ಪ್ರೀತಿಸಿದವಳು ಸಿಗಲಿಲ್ಲ ಎಂದು ಆಕೆಯನ್ನ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದ ದುಗ್ಗಮ್ಮ ದೇವಿ ಜಾತ್ರೆಯಲ್ಲಿ ನಡೆದಿದೆ. ಆರೋಪಿ ಮೂಕಪ್ಪನವರ ಹನುಮಂತನ ಎಂಬಾತ ಪ್ರತಿಭಾಳನ್ನ ಪ್ರೀತಿಸುವುದಾಗಿ ಹೇಳಿಕೊಂಡು ಗ್ರಾಮದಲ್ಲಿ ಸುತ್ತುತ್ತಿದ್ದ. ಇದಾದ ಬಳಿಕ ಪ್ರತಿಭಾಳನ್ನ ರಾಣೆಬೆನ್ನೂರಿನ ನಾಗರಾಜ್ ಎಂಬುವವರ ಜೊತೆ ಮದುವೆ ಮಾಡಿಕೊಡಲಾಗಿತ್ತು. ಆಕೆಗೆ ಓರ್ವ ಗಂಡು ಮಗು ಸಹ ಇದೆ.
ಮದುವೆಯಾದ ಬಳಿಕ ಚೆನ್ನಾಗಿ ಜೀವನ ನಡೆಸುತ್ತಿದ್ದ ಪ್ರತಿಭಾ ಚಿಕ್ಕಮ್ಮನ ಊರಿಗೆ ಜಾತ್ರೆಗೆ ಬಂದಿದ್ದಳು. ಇನ್ನೇನು ತನ್ನೂರಿಗೆ ಹೋಗಬೇಕು ಎನ್ನವಷ್ಟರಲ್ಲಿ ಪಾಗಲ್ ಪ್ರೇಮಿ ಹನುಮಂತ ಆಕೆಯನ್ನ ನಡು ರಸ್ತೆಯಲ್ಲಿ ಮನ ಬಂದಂತೆ ದೇಹದ ಬಹುತೇಕ ಭಾಗಳಿಗೆ ಚಾಕುವಿನಿಂದ ಇರಿದಿದ್ದಾನೆ. ತೀವ್ರಗಾಯಗೊಂಡಿದ್ದ ಮಹಿಳೆಯನ್ನ ಆಸ್ಪತ್ರೆಗೆ ದಾಖಲು ಮಾಡುವ ಮಾರ್ಗಮಧ್ಯಯೇ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ. ಈ ಕುರಿತು ಹಲವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮೂಕಪ್ಪನವರ ಹನುಮಂತನನ್ನು ಬಂಧಿಸಲಾಗಿದೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…