Latest

ಮಧ್ಯರಾತ್ರಿ ಪಾರ್ಟಿ ಮುಗಿಸಿ ಬರುತ್ತಿದ್ದ ದಂಪತಿಯನ್ನು ತಡೆದು ಹಣ ಸುಲಿಗೆ; ಇಬ್ಬರು ಹೊಯ್ಸಳ ಪೊಲೀಸರು ಅಮಾನತು!

ದಂಪತಿ ಪಕ್ಕದ ಮನೆಯ ಸ್ನೇಹಿತರ ಬರ್ತ್‌ಡೇ ಪಾರ್ಟಿಗೆ ಹೋಗಿದ್ದರು. ಪಾರ್ಟಿ ಮುಗಿಸಿ ಮನೆಗೆ ಹೋಗುವಾಗ ಮಧ್ಯರಾತ್ರಿ 12.30 ಆಗಿತ್ತು. ಜಿಟಿ ಜಿಟಿ ಮಳೆಯೊಂದಿಗೆ ವೇಗವಾಗಿ ಹೆಜ್ಜೆ ಹಾಕಿ ಮನೆಗೆ ಸೇರಲು ಮುಂದಾದವರನ್ನು ಅಡ್ಡಗಟ್ಟಿದ ಹೊಯ್ಸಳದ ಬೀಟ್‌ ಪೊಲೀಸರು ಹಣಕ್ಕಾಗಿ ಪೀಡಿಸಿದ ಘಟನೆ ಬೆಳಕಿಗೆ ಬಂದಿದೆ.
ಮಾನ್ಯತಾ ಟೆಕ್​ಪಾರ್ಕ್​ ಬಳಿ ಪಾರ್ಟಿ ಮುಗಿಸಿ ಬರುತ್ತಿದ್ದ ಕಾರ್ತಿಕ್ ಪೆತ್ರಿ ದಂಪತಿಯನ್ನು ಹೊಯ್ಸಳ ಪೊಲೀಸರು ತಡೆದಿದ್ದಾರೆ. ಮಧ್ಯರಾತ್ರಿ ಓಡಾಡುವುದು ಕಾನೂನು ಬಾಹಿರ, ಇದಕ್ಕಾಗಿ ದಂಡ ಕಟ್ಟಬೇಕೆಂದು ತಾಕೀತು ಮಾಡಿದ್ದಾರೆ. ಮಧ್ಯರಾತ್ರಿ ಓಡಾಟದ ನಿರ್ಬಂಧದ ಕುರಿತು ನಮಗೆ ಮಾಹಿತಿ ಇಲ್ಲ, ತಡರಾತ್ರಿ ಓಡಾಟಕ್ಕೆ ಕ್ಷಮೆಯಾಚಿಸುತ್ತೇವೆ ಎಂದು ದಂಪತಿ ಮನವಿ ಮಾಡಿದ್ದರಂತೆ. ಆದರೆ ವಸೂಲಿಗಾಗಿ ಕಾದುಕುಳಿತವರಂತೆ ಮೊದಲು ದಂಪತಿ ಬಳಿಯಿದ್ದ ಮೊಬೈಲ್‌ ಕಸಿದ ಪೊಲೀಸರು ₹3000ಕ್ಕೆ ಬೇಡಿಕೆ ಇಟ್ಟಿದ್ದರಂತೆ. ಈ ವೇಳೆ ದಂಪತಿ ಹಣ ಯಾಕಾಗಿ ಕೊಡಬೇಕೆಂದು ಪ್ರಶ್ನಿಸಿದಾಗ ಮಾತಿನ ಚಕಮಕಿಯಾಗಿದೆ. ದಂಪತಿ ಹಣ ಕೊಡುವುದಿಲ್ಲ ಎಂದಾಗ ಆ ಪೊಲೀಸರು ಬೆದರಿಕೆ ಹಾಕಿ ಬಂಧಿಸುವುದಾಗಿ ಹೇಳಿದ್ದರಂತೆ.
ಅಸಲಿ ಪೊಲೀಸರೋ ನಕಲಿ ಪೊಲೀಸರು ಎಂದು ತಿಳಿಯದ ದಂಪತಿ ಅಸಹಾಯಕತೆಯಿಂದ ಅವರ ಬೆದರಿಕೆಗೆ ಅಂಜಿ ಬಳಿಕ 3000 ರೂ. ಬದಲಾಗಿ 1000 ರೂ. ಡಿಜಿಟಲ್ ಪೇಮೆಂಟ್​ ಮಾಡಿದ್ದಾರೆ. ಹಣ ಕೊಟ್ಟ ಬಳಿಕ ದಂಪತಿಯನ್ನು ಪೊಲೀಸರು ಬಿಟ್ಟು ಕಳಿಸಿದ್ದಾರೆ. ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹೊಯ್ಸಳ ಪೊಲೀಸರು ಯಾಕಾಗಿ ನಮ್ಮಿಂದ ಹಣ ಪಡೆದಿದ್ದಾರೆ ಎಂಬುದೇ ಗೊತ್ತಿಲ್ಲ. 11 ಗಂಟೆ ನಂತರ ಹೊರಗೆ ಓಡಾಡಬಾರದು ಎಂದಿರುವ ಪೊಲೀಸರು, ಆಧಾರ್ ಕಾರ್ಡ್ ತೋರಿಸುವಂತೆ ಹೇಳಿದರು ಎಂದು ದಂಪತಿ ಹೇಳಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕಾರ್ತಿಕ್‌ ಬೆಂಗಳೂರು ನಗರ ಪೊಲೀಸರಿಗೆ ಟ್ವೀಟ್‌ ಮಾಡಿದ್ದಾರೆ. ಕಾನೂನು ರಕ್ಷಕರೇ ಕಾನೂನು ಮುರಿದರೆ ನಾಗಕರಿಕರನ್ನು ಕಾಪಾಡುವವರು ಯಾರು? ಇದೊಂದು ರೀತಿ ಭಯೋತ್ಪಾದಕತೆ ಅಲ್ಲವೇ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.
ಕ್ರಮ ಕೈಗೊಳ್ಳುವುದಾಗಿ ರೀಟ್ವೀಟ್‌ ಮಾಡಿದ ಡಿಸಿಪಿ ಅಸೂಪ್‌ ಶೆಟ್ಟಿ
ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರಿಂದ ತೀವ್ರ ಆಕ್ರೋಶ ಕೇಳಿ ಬರುತ್ತಿದ್ದಂತೆ ಕಾರ್ತಿಕ್‌ ಟ್ವೀಟ್‌ಗೆ ರೀಟ್ವೀಟ್‌ ಮಾಡಿರುವ ಈಶಾನ್ಯ ವಿಭಾಗದ ಡಿಸಿಪಿ ಅನೂಪ್ ಶೆಟ್ಟಿ, ಹೊಯ್ಸಳ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳುವುದಾಗಿ ಪ್ರತಿಕ್ರಿಯಿಸಿದ್ದರು.
ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅನೂಪ್‌ ಶೆಟ್ಟಿ, ಟ್ವಿಟರ್ ಮೂಲಕ ನಮಗೆ ಹೊಯ್ಸಳ ಪೊಲೀಸರು ಬೀಟ್‌ನಲ್ಲಿದ್ದಾಗ ದಂಪತಿ ಬಳಿ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸಂತ್ರಸ್ತರನ್ನು ಸಂಪರ್ಕಿಸಿ ಮಾಹಿತಿ ಕಲೆ ಹಾಕಲಾಗುತ್ತಿದೆ. ಹೊಯ್ಸಳದಲ್ಲಿದ್ದ ಸಿಬ್ಬಂದಿ ಕ್ಯೂಆರ್ ಕೋಡ್ ಮೂಲಕ 1,000 ರೂಪಾಯಿ ಪಡೆದಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ ಎಂದು ತಿಳಿಸಿದ್ದರು.
ಹೊಯ್ಸಳ ಸಿಬ್ಬಂದಿ ಹೆಡ್‌ ಕಾನ್‌ಸ್ಟೇಬಲ್‌ ರಾಜೇಶ್, ಪೊಲೀಸ್‌ ಕಾನ್‌ಸ್ಟೇಬಲ್‌ ನಾಗೇಶ್ ಎಂಬುವರನ್ನು ಅಮಾನತು ಮಾಡಿರುವುದಾಗಿ ಡಿಸಿಪಿ ಅನೂಪ್‌ ಆ ಬಳಿಕ ಮಾಹಿತಿ ನೀಡಿದ್ದಾರೆ. ದಂಪತಿ ಮನೆ ಪಕ್ಕ ಸ್ನೇಹಿತರೊಬ್ಬರ ಬರ್ತ್‌ಡೇ ಇರುವುದರಿಂದ ಅಲ್ಲಿಗೆ ಹೋಗಿದ್ದರು. ಪಾರ್ಟಿ ಮುಗಿಸಿ ಬರುವಾಗ ಪೊಲೀಸರು ಮಾಹಿತಿ ಕೇಳಿದ್ದು, ಈ ವೇಳೆ ಅವರ ಬಳಿ ಒಂದು ಸಾವಿರ ಹಣ ಪಡೆದಿರುವುದು ಗೊತ್ತಾಗಿದೆ. ಹೀಗಾಗಿ ಇಬ್ಬರು ಪೊಲೀಸರನ್ನು ಅಮಾನತ್ತಿನಲ್ಲಿಟ್ಟಿದ್ದೇವೆ. 11 ಗಂಟೆ ನಂತರ ಓಡಾಡಬಾರದು ಎಂಬ ಯಾವ ನಿರ್ಬಂಧವೂ ಇಲ್ಲ. ಅನುಮಾನ ಬಂದಾಗಷ್ಟೇ ಮಾಹಿತಿ ಕಲೆ ಹಾಕಿ, ಪರಿಶೀಲಿಸಿ ಕಳುಹಿಸಬೇಕಾಗುತ್ತದೆ. ಆದರೆ ಪೊಲೀಸ್‌ ಸಿಬ್ಬಂದಿ ಹಣ ಪಡೆದಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದ್ದು, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದಿದ್ದಾರೆ.
ಯಾವುದೇ ಬಿಕ್ಕಟ್ಟಿನಲ್ಲಿ ದಯವಿಟ್ಟು 112ಕ್ಕೆ ಕರೆ ಮಾಡಿ, ಇದು ದಾಖಲಿತ ಕರೆಯಾಗಿದೆ. ಪೊಲೀಸ್ ಇಲಾಖೆಯಲ್ಲಿ ಯಾರೂ ಶಕ್ತಿವಂತರಲ್ಲ ಎಂದು ಮಾಜಿ ಪೊಲೀಸ್‌ ಆಯುಕ್ತ ಹಾಗೂ ರಾಜ್ಯ ಎಎಪಿ ಪಕ್ಷದ ಉಪಾಧ್ಯಕ್ಷ ಭಾಸ್ಕರ್‌ ರಾವ್‌ ಟ್ವೀಟ್‌ ಮಾಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago