ಹುಬ್ಬಳ್ಳಿ-ಧಾರವಾಡದಲ್ಲಿ ಭಯ ಹುಟ್ಟಿಸುತ್ತಿದ್ದ ರೌಡಿಶಾಹಿಗೆ ಕಡಿವಾಣ ಹಾಕಲು ಪೊಲೀಸರು ಕೈಗೊಳ್ಳುತ್ತಿರುವ ಕ್ರಮಗಳು ಇದೀಗ ಗಂಭೀರ ರೂಪ ಪಡೆದಿವೆ.ಹುಬ್ಬಳ್ಳಿ-ಧಾರವಾಡದಲ್ಲಿ ಅಪರಾಧದ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆ ಕಠಿಣ ನಿಟ್ಟಿನ ಹೊಸ ಯುದ್ಧಯಂತ್ರ ಚಾಲನೆ ಮಾಡಿದೆ.
ಈ ನಗರದಲ್ಲಿ ಕೊಲೆ, ಸುಲಿಗೆ, ಹಫ್ತಾ ವಸೂಲಿ, ಮೀಟರ್ ಬಡ್ಡಿ, ದಬ್ಬಾಳಿಕೆ, ಅತ್ಯಾಚಾರ, ದರೋಡೆ ಸೇರಿ ಹಲವು ಅಪರಾಧ ಕೃತ್ಯಗಳಲ್ಲಿ ರೌಡಿಶೀಟರ್ಗಳ ಭಾಗವಹಿಸುವಿಕೆ ಹೆಚ್ಚುತ್ತಿರುವುದು ಪೊಲೀಸರ ಕಣ್ಗಾವಲಿಗೆ ಬಂದಿದೆ. ಇಂಥ ಪರಿಸ್ಥಿತಿಗೆ ತಡೆ ನೀಡಲು, ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ನೇತೃತ್ವದ ಪೊಲೀಸ್ ತಂಡ ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಗಿದೆ.
ಪ್ರಸ್ತುತ ಧಾರವಾಡ-ಹುಬ್ಬಳ್ಳಿ ನಗರದಲ್ಲಿ 1,700ಕ್ಕೂ ಹೆಚ್ಚು ರೌಡಿಶೀಟರ್ಗಳು ಇದ್ದಾರೆ. ಈ ಸಂಖ್ಯೆ ಪ್ರದೇಶದ ಪೊಲೀಸರಿಗಿಂತ ಹೆಚ್ಚಾಗಿದ್ದು, ಸಾರ್ವಜನಿಕ ಭದ್ರತೆ ಹಾಗೂ ಶಾಂತಿಗೆ ಅಪಾಯವಾಗುತ್ತಿದೆ. ಇದನ್ನೆ ಗಮನದಲ್ಲಿ ಇಟ್ಟುಕೊಂಡು, ನಗರದ ಶಾಂತಿಗೆ ಧಕ್ಕೆಯಾಗಬಾರದು ಎಂಬ ದೃಷ್ಟಿಯಿಂದ ಪೊಲೀಸರು ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ ಅಡಿಯಲ್ಲಿ ಕ್ರಮ ಕೈಗೊಂಡಿದ್ದಾರೆ.
ಇತ್ತೀಚೆಗೆ ಖಾತರಿಯಾದ ನಾಲ್ವರು ರೌಡಿಗಳಾದ ಸಾಗರ್ ಲಕ್ಕುಂಡಿ, ಸೈಂಟಿಸ್ಟ್ ಮಂಜ್ಯಾ, ದಾವೂದ ನದಾಫ್ ಮತ್ತು ಲಕ್ಷ್ಮಣ್ ವಿರುದ್ಧ ಗೂಂಡಾ ಕಾಯ್ದೆ ಜಾರಿಗೆ ತರಲಾಗಿದೆ. ಇವರನ್ನು ಕಲಬುರ್ಗಿ, ಮೈಸೂರು ಮತ್ತು ಇತರೆ ಜೈಲುಗಳಿಗೆ ಶಿಫ್ಟ್ ಮಾಡಿ, ನಗರದಿಂದ ದೂರ ಇಡಲಾಗಿದೆ. ಈ ನಾಲ್ವರ ವಿರುದ್ಧ 10-15 ಗಂಭೀರ ಅಪರಾಧ ಪ್ರಕರಣಗಳು ದಾಖಲಾಗಿದ್ದು, ಬಹುಪಟ್ಟು ಕೊಲೆ ಮತ್ತು ಕೊಲೆಗೆ ಯತ್ನ ಸೇರಿವೆ.
ಈ ಮೊದಲು ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ಅವರು ತಮ್ಮ ಅಪರಾಧ ಚಟುವಟಿಕೆಯನ್ನು ಮುಂದುವರೆಸಿದ ಕಾರಣ, ಪೊಲೀಸರು ಅಂತಿಮವಾಗಿ ಗೂಂಡಾ ಕಾಯ್ದೆ ಜಾರಿಗೆ ತರಬೇಕಾಯಿತು.
ಈ ಕ್ರಮ ಹೊಸದಿಲ್ಲ. ಈವರೆಗೆ ಕೂಡ ಜನವರಿಯಿಂದ ಜೂನ್ವರೆಗೆ ಒಟ್ಟು 83 ರೌಡಿಗಳನ್ನು ಗಡಿಪಾರು ಮಾಡಲಾಗಿದೆ. ಜನವರಿಯೊಂದರಲ್ಲೇ 52 ರೌಡಿಗಳನ್ನು ನಗರದಿಂದ ಹೊರಹಾಕಲಾಗಿದ್ದು, ಇತ್ತೀಚೆಗೆ ಮತ್ತೆ 31 ರೌಡಿಗಳನ್ನು ಗಡಿಪಾರು ಮಾಡಲಾಗಿದೆ.
“ನಗರದಲ್ಲಿ ಶಾಂತಿ ಸ್ಥಾಪನೆ ನಮ್ಮ ಮೊದಲ ಗುರಿ. ಯಾರೇ ಆಗಲಿ, ಕಾನೂನು ಬಾಹಿರವಾಗಿ ವರ್ತಿಸಿದರೆ ಕಠಿಣ ಕ್ರಮ ಅನಿವಾರ್ಯ,” ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ. ಈ ಮೂಲಕ ರೌಡಿಗಳ ಬೆವರಿಸುವ ದಿನಗಳು ಆರಂಭವಾಗಿದ್ದು, ಶಾಂತಿಯುತ ನಗರ ನಿರ್ಮಾಣದತ್ತ ಹೆಜ್ಜೆ ಇಡಲಾಗಿದೆ. ವರದಿ: ಶಿವು ಪಿ.ಆರ್.
ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…