Latest

ಬೇಕರಿ ತಿನಸು ಪ್ರಿಯರೇ ಎಚ್ಚರ; ಅಯ್ಯಂಗಾರ್ ಬೇಕರಿಯಲ್ಲಿ ಬೂಸ್ಟ್ ಬಂದ ಬ್ರೆಡ್ಡಿನಿಂದ ಕೇಕ್.

ಧಾರವಾಡ : ಜಿಲ್ಲೆಯ ತಾಲೂಕಿನಾದ್ಯಂತ ಹಳ್ಳಿ_ಹಳ್ಳಿಗಳಲ್ಲಿ ತಲೆ ಎತ್ತಿರುವ ಬೆಂಗಳೂರು ಅಯ್ಯಂಗಾರ್ ಬೇಕರಿ ಎಂಬ ತಿನಸಿನ ಉಗ್ರಾಣ… ಇಲ್ಲಿ ಬ್ರೆಡ್, ಕರಿದ ತಿನಸಿನ ಖಾದ್ಯ ಪದಾರ್ಥಗಳು, ಕಲಬೆರಕೆ ಕ್ರೀಮ್ ಬಳಿಸಿದ ಡಿಸೈನ್ ಕೇಕ್, ಒಂದಿಷ್ಟು ಆರೊಗ್ಯಕ್ಕೆ ಮಾದಕವಾದ ರಾಸಾಯನಿಕ ಮಿಶ್ರಿತ ತಂಪಾದ ಪಾಣಿಯಗಳು, ಈ ತರಹದ ತಿನಿಸುಗಳಿಂದ ರಂಗುರಂಗಿನ ಲೈಟ್‌ ಬೆಳಕಿನಿಂದ ಕೂಡಿದ ಉಗ್ರಾಣ.

ಆರೋಗ್ಯ ಇಲಾಖೆಗಳು ಎಷ್ಟೆ ಹೇಳಿದರು ಕೇಳದ ಜನ. ಇದನ್ನೆ ಬಂಡವಾಳ ಮಾಡಿಕೊಂಡ ಇವರುಗಳು ಮನಸ್ಸಿಗೆ ಬಂದಂತೆ ಬೇಜವಾಬ್ದಾರಿತನದಿಂದ ತಯಾರಿಸಿದ ಖಾದ್ಯ ಪದಾರ್ಥಗಳು, ಇದನ್ನು ಉಪಯೋಸುವುದರಿಂದ ಆರೋಗ್ಯದ ಮೇಲೆ ಬಾರಿ ಪ್ರಮಾಣದ ಹಾನಿಕಾರಕ. ಗೊತ್ತಿದ್ದೊ ಗೊತ್ತಿಲ್ಲದೊ ಸಾರ್ವಜನಿಕರು ಮೊರೆಹೊಗಿರುವುದು ಬೆಸರದ ಸಂಗತಿ. ಹಿಗೊಂದು ತಿನಸಿನ ಉಗ್ರಾಣ ವಿಶೇಷವಾಗಿ ಕಂಡಿದ್ದು ಧಾರವಾಡ ಜಿಲ್ಲೆಯ ಹೇಬ್ಬಳ್ಳಿ ಗ್ರಾಮದಲ್ಲಿ ಗ್ರಾಮಪಂಚಾಯತ ಎದರುಗಡೆ ಇರುವ ಕಾಂಪ್ಲೆಕ್ಸ್ ನಲ್ಲಿ ಬೆಂಗಳೂರು ಅಯ್ಯಂಗಾರ್ ಬೆಕರಿ ಕೆಕ್ ಪ್ಯಾಲೆಸ್ ಅಂತಾ ಬೋರ್ಡ ತಗಲಾಕೊಂಡು ಸಾರ್ವಜನಿಕರಿಗೆ ಹಾಡು ಹಗಲಿನಲೆ ವಿಷ ತಿನಸುತ್ತಿದ್ದಾರೆ . ಕಲಬೆರಕೆ ಮಿಶ್ರಿತ ಕ್ರೀಮ್ ಬಳಸಿದ ಕೇಕ್ ಶಿಲ್ಕು ಉಳಿದ ಕೆಟ್ಟ ಬ್ರೇಡ್‌ ಬಳಸಿ ಕೇಕ್ ತಯಾರಿಸಿ ರಾತ್ರಿ ಹೊತ್ತು ಒಯ್ಯುವ ಗ್ರಾಹಕರಿಗೆ ಮೋಸ ಮಾಡುವುದು ಇವರಿಗೆ ಹೊಸದೆನ್ನಲ್ಲ .

ಸಾಮಾನ್ಯವಾಗಿ ರಾತ್ರಿ ಸಮಯದಲ್ಲೆ ಜನ್ಮ ದಿನ ಆಚರಿಸುವುದು. ಹಳ್ಳಿ ಜನ ಜೀವನದ ಶೈಲಿ . ಅದರಂತೆ ದಿನಾಂಕ 16/ 02 / 2023 ರಂದು ಎಲ್ಲರಿಗೂ ತಿಳಿದಿರುವಂತೆ “ಡಿ .ಬಾಸ್ . ದರ್ಶನ ರವರ ಜನ್ಮದಿನವಿದ್ದು ಶಾಲಾ ಮಕ್ಕಳು ಇವರ ಅಂಗಡಿಯಲ್ಲಿ ಕೇಕ್ ಖರಿದಿಸಿದ್ದು ತಂದು ಡಿ ಬಾಸ್ ರವರ ಹುಟ್ಟುಹಬ್ಬವನ್ನು ಆಚರಿಸಿ ಕೇಕ್ ತಿಂದು ಸಂಬ್ರಮಿಸಿದ್ದು ಮರುದಿನ ಇ‌ನ್ನೂಳಿದ ಕೇಕ್ ಬೆಳಕಿನಲ್ಲಿ ನೋಡಿ ಮಕ್ಕಳು ಮುಜಗೂರಗೊಂಡು ವಾಂತಿ ಬೆದಿ ಮಾಡಿಕೊಂಡಿರುತ್ತಾರೆ. ಕೇಕ್ ಮಾಡುವುದಕ್ಕೆ ಬಳಸಿರುವ ಬ್ರೆಡ್ ಒಳಗೆಲ್ಲ ಬೂಸ್ಟ್ ಬಂದು ಕಪ್ಪಾಗಿರುತ್ತದೆ. ರಾತ್ರಿಯ ಸಮಯದಲ್ಲಿ ಮಕ್ಕಳು ಇದನ್ನು ಕ್ರೀಮ್ ಎಂದು ಭಾವಿಸಿ ತಿಂದಿರುತ್ತಾರೆ ಬೆಳಗ್ಗೆ ಎದ್ದು ನೋಡಿದ ಮೇಲೆ ಇವರಿಗೆ ಗೊತ್ತಾಗಿರುವುದು ಕೇಕಿನ ಒಳಗೆಲ್ಲ ಬೂಸ್ಟ್ ಬಂದಿದೆ ಎಂದು.

ಸದ್ಯ ಮಕ್ಕಳಿಗೆ ಯಾವುದೇ ರೀತಿಯ ಆರೊಗ್ಯದಲ್ಲಿ ತೊಂದರೆಯಾಗಿಲ್ಲ. ಈ ವಿಚಾರವನ್ನು ಸ್ಥಳೀಯರು ಪ್ರಶ್ನಿಸಲು ಅಂಗಡಿಯವರ ಬಳಿಗೆ ಹೋದರೆ ಅದಕ್ಕೂ ಇವರಿಗೂ ಸಂಬಂಧವೇ ಇಲ್ಲದವರ ಹಾಗೆ ಅಂಗಡಿಯವರ ವರ್ತಿಸಿದ್ದಾರೆ. ಮುಗ್ದ ಜನರ ಆರೋಗ್ಯದ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಸಂಬಂಧಿಸಿದ ಫುಡ್ ಇನ್ಸ್ಪೆಕ್ಟರ್ ಇಂತಹ ಬೇಜವಾಬ್ದಾರಿ ಅಂಗಡಿ ಮಾಲಕರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕಿದೆ.
ವರದಿ : ಚರಂತಯ್ಯ ಹಿರೇಮಠ

ಭ್ರಷ್ಟರ ಬೇಟೆ

Recent Posts

ಮುಂಡಗೋಡದ ಇಬ್ಬರು ಭ್ರಷ್ಟರಿಗೆ ಲೋಕಾಯುಕ್ತ ಶಾಕ್!

ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…

3 hours ago

ಇಬ್ಬರು ಪತ್ನಿಯರಿದ್ದರೂ ಅಪ್ರಾಪ್ತೆಯ ಮೇಲೆ ಅತ್ಯಾಚಾರ ವ್ಯಸಗಿ ಮದುವೆಯಾದ: 45 ವರ್ಷದ ವ್ಯಕ್ತಿ ಪೋಕ್ಸೋ ಅಡಿಯಲ್ಲಿ ಬಂಧನ

ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…

3 hours ago

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

22 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

1 day ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

1 day ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

1 day ago