ದಂಪತಿ ಪಕ್ಕದ ಮನೆಯ ಸ್ನೇಹಿತರ ಬರ್ತ್ಡೇ ಪಾರ್ಟಿಗೆ ಹೋಗಿದ್ದರು. ಪಾರ್ಟಿ ಮುಗಿಸಿ ಮನೆಗೆ ಹೋಗುವಾಗ ಮಧ್ಯರಾತ್ರಿ 12.30 ಆಗಿತ್ತು. ಜಿಟಿ ಜಿಟಿ ಮಳೆಯೊಂದಿಗೆ ವೇಗವಾಗಿ ಹೆಜ್ಜೆ ಹಾಕಿ ಮನೆಗೆ ಸೇರಲು ಮುಂದಾದವರನ್ನು ಅಡ್ಡಗಟ್ಟಿದ ಹೊಯ್ಸಳದ ಬೀಟ್ ಪೊಲೀಸರು ಹಣಕ್ಕಾಗಿ ಪೀಡಿಸಿದ ಘಟನೆ ಬೆಳಕಿಗೆ ಬಂದಿದೆ.
ಮಾನ್ಯತಾ ಟೆಕ್ಪಾರ್ಕ್ ಬಳಿ ಪಾರ್ಟಿ ಮುಗಿಸಿ ಬರುತ್ತಿದ್ದ ಕಾರ್ತಿಕ್ ಪೆತ್ರಿ ದಂಪತಿಯನ್ನು ಹೊಯ್ಸಳ ಪೊಲೀಸರು ತಡೆದಿದ್ದಾರೆ. ಮಧ್ಯರಾತ್ರಿ ಓಡಾಡುವುದು ಕಾನೂನು ಬಾಹಿರ, ಇದಕ್ಕಾಗಿ ದಂಡ ಕಟ್ಟಬೇಕೆಂದು ತಾಕೀತು ಮಾಡಿದ್ದಾರೆ. ಮಧ್ಯರಾತ್ರಿ ಓಡಾಟದ ನಿರ್ಬಂಧದ ಕುರಿತು ನಮಗೆ ಮಾಹಿತಿ ಇಲ್ಲ, ತಡರಾತ್ರಿ ಓಡಾಟಕ್ಕೆ ಕ್ಷಮೆಯಾಚಿಸುತ್ತೇವೆ ಎಂದು ದಂಪತಿ ಮನವಿ ಮಾಡಿದ್ದರಂತೆ. ಆದರೆ ವಸೂಲಿಗಾಗಿ ಕಾದುಕುಳಿತವರಂತೆ ಮೊದಲು ದಂಪತಿ ಬಳಿಯಿದ್ದ ಮೊಬೈಲ್ ಕಸಿದ ಪೊಲೀಸರು ₹3000ಕ್ಕೆ ಬೇಡಿಕೆ ಇಟ್ಟಿದ್ದರಂತೆ. ಈ ವೇಳೆ ದಂಪತಿ ಹಣ ಯಾಕಾಗಿ ಕೊಡಬೇಕೆಂದು ಪ್ರಶ್ನಿಸಿದಾಗ ಮಾತಿನ ಚಕಮಕಿಯಾಗಿದೆ. ದಂಪತಿ ಹಣ ಕೊಡುವುದಿಲ್ಲ ಎಂದಾಗ ಆ ಪೊಲೀಸರು ಬೆದರಿಕೆ ಹಾಕಿ ಬಂಧಿಸುವುದಾಗಿ ಹೇಳಿದ್ದರಂತೆ.
ಅಸಲಿ ಪೊಲೀಸರೋ ನಕಲಿ ಪೊಲೀಸರು ಎಂದು ತಿಳಿಯದ ದಂಪತಿ ಅಸಹಾಯಕತೆಯಿಂದ ಅವರ ಬೆದರಿಕೆಗೆ ಅಂಜಿ ಬಳಿಕ 3000 ರೂ. ಬದಲಾಗಿ 1000 ರೂ. ಡಿಜಿಟಲ್ ಪೇಮೆಂಟ್ ಮಾಡಿದ್ದಾರೆ. ಹಣ ಕೊಟ್ಟ ಬಳಿಕ ದಂಪತಿಯನ್ನು ಪೊಲೀಸರು ಬಿಟ್ಟು ಕಳಿಸಿದ್ದಾರೆ. ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹೊಯ್ಸಳ ಪೊಲೀಸರು ಯಾಕಾಗಿ ನಮ್ಮಿಂದ ಹಣ ಪಡೆದಿದ್ದಾರೆ ಎಂಬುದೇ ಗೊತ್ತಿಲ್ಲ. 11 ಗಂಟೆ ನಂತರ ಹೊರಗೆ ಓಡಾಡಬಾರದು ಎಂದಿರುವ ಪೊಲೀಸರು, ಆಧಾರ್ ಕಾರ್ಡ್ ತೋರಿಸುವಂತೆ ಹೇಳಿದರು ಎಂದು ದಂಪತಿ ಹೇಳಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕಾರ್ತಿಕ್ ಬೆಂಗಳೂರು ನಗರ ಪೊಲೀಸರಿಗೆ ಟ್ವೀಟ್ ಮಾಡಿದ್ದಾರೆ. ಕಾನೂನು ರಕ್ಷಕರೇ ಕಾನೂನು ಮುರಿದರೆ ನಾಗಕರಿಕರನ್ನು ಕಾಪಾಡುವವರು ಯಾರು? ಇದೊಂದು ರೀತಿ ಭಯೋತ್ಪಾದಕತೆ ಅಲ್ಲವೇ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.
ಕ್ರಮ ಕೈಗೊಳ್ಳುವುದಾಗಿ ರೀಟ್ವೀಟ್ ಮಾಡಿದ ಡಿಸಿಪಿ ಅಸೂಪ್ ಶೆಟ್ಟಿ
ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರಿಂದ ತೀವ್ರ ಆಕ್ರೋಶ ಕೇಳಿ ಬರುತ್ತಿದ್ದಂತೆ ಕಾರ್ತಿಕ್ ಟ್ವೀಟ್ಗೆ ರೀಟ್ವೀಟ್ ಮಾಡಿರುವ ಈಶಾನ್ಯ ವಿಭಾಗದ ಡಿಸಿಪಿ ಅನೂಪ್ ಶೆಟ್ಟಿ, ಹೊಯ್ಸಳ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳುವುದಾಗಿ ಪ್ರತಿಕ್ರಿಯಿಸಿದ್ದರು.
ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅನೂಪ್ ಶೆಟ್ಟಿ, ಟ್ವಿಟರ್ ಮೂಲಕ ನಮಗೆ ಹೊಯ್ಸಳ ಪೊಲೀಸರು ಬೀಟ್ನಲ್ಲಿದ್ದಾಗ ದಂಪತಿ ಬಳಿ ಹಣ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸಂತ್ರಸ್ತರನ್ನು ಸಂಪರ್ಕಿಸಿ ಮಾಹಿತಿ ಕಲೆ ಹಾಕಲಾಗುತ್ತಿದೆ. ಹೊಯ್ಸಳದಲ್ಲಿದ್ದ ಸಿಬ್ಬಂದಿ ಕ್ಯೂಆರ್ ಕೋಡ್ ಮೂಲಕ 1,000 ರೂಪಾಯಿ ಪಡೆದಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ ಎಂದು ತಿಳಿಸಿದ್ದರು.
ಹೊಯ್ಸಳ ಸಿಬ್ಬಂದಿ ಹೆಡ್ ಕಾನ್ಸ್ಟೇಬಲ್ ರಾಜೇಶ್, ಪೊಲೀಸ್ ಕಾನ್ಸ್ಟೇಬಲ್ ನಾಗೇಶ್ ಎಂಬುವರನ್ನು ಅಮಾನತು ಮಾಡಿರುವುದಾಗಿ ಡಿಸಿಪಿ ಅನೂಪ್ ಆ ಬಳಿಕ ಮಾಹಿತಿ ನೀಡಿದ್ದಾರೆ. ದಂಪತಿ ಮನೆ ಪಕ್ಕ ಸ್ನೇಹಿತರೊಬ್ಬರ ಬರ್ತ್ಡೇ ಇರುವುದರಿಂದ ಅಲ್ಲಿಗೆ ಹೋಗಿದ್ದರು. ಪಾರ್ಟಿ ಮುಗಿಸಿ ಬರುವಾಗ ಪೊಲೀಸರು ಮಾಹಿತಿ ಕೇಳಿದ್ದು, ಈ ವೇಳೆ ಅವರ ಬಳಿ ಒಂದು ಸಾವಿರ ಹಣ ಪಡೆದಿರುವುದು ಗೊತ್ತಾಗಿದೆ. ಹೀಗಾಗಿ ಇಬ್ಬರು ಪೊಲೀಸರನ್ನು ಅಮಾನತ್ತಿನಲ್ಲಿಟ್ಟಿದ್ದೇವೆ. 11 ಗಂಟೆ ನಂತರ ಓಡಾಡಬಾರದು ಎಂಬ ಯಾವ ನಿರ್ಬಂಧವೂ ಇಲ್ಲ. ಅನುಮಾನ ಬಂದಾಗಷ್ಟೇ ಮಾಹಿತಿ ಕಲೆ ಹಾಕಿ, ಪರಿಶೀಲಿಸಿ ಕಳುಹಿಸಬೇಕಾಗುತ್ತದೆ. ಆದರೆ ಪೊಲೀಸ್ ಸಿಬ್ಬಂದಿ ಹಣ ಪಡೆದಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದ್ದು, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದಿದ್ದಾರೆ.
ಯಾವುದೇ ಬಿಕ್ಕಟ್ಟಿನಲ್ಲಿ ದಯವಿಟ್ಟು 112ಕ್ಕೆ ಕರೆ ಮಾಡಿ, ಇದು ದಾಖಲಿತ ಕರೆಯಾಗಿದೆ. ಪೊಲೀಸ್ ಇಲಾಖೆಯಲ್ಲಿ ಯಾರೂ ಶಕ್ತಿವಂತರಲ್ಲ ಎಂದು ಮಾಜಿ ಪೊಲೀಸ್ ಆಯುಕ್ತ ಹಾಗೂ ರಾಜ್ಯ ಎಎಪಿ ಪಕ್ಷದ ಉಪಾಧ್ಯಕ್ಷ ಭಾಸ್ಕರ್ ರಾವ್ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…