Latest

ಅವ್ಯವಸ್ಥೆಗೆ ಗುರಿಯಾದ ಬಾಲಕರ ವಸತಿ ನಿಲಯ; ಕಂಡರೂ ಕಾಣದಂತಿರುವ ನಾಲಾಯಕ್ ಅಧಿಕಾರಿಗಳು!

ಸಿಂದಗಿ ತಾಲೂಕಿನ ಶ್ರೀ ಡಿ ದೇವರಾಜ್ ಅರಸ್ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಸಿಂದಗಿ ಟೌನ್ ಇದರ ಪರಿಸ್ಥಿತಿ ನೋಡಿದರೆ ಎದೆ ಜಲ್ ಎನ್ನುವ ರೀತಿ ಇದೆ.

ಇಲ್ಲಿಯ ವಿದ್ಯಾರ್ಥಿ ನಿಲಯದಲ್ಲಿ ಎಲ್ಲಿ ನೋಡಿದರೂ ಸೋರುತ್ತಿರುವ ಕೋಣೆಗಳು, ಶಿಥಿಲ ವ್ಯವಸ್ಥೆಯಿಂದ ಕೂಡಿದೆ. ಅಲ್ಲದೆ ಇಲ್ಲಿಯ ವಸತಿ ನಿಲಯಕ್ಕೆ ವಾರ್ಡನ್ ಆಗಿ ಕೆಲಸ ನಿರ್ವಹಿಸುವರು ಮಠಪತಿ ಎಂಬವರು ವಸತಿ ನಿಲಯಕ್ಕೆ ಬರುವುದು ತಿಂಗಳಿಗೆ ಒಮ್ಮೆ ಮಾತ್ರ. ಇಲ್ಲಿಯ ವಸತಿ ನಿಲಯಗಳ ಮೇಲಾಧಿಕಾರಿಯಾಗಿ ಶ್ರೀಮತಿ ಶಿವಲೀಲಾ ಕಣ್ಣೂರು ಅವರಿಗೆ ಇಲ್ಲಿಯ ಸಮಸ್ಯೆ ಬಗ್ಗೆ ಎಷ್ಟೇ ಬಾರಿ ದೂರು ನೀಡಿದರು ಕೂಡ ನಮಗೆ ಸಂಬಂಧವೇ ಇಲ್ಲ ಎಂಬಂತೆ ಕುಳಿತಿದ್ದಾರೆ.

ಸಾರ್ವಜನಿಕರು ಕರೆ ಮಾಡಿದರೆ ಶಿವಲೀಲಾ ಕಲ್ಲೂರ್ ರವರು ಕರೆಗೆ ಉತ್ತರಿಸುವುದೇ ಇಲ್ಲ ಸೋಂಬೇರಿ ವಾರ್ಡನ್ ಜೊತೆಗೆ ದಂಡಪಿಂಡ ರೀತಿ ಕೆಲಸ ಮಾಡುವ ಮೇಲಾಧಿಕಾರಿಗಳಿಗೆ ಯಾವ ಶಬ್ದದಿಂದ ಮಾತನಾಡಬೇಕು ಎಂಬುದು ತಿಳಿಯದಾಗಿದೆ.

ಇಲ್ಲಿಯ ವಿದ್ಯಾರ್ಥಿಗಳ ಪರಿಸ್ಥಿತಿ ಕೇಳಿದರೆ ಯಾವ ಒಬ್ಬ ಪಾಲಕರು ತಮ್ಮ ಮಕ್ಕಳಿಗೆ ಹಾಸ್ಟೆಲ್ನಲ್ಲಿ ಇರುವುದಕ್ಕೆ ಬಿಡುವುದಿಲ್ಲ ಏಕೆಂದರೆ ಇಲ್ಲಿಯ ಶೌಚಾಲಯಕ್ಕೆ ಹೋದರೆ ವಾಂತಿ ಬೇಧಿ ಬರುವುದು ಗ್ಯಾರಂಟಿ ಮತ್ತು ಅಡುಗೆ ಕೆಲಸದವರು ಇದ್ದರೂ ಕೂಡ ಅಲ್ಲಿಯ ಕೆಲಸಕ್ಕೆ ಮಕ್ಕಳನ್ನು ಬಳಸಿಕೊಳ್ಳುತ್ತಾರೆ ಮತ್ತು ಶೌಚಾಲಯ ಸ್ವಚ್ಛಗೊಳಿಸಲು ಮಕ್ಕಳೇ ಸ್ವಚ್ಛಗೊಳಿಸಬೇಕು ಪ್ರತಿದಿನ ಸರದಿಯಂತೆ ರೂಮಿಗೆ ಒಬ್ಬರು ಶೌಚಾಲಯ ಸ್ವಚ್ಛಗೊಳಿಸಬೇಕು ಇಲ್ಲಿಯ ಮಕ್ಕಳ ನರಕ ಯಾತನೆ ಹೇಳತಿರದು.

ವಸತಿ ನಿಲಯದಲ್ಲಿ ಇರುವ ಮಕ್ಕಳು ಹೇಳುವಂತೆ ಮಳೆ ಬಂದರೆ ಎಲ್ಲಿ ನೋಡಿದರೂ ಸೋರುವ ಕೋಣೆಗಳು ಕೆಲವೊಂದು ಸಲ ನಿಂತ ನೀರಿನಲ್ಲಿ ಮಲಗುವ ಸನ್ನಿವೇಶವೂ ಕೂಡ ಬಂದು ಒದಗಿದೆ ಎಂದು ಹೇಳಿದರು.

ಅಲ್ಲೇ ಇದ್ದ ಒಬ್ಬ ವಿದ್ಯಾರ್ಥಿ ಒಂದು ದಿನ ಕರೆಂಟ್ ಸ್ವಿಚ್ ಬೋರ್ಡ್ ಆನ್ ಮಾಡಲು ಹೋಗಿ ಕರೆಂಟ್ ತಾಗಿ ಸ್ವಲ್ಪದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಇದಕ್ಕೆ ಕಾರಣ ಮುರಿದಿರುವ ಬೋರ್ಡು ಹಾಗೂ ಮುರಿದಿರುವ ಫ್ಯಾನುಗಳು.

ಇದರ ಬಗ್ಗೆ ವಾರ್ಡನ್ಗೆ ಹೇಳಿದರೆ ಇರುವುದಾದರೆ ಇರಿ ಇಲ್ಲವೇ ಇಲ್ಲಿಂದ ಹೊರಟು ಹೋಗಿ ಎಂದು ಹೇಳುತ್ತಾರಂತೆ. ಬಡತನದಲ್ಲಿ ಇರುವ ವಿದ್ಯಾರ್ಥಿಗಳು ತಮ್ಮ ಸಂಕಟವನ್ನು ಯಾರ ಹತ್ತಿರ ಹೇಳಬೇಕು?

ಅಲ್ಲೇ ಕೆಲಸ ನಿರ್ವಹಿಸುವ ಅಡುಗೆ ಸಹಾಯಕರು ಮಕ್ಕಳ ಮೇಲೆ ಗದರಿ ಹೊಡೆಯಲು ಹೋಗುತ್ತಾರಂತೆ. ಇದರಿಂದ ಹೆದರಿದ ಮಕ್ಕಳು ಬಂದ ಎಲ್ಲ ಕಷ್ಟ ವನ್ನು ಸುಮ್ಮನೇ ನುಂಗಿ ಕುಳಿತಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳಾದ ಶಿವಲೀಲಾ ಕಣ್ಣೂರು ರವರೆ ನಿಮಗಿದು ಕಾಣುತ್ತಿಲ್ಲವೇ? ಇಲ್ಲಿನ ಅವ್ಯವಸ್ಥೆಗೆ ಕೊನೆಯೆಂದು? ಮಕ್ಕಳು ದೇವರ ಸಮಾನರು ಎನ್ನುತ್ತಾರೆ ಅಂತಹ ಮಕ್ಕಳನ್ನೇ ಇಂತಹ ಸಮಸ್ಯೆಗೆ ತಳ್ಳುತ್ತಿದ್ದಾರೆ ಎಂದರೆ ಇವರೆಂಥ ನಾಚಿಕೆ ಬಿಟ್ಟ ಭ್ರಷ್ಟ ಅಧಿಕಾರಿಗಳಿರಬೇಕು.
ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಅಂತಹ ನಮ್ಮ ದೇಶದ ಪ್ರಜೆಗಳು ಮುಂದೆ ದೇಶವನ್ನು ಹಾಗೂ ಅದರ ವ್ಯವಸ್ಥೆಯನ್ನು ಗೌರವಿಸ ಬೇಕೆ ಹೊರತು ಅದರ ಹವ್ಯವಸ್ಥೆಯಲ್ಲಿ ನೊಂದು, ಬೆಂದು ಸಮಾಜದ ವಿರೋಧಿಗಳಾಗಬಾರದು.
ಈ ವಿಚಾರದ ಬಗ್ಗೆ ಸ್ಥಳೀಯ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಮಕ್ಕಳ ಕಷ್ಟಕ್ಕೆ ನೆರವಾಗಬೇಕು ಮತ್ತು ಬಾಲಕರ ವಸತಿ ನಿಲಯದ ಅವ್ಯವಸ್ಥೆಗೆ ಕಾರಣರಾದ ಭ್ರಷ್ಟ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂಬುದು ಪತ್ರಿಕೆಯ ಆಗ್ರಹವಾಗಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago