Latest

ಹುಲಸೂರ ಬಳಿ ಹೋರಿಗಳ ಸಾಗಣೆ ತಡೆ: ದಾಖಲೆ ಇಲ್ಲದಿದ್ದರೆ ಕಾನೂನು ಕ್ರಮ ಎಚ್ಚರಿಕೆ..!

ಬಸವಕಲ್ಯಾಣಕ್ಕೆ ಹೋರಿಗಳನ್ನು ಸಾಗಿಸುತ್ತಿದ್ದ ವಾಹನವನ್ನು ತಡೆದು ಪರಿಶೀಲಿಸಿದ ಘಟನೆಯೊಂದು ಶನಿವಾರ ಹುಲಸೂರ ತಾಲ್ಲೂಕಿನಲ್ಲಿ ಬೆಳಕಿಗೆ ಬಂದಿದೆ. ಗಡಿಗೌಡಗಾಂವ ಗ್ರಾಮದ ರೈತನಿಗೆ ಸೇರಿದ ಎನ್ನಲಾದ ಎರಡು ಹೋರಿಗಳನ್ನು ಸಾಗಿಸುತ್ತಿದ್ದ ವಾಹನವನ್ನು ಬೇಲೂರು ಗ್ರಾಮದ ಯುವಕರು ಮಧ್ಯದಲ್ಲಿ ತಡೆದು, ಶಂಕಿತವಾಗಿ ಪರಿಶೀಲನೆ ನಡೆಸಿದರು.

ಪಶುಗಳ ಆರೋಗ್ಯ ಸ್ಥಿತಿ ತಿಳಿಯಲು ಅವರು ಹುಲಸೂರ ಪಶು ಚಿಕಿತ್ಸಾಲಯಕ್ಕೆ ಕರೆದೊಯ್ದು ವೈದ್ಯರ ಪರಿಶೀಲನೆಗೆ ಒಳಪಡಿಸಿದರು. ಬಳಿಕ ಪ್ರಕರಣವನ್ನು ಹುಲಸೂರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಯಿತು.

ಈ ಬಗ್ಗೆ ಪ್ರತಿಕ್ರಿಯಿಸಿದ ಪಿಎಸ್‌ಐ ಶಿವಪ್ಪ ಮೇಟಿ ಅವರು, “ವಾಹನ ಹಾಗೂ ಹೋರಿಗಳನ್ನು ವಶಕ್ಕೆ ತೆಗೆದುಕೊಂಡಿದ್ದು, ತನಿಖೆ ಮುಂದುವರಿಸಲಾಗಿದೆ. ರೈತರು ಸೂಕ್ತ ದಾಖಲೆಗಳನ್ನು ಸಲ್ಲಿಸಿದರೆ ಜಾನುವಾರುಗಳನ್ನು ಮರಳಿ ನೀಡಲಾಗುತ್ತದೆ. ದಾಖಲೆಗಳ ಕೊರತೆಯಿದ್ದಲ್ಲಿ ಕಾನೂನು ಕ್ರಮ ಕೈಗೊಂಡು ಗೋ ಶಾಲೆಗೆ ಜಾನುವಾರುಗಳನ್ನು ವರ್ಗಾಯಿಸಲಾಗುವುದು,” ಎಂದು ಸ್ಪಷ್ಟಪಡಿಸಿದರು.

ಈ ವೇಳೆ ತಡೆಪಡೆ ಕಾರ್ಯದಲ್ಲಿ ಭಾಗವಹಿಸಿದ್ದವರು – ಬೇಲೂರು ಗ್ರಾಮದ ಯುವಕರು ಆಕಾಶ ಬಿದ್ಮನೆ, ಪ್ರದೀಪ ಕವಳೆ, ಸಿದ್ದು ಪಾಟೀಲ್, ಮಲ್ಲಿಕಾರ್ಜುನ ಬರಗಲೆ, ರೇವಣಸಿದ್ದ ಬರಗಲೆ, ಶರಣು ತೋಗಲೂರೆ, ಜೊತೆಗೆ ಹುಲಸೂರ ಬಜರಂಗದಳ ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ ಮಂಗಾ, ವಿಜಯಸ್ವಾಮಿ, ಬಸವರಾಜ ರಗಟ್ಟೆ, ಅಜಯ ಚಾಕೋತೆ, ಅವಿನಾಶ ಮೇತ್ರೆ, ಪ್ರಜ್ವಲ್ ಸಜ್ಜನ್, ನಾಗೇಶ ಭರಮಶೇಟೆ, ಬಾಬು ವತಾರೆ, ಚನ್ನವೀರಸ್ವಾಮಿ ಹಾಗೂ ಮಲ್ಲಿಕಾರ್ಜುನ ಪಾರಶೇಟೆ ಉಪಸ್ಥಿತರಿದ್ದರು.

ಈ ಘಟನೆ ಹಿನ್ನೆಲೆಯಲ್ಲಿ ಸ್ಥಳೀಯರು ಜಾನುವಾರು ಸಾಗಾಣಿಕೆಯಲ್ಲಿ ಎಚ್ಚರತೆ ವಹಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದಾರೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

10 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

10 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

10 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

10 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago