Latest

ಅವ್ಯವಸ್ಥೆಗೆ ಗುರಿಯಾದ ಬಾಲಕರ ವಸತಿ ನಿಲಯ; ಕಂಡರೂ ಕಾಣದಂತಿರುವ ನಾಲಾಯಕ್ ಅಧಿಕಾರಿಗಳು!

ಸಿಂದಗಿ ತಾಲೂಕಿನ ಶ್ರೀ ಡಿ ದೇವರಾಜ್ ಅರಸ್ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಸಿಂದಗಿ ಟೌನ್ ಇದರ ಪರಿಸ್ಥಿತಿ ನೋಡಿದರೆ ಎದೆ ಜಲ್ ಎನ್ನುವ ರೀತಿ ಇದೆ.

ಇಲ್ಲಿಯ ವಿದ್ಯಾರ್ಥಿ ನಿಲಯದಲ್ಲಿ ಎಲ್ಲಿ ನೋಡಿದರೂ ಸೋರುತ್ತಿರುವ ಕೋಣೆಗಳು, ಶಿಥಿಲ ವ್ಯವಸ್ಥೆಯಿಂದ ಕೂಡಿದೆ. ಅಲ್ಲದೆ ಇಲ್ಲಿಯ ವಸತಿ ನಿಲಯಕ್ಕೆ ವಾರ್ಡನ್ ಆಗಿ ಕೆಲಸ ನಿರ್ವಹಿಸುವರು ಮಠಪತಿ ಎಂಬವರು ವಸತಿ ನಿಲಯಕ್ಕೆ ಬರುವುದು ತಿಂಗಳಿಗೆ ಒಮ್ಮೆ ಮಾತ್ರ. ಇಲ್ಲಿಯ ವಸತಿ ನಿಲಯಗಳ ಮೇಲಾಧಿಕಾರಿಯಾಗಿ ಶ್ರೀಮತಿ ಶಿವಲೀಲಾ ಕಣ್ಣೂರು ಅವರಿಗೆ ಇಲ್ಲಿಯ ಸಮಸ್ಯೆ ಬಗ್ಗೆ ಎಷ್ಟೇ ಬಾರಿ ದೂರು ನೀಡಿದರು ಕೂಡ ನಮಗೆ ಸಂಬಂಧವೇ ಇಲ್ಲ ಎಂಬಂತೆ ಕುಳಿತಿದ್ದಾರೆ.

ಸಾರ್ವಜನಿಕರು ಕರೆ ಮಾಡಿದರೆ ಶಿವಲೀಲಾ ಕಲ್ಲೂರ್ ರವರು ಕರೆಗೆ ಉತ್ತರಿಸುವುದೇ ಇಲ್ಲ ಸೋಂಬೇರಿ ವಾರ್ಡನ್ ಜೊತೆಗೆ ದಂಡಪಿಂಡ ರೀತಿ ಕೆಲಸ ಮಾಡುವ ಮೇಲಾಧಿಕಾರಿಗಳಿಗೆ ಯಾವ ಶಬ್ದದಿಂದ ಮಾತನಾಡಬೇಕು ಎಂಬುದು ತಿಳಿಯದಾಗಿದೆ.

ಇಲ್ಲಿಯ ವಿದ್ಯಾರ್ಥಿಗಳ ಪರಿಸ್ಥಿತಿ ಕೇಳಿದರೆ ಯಾವ ಒಬ್ಬ ಪಾಲಕರು ತಮ್ಮ ಮಕ್ಕಳಿಗೆ ಹಾಸ್ಟೆಲ್ನಲ್ಲಿ ಇರುವುದಕ್ಕೆ ಬಿಡುವುದಿಲ್ಲ ಏಕೆಂದರೆ ಇಲ್ಲಿಯ ಶೌಚಾಲಯಕ್ಕೆ ಹೋದರೆ ವಾಂತಿ ಬೇಧಿ ಬರುವುದು ಗ್ಯಾರಂಟಿ ಮತ್ತು ಅಡುಗೆ ಕೆಲಸದವರು ಇದ್ದರೂ ಕೂಡ ಅಲ್ಲಿಯ ಕೆಲಸಕ್ಕೆ ಮಕ್ಕಳನ್ನು ಬಳಸಿಕೊಳ್ಳುತ್ತಾರೆ ಮತ್ತು ಶೌಚಾಲಯ ಸ್ವಚ್ಛಗೊಳಿಸಲು ಮಕ್ಕಳೇ ಸ್ವಚ್ಛಗೊಳಿಸಬೇಕು ಪ್ರತಿದಿನ ಸರದಿಯಂತೆ ರೂಮಿಗೆ ಒಬ್ಬರು ಶೌಚಾಲಯ ಸ್ವಚ್ಛಗೊಳಿಸಬೇಕು ಇಲ್ಲಿಯ ಮಕ್ಕಳ ನರಕ ಯಾತನೆ ಹೇಳತಿರದು.

ವಸತಿ ನಿಲಯದಲ್ಲಿ ಇರುವ ಮಕ್ಕಳು ಹೇಳುವಂತೆ ಮಳೆ ಬಂದರೆ ಎಲ್ಲಿ ನೋಡಿದರೂ ಸೋರುವ ಕೋಣೆಗಳು ಕೆಲವೊಂದು ಸಲ ನಿಂತ ನೀರಿನಲ್ಲಿ ಮಲಗುವ ಸನ್ನಿವೇಶವೂ ಕೂಡ ಬಂದು ಒದಗಿದೆ ಎಂದು ಹೇಳಿದರು.

ಅಲ್ಲೇ ಇದ್ದ ಒಬ್ಬ ವಿದ್ಯಾರ್ಥಿ ಒಂದು ದಿನ ಕರೆಂಟ್ ಸ್ವಿಚ್ ಬೋರ್ಡ್ ಆನ್ ಮಾಡಲು ಹೋಗಿ ಕರೆಂಟ್ ತಾಗಿ ಸ್ವಲ್ಪದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಇದಕ್ಕೆ ಕಾರಣ ಮುರಿದಿರುವ ಬೋರ್ಡು ಹಾಗೂ ಮುರಿದಿರುವ ಫ್ಯಾನುಗಳು.

ಇದರ ಬಗ್ಗೆ ವಾರ್ಡನ್ಗೆ ಹೇಳಿದರೆ ಇರುವುದಾದರೆ ಇರಿ ಇಲ್ಲವೇ ಇಲ್ಲಿಂದ ಹೊರಟು ಹೋಗಿ ಎಂದು ಹೇಳುತ್ತಾರಂತೆ. ಬಡತನದಲ್ಲಿ ಇರುವ ವಿದ್ಯಾರ್ಥಿಗಳು ತಮ್ಮ ಸಂಕಟವನ್ನು ಯಾರ ಹತ್ತಿರ ಹೇಳಬೇಕು?

ಅಲ್ಲೇ ಕೆಲಸ ನಿರ್ವಹಿಸುವ ಅಡುಗೆ ಸಹಾಯಕರು ಮಕ್ಕಳ ಮೇಲೆ ಗದರಿ ಹೊಡೆಯಲು ಹೋಗುತ್ತಾರಂತೆ. ಇದರಿಂದ ಹೆದರಿದ ಮಕ್ಕಳು ಬಂದ ಎಲ್ಲ ಕಷ್ಟ ವನ್ನು ಸುಮ್ಮನೇ ನುಂಗಿ ಕುಳಿತಿದ್ದಾರೆ.

ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳಾದ ಶಿವಲೀಲಾ ಕಣ್ಣೂರು ರವರೆ ನಿಮಗಿದು ಕಾಣುತ್ತಿಲ್ಲವೇ? ಇಲ್ಲಿನ ಅವ್ಯವಸ್ಥೆಗೆ ಕೊನೆಯೆಂದು? ಮಕ್ಕಳು ದೇವರ ಸಮಾನರು ಎನ್ನುತ್ತಾರೆ ಅಂತಹ ಮಕ್ಕಳನ್ನೇ ಇಂತಹ ಸಮಸ್ಯೆಗೆ ತಳ್ಳುತ್ತಿದ್ದಾರೆ ಎಂದರೆ ಇವರೆಂಥ ನಾಚಿಕೆ ಬಿಟ್ಟ ಭ್ರಷ್ಟ ಅಧಿಕಾರಿಗಳಿರಬೇಕು.
ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಅಂತಹ ನಮ್ಮ ದೇಶದ ಪ್ರಜೆಗಳು ಮುಂದೆ ದೇಶವನ್ನು ಹಾಗೂ ಅದರ ವ್ಯವಸ್ಥೆಯನ್ನು ಗೌರವಿಸ ಬೇಕೆ ಹೊರತು ಅದರ ಹವ್ಯವಸ್ಥೆಯಲ್ಲಿ ನೊಂದು, ಬೆಂದು ಸಮಾಜದ ವಿರೋಧಿಗಳಾಗಬಾರದು.
ಈ ವಿಚಾರದ ಬಗ್ಗೆ ಸ್ಥಳೀಯ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಮಕ್ಕಳ ಕಷ್ಟಕ್ಕೆ ನೆರವಾಗಬೇಕು ಮತ್ತು ಬಾಲಕರ ವಸತಿ ನಿಲಯದ ಅವ್ಯವಸ್ಥೆಗೆ ಕಾರಣರಾದ ಭ್ರಷ್ಟ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂಬುದು ಪತ್ರಿಕೆಯ ಆಗ್ರಹವಾಗಿದೆ.

ಭ್ರಷ್ಟರ ಬೇಟೆ

Recent Posts

ಕಂದಾಯ ಅಧಿಕಾರಿಯ ಪುತ್ರಿ upsc ಆಕಾಂಕ್ಷಿ ಮೇಲೆ ಅತ್ಯಾಚಾರ, ಬಳಿಕ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮನಕಲಕುವ ಹಾಗೂ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹಿರಿಯ ಕಂದಾಯ ಅಧಿಕಾರಿಯ 22 ವರ್ಷದ ಪುತ್ರಿಯನ್ನು…

4 hours ago

ನಿಶ್ಚಿತ ವಧುವಿನ ಭೇಟಿ: ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಸೇವನೆಗೆ ಯುವಕ ಬಲಿ..!

ಗುರುಗ್ರಾಮ: ನಿಶ್ಚಿತ ವಧುವನ್ನು ಭೇಟಿಯಾಗುವ ನಿರೀಕ್ಷೆಯಲ್ಲಿ ಇದ್ದ ಯುವಕನೊಬ್ಬ, ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ಮಿತಿಮೀರಿ ಸೇವಿಸಿದ ಪರಿಣಾಮ ಹೃದಯಾಘಾತದಿಂದ ಮೃತಪಟ್ಟ…

4 hours ago

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

17 hours ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

18 hours ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

18 hours ago

ಮಾದಕ ವ್ಯಸನದ ಬೆನ್ನೇರಿ ಮಗನಿಂದ ತಾಯಿ ಹತ್ಯೆ: ಕಣ್ಣೂರಿನಲ್ಲಿ ಹೃದಯ ಕಲಕುವ ಘಟನೆ

ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್‌ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…

18 hours ago