Latest

ಬೇಕರಿ ತಿನಸು ಪ್ರಿಯರೇ ಎಚ್ಚರ; ಅಯ್ಯಂಗಾರ್ ಬೇಕರಿಯಲ್ಲಿ ಬೂಸ್ಟ್ ಬಂದ ಬ್ರೆಡ್ಡಿನಿಂದ ಕೇಕ್.

ಧಾರವಾಡ : ಜಿಲ್ಲೆಯ ತಾಲೂಕಿನಾದ್ಯಂತ ಹಳ್ಳಿ_ಹಳ್ಳಿಗಳಲ್ಲಿ ತಲೆ ಎತ್ತಿರುವ ಬೆಂಗಳೂರು ಅಯ್ಯಂಗಾರ್ ಬೇಕರಿ ಎಂಬ ತಿನಸಿನ ಉಗ್ರಾಣ… ಇಲ್ಲಿ ಬ್ರೆಡ್, ಕರಿದ ತಿನಸಿನ ಖಾದ್ಯ ಪದಾರ್ಥಗಳು, ಕಲಬೆರಕೆ ಕ್ರೀಮ್ ಬಳಿಸಿದ ಡಿಸೈನ್ ಕೇಕ್, ಒಂದಿಷ್ಟು ಆರೊಗ್ಯಕ್ಕೆ ಮಾದಕವಾದ ರಾಸಾಯನಿಕ ಮಿಶ್ರಿತ ತಂಪಾದ ಪಾಣಿಯಗಳು, ಈ ತರಹದ ತಿನಿಸುಗಳಿಂದ ರಂಗುರಂಗಿನ ಲೈಟ್‌ ಬೆಳಕಿನಿಂದ ಕೂಡಿದ ಉಗ್ರಾಣ.

ಆರೋಗ್ಯ ಇಲಾಖೆಗಳು ಎಷ್ಟೆ ಹೇಳಿದರು ಕೇಳದ ಜನ. ಇದನ್ನೆ ಬಂಡವಾಳ ಮಾಡಿಕೊಂಡ ಇವರುಗಳು ಮನಸ್ಸಿಗೆ ಬಂದಂತೆ ಬೇಜವಾಬ್ದಾರಿತನದಿಂದ ತಯಾರಿಸಿದ ಖಾದ್ಯ ಪದಾರ್ಥಗಳು, ಇದನ್ನು ಉಪಯೋಸುವುದರಿಂದ ಆರೋಗ್ಯದ ಮೇಲೆ ಬಾರಿ ಪ್ರಮಾಣದ ಹಾನಿಕಾರಕ. ಗೊತ್ತಿದ್ದೊ ಗೊತ್ತಿಲ್ಲದೊ ಸಾರ್ವಜನಿಕರು ಮೊರೆಹೊಗಿರುವುದು ಬೆಸರದ ಸಂಗತಿ. ಹಿಗೊಂದು ತಿನಸಿನ ಉಗ್ರಾಣ ವಿಶೇಷವಾಗಿ ಕಂಡಿದ್ದು ಧಾರವಾಡ ಜಿಲ್ಲೆಯ ಹೇಬ್ಬಳ್ಳಿ ಗ್ರಾಮದಲ್ಲಿ ಗ್ರಾಮಪಂಚಾಯತ ಎದರುಗಡೆ ಇರುವ ಕಾಂಪ್ಲೆಕ್ಸ್ ನಲ್ಲಿ ಬೆಂಗಳೂರು ಅಯ್ಯಂಗಾರ್ ಬೆಕರಿ ಕೆಕ್ ಪ್ಯಾಲೆಸ್ ಅಂತಾ ಬೋರ್ಡ ತಗಲಾಕೊಂಡು ಸಾರ್ವಜನಿಕರಿಗೆ ಹಾಡು ಹಗಲಿನಲೆ ವಿಷ ತಿನಸುತ್ತಿದ್ದಾರೆ . ಕಲಬೆರಕೆ ಮಿಶ್ರಿತ ಕ್ರೀಮ್ ಬಳಸಿದ ಕೇಕ್ ಶಿಲ್ಕು ಉಳಿದ ಕೆಟ್ಟ ಬ್ರೇಡ್‌ ಬಳಸಿ ಕೇಕ್ ತಯಾರಿಸಿ ರಾತ್ರಿ ಹೊತ್ತು ಒಯ್ಯುವ ಗ್ರಾಹಕರಿಗೆ ಮೋಸ ಮಾಡುವುದು ಇವರಿಗೆ ಹೊಸದೆನ್ನಲ್ಲ .

ಸಾಮಾನ್ಯವಾಗಿ ರಾತ್ರಿ ಸಮಯದಲ್ಲೆ ಜನ್ಮ ದಿನ ಆಚರಿಸುವುದು. ಹಳ್ಳಿ ಜನ ಜೀವನದ ಶೈಲಿ . ಅದರಂತೆ ದಿನಾಂಕ 16/ 02 / 2023 ರಂದು ಎಲ್ಲರಿಗೂ ತಿಳಿದಿರುವಂತೆ “ಡಿ .ಬಾಸ್ . ದರ್ಶನ ರವರ ಜನ್ಮದಿನವಿದ್ದು ಶಾಲಾ ಮಕ್ಕಳು ಇವರ ಅಂಗಡಿಯಲ್ಲಿ ಕೇಕ್ ಖರಿದಿಸಿದ್ದು ತಂದು ಡಿ ಬಾಸ್ ರವರ ಹುಟ್ಟುಹಬ್ಬವನ್ನು ಆಚರಿಸಿ ಕೇಕ್ ತಿಂದು ಸಂಬ್ರಮಿಸಿದ್ದು ಮರುದಿನ ಇ‌ನ್ನೂಳಿದ ಕೇಕ್ ಬೆಳಕಿನಲ್ಲಿ ನೋಡಿ ಮಕ್ಕಳು ಮುಜಗೂರಗೊಂಡು ವಾಂತಿ ಬೆದಿ ಮಾಡಿಕೊಂಡಿರುತ್ತಾರೆ. ಕೇಕ್ ಮಾಡುವುದಕ್ಕೆ ಬಳಸಿರುವ ಬ್ರೆಡ್ ಒಳಗೆಲ್ಲ ಬೂಸ್ಟ್ ಬಂದು ಕಪ್ಪಾಗಿರುತ್ತದೆ. ರಾತ್ರಿಯ ಸಮಯದಲ್ಲಿ ಮಕ್ಕಳು ಇದನ್ನು ಕ್ರೀಮ್ ಎಂದು ಭಾವಿಸಿ ತಿಂದಿರುತ್ತಾರೆ ಬೆಳಗ್ಗೆ ಎದ್ದು ನೋಡಿದ ಮೇಲೆ ಇವರಿಗೆ ಗೊತ್ತಾಗಿರುವುದು ಕೇಕಿನ ಒಳಗೆಲ್ಲ ಬೂಸ್ಟ್ ಬಂದಿದೆ ಎಂದು.

ಸದ್ಯ ಮಕ್ಕಳಿಗೆ ಯಾವುದೇ ರೀತಿಯ ಆರೊಗ್ಯದಲ್ಲಿ ತೊಂದರೆಯಾಗಿಲ್ಲ. ಈ ವಿಚಾರವನ್ನು ಸ್ಥಳೀಯರು ಪ್ರಶ್ನಿಸಲು ಅಂಗಡಿಯವರ ಬಳಿಗೆ ಹೋದರೆ ಅದಕ್ಕೂ ಇವರಿಗೂ ಸಂಬಂಧವೇ ಇಲ್ಲದವರ ಹಾಗೆ ಅಂಗಡಿಯವರ ವರ್ತಿಸಿದ್ದಾರೆ. ಮುಗ್ದ ಜನರ ಆರೋಗ್ಯದ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಸಂಬಂಧಿಸಿದ ಫುಡ್ ಇನ್ಸ್ಪೆಕ್ಟರ್ ಇಂತಹ ಬೇಜವಾಬ್ದಾರಿ ಅಂಗಡಿ ಮಾಲಕರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕಿದೆ.
ವರದಿ : ಚರಂತಯ್ಯ ಹಿರೇಮಠ

ಭ್ರಷ್ಟರ ಬೇಟೆ

Recent Posts

ಟಿಪ್ಪರ್ ಡಿಕ್ಕಿ, ನಂತರ ಗುಂಡಿನ ದಾಳಿ: ವಿಜಯಪುರದಲ್ಲಿ ಸಿನಿಮಾ ಶೈಲಿಯ ಹತ್ಯೆ ಪ್ರಕರಣ

ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…

28 minutes ago

ವಿದೇಶಿ ಮಹಿಳೆ ಮೇಲೆ ದೌರ್ಜನ್ಯ ಆರೋಪ: ಕೊಡಗಿನಲ್ಲಿ ಹೋಂಸ್ಟೇ ಪರವಾನಗಿ ರದ್ದು

ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…

30 minutes ago

WFH ಕೇಳಿದ ಮಹಿಳೆಗೆ HR ಶಾಕ್: ‘ಸಿಇಒ ಮನೋಭಾವ ಬೇಕು’ ಹೇಳಿ ಕರೆ ಕಟ್!

ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಾಗ ಕೆಲಸದ ಸಮಯ, ದಿನಗಳು ಮತ್ತು ಸೌಲಭ್ಯಗಳ ಬಗ್ಗೆ ಪ್ರಶ್ನಿಸುವುದು ಸಾಮಾನ್ಯ. ಆದರೆ ಇಂತಹ ಸರಳ ಪ್ರಶ್ನೆಯೇ…

31 minutes ago

ನಕಲಿ ದಾಖಲೆಗಳಿಂದ 9 ಎಕರೆ ಸರ್ಕಾರಿ ಜಮೀನು ಹಗರಣ: ನಿವೃತ್ತ ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ ಪ್ರಕರಣ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಭೂ ಹಗರಣೊಂದು ಬೆಳಕಿಗೆ ಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 9 ಎಕರೆ…

33 minutes ago

₹300 ಲಂಚಕ್ಕೆ ‘ಪರೀಕ್ಷೆ ಮಾರಾಟ’: ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಬಳಕೆ, ಶಿಕ್ಷಣ ವ್ಯವಸ್ಥೆಗೆ ಕಳಂಕ

ಮಹಾರಾಷ್ಟ್ರದ ಚಂದ್ರಾಪುರದಲ್ಲಿರುವ ಸರ್ವೋದಯ ಕಾಲೇಜಿನಲ್ಲಿ ನಡೆದ ಪರೀಕ್ಷಾ ಅಕ್ರಮವು ಶಿಕ್ಷಣ ವ್ಯವಸ್ಥೆಯ ನೈತಿಕತೆಯ ಮೇಲೆಯೇ ಪ್ರಶ್ನೆ ಎಬ್ಬಿಸಿದೆ. ಕವಿಕುಲಗುರು ಕಾಳಿದಾಸ…

35 minutes ago

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಗನ ಹತ್ಯೆ: 60 ವರ್ಷದ ತಾಯಿ ಬಂಧನ

ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…

16 hours ago