ಟು ಇಂಧನ ಸಿಕ್ಕಂತಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಗ್ರಾಮದಲ್ಲಿ ಹೆಚ್ಚುವರಿ ಭದ್ರತೆ ಕೈಗೊಳ್ಳಲಾಗಿದೆ.

ಸ್ಥಳೀಯ ಸಾರ್ವಜನಿಕರು ಮತ್ತು ರಾಜಕೀಯ ಮುಖಂಡರು ಈ ರೀತಿಯ ಹಿಂಸಾತ್ಮಕ ಘಟನೆಗಳನ್ನು ಖಂಡಿಸಿ ಆರೋಪಿಗಳಿಗೆ ಶೀಘ್ರ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

9 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

14 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

14 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

14 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

14 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

19 hours ago