Categories: CrimeLatest

ಕತ್ತಿ ತೋರಿಸಿ ಮನೆಗೆ ನುಗ್ಗಿದ ದುಷ್ಕರ್ಮಿ; ₹3 ಲಕ್ಷ ಮೌಲ್ಯದ ತಾಳಿ ಸರ ಕಸಿದು ಪರಾರಿ

ಸಿದ್ದಾಪುರ: ತಾಲೂಕಿನ ಹಾಳದಕಟ್ಟಾ ಪ್ರದೇಶದಲ್ಲಿ ಮಹಿಳೆಯೊಬ್ಬರ ಮನೆಗೆ ನುಗ್ಗಿದ ಅಪರಿಚಿತ ದುಷ್ಕರ್ಮಿ ಕತ್ತಿ ತೋರಿಸಿ ಬೆದರಿಕೆ ಹಾಕಿ, ಸುಮಾರು ₹3 ಲಕ್ಷ ಮೌಲ್ಯದ ಬಂಗಾರದ ತಾಳಿ ಸರ ಕಸಿದು ಪರಾರಿಯಾದ ಘಟನೆ ನಡೆದಿದೆ.

ಹಾಳದಕಟ್ಟಾದ ಸೊರಬ ರಸ್ತೆಯ ಪದ್ಮರಾಜ್ ವಿಲ್ಲಾ ನಿವಾಸಿ ಪೂನಂ ಗಣಪತಿ ಶೇಟ್ (42) ಅವರು ನೀಡಿದ ದೂರಿನ ಮೇರೆಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೂನ್ 22ರಂದು ಸಂಜೆ ಸುಮಾರು 4.22 ಗಂಟೆಗೆ ಕತ್ತಿ ಹಿಡಿದು ಮನೆಗೆ ನುಗ್ಗಿದ ಅಪರಿಚಿತ ವ್ಯಕ್ತಿ, ಮಹಿಳೆಗೆ ಬಂಗಾರ ನೀಡುವಂತೆ ಬೆದರಿಕೆ ಹಾಕಿದ್ದಾನೆ. ಈ ವೇಳೆ ಮಹಿಳೆ ಪ್ರತಿರೋಧ ವ್ಯಕ್ತಪಡಿಸಿ ಮನೆಯಿಂದ ಹೊರಬರಲು ಯತ್ನಿಸಿದಾಗ, ಆರೋಪಿಯು ಅವರ ಕುತ್ತಿಗೆಯಲ್ಲಿದ್ದ ತಾಳಿ ಸರವನ್ನು ಬಲವಂತವಾಗಿ ಎಳೆದಿದ್ದಾನೆ. ಪರಿಣಾಮ ಸರ ತುಂಡಾಗಿ, ಸುಮಾರು 20.5 ಗ್ರಾಂ ತೂಕದ ಬಂಗಾರದ ಆಭರಣಗಳು ಆರೋಪಿಯ ಕೈಗೆ ಸಿಕ್ಕಿದ್ದು, ಅವುಗಳನ್ನು ಕಸಿದುಕೊಂಡು ಪರಾರಿಯಾಗಿದ್ದಾನೆ.

ಘಟನೆಯಲ್ಲಿ ಮಹಿಳೆಯ ಕುತ್ತಿಗೆಗೆ ಗಾಯವಾಗಿದ್ದು, ಕಳವಾಗಿರುವ ಬಂಗಾರದ ಆಭರಣಗಳ ಮೌಲ್ಯ ಸುಮಾರು ₹3 ಲಕ್ಷ ಎಂದು ಅಂದಾಜಿಸಲಾಗಿದೆ.

ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಕಾರವಾರದ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ. ಶಿರಸಿ ಡಿವೈಎಸ್‌ಪಿ ಗೀತಾ ಪಾಟೀಲ್, ಸಿದ್ದಾಪುರ ಪಿಎಸ್‌ಐ ಶಾಂತಿನಾಥ ಕೆ.ಪಾಸಾನೆ, ಕಾರವಾರ ಪೊಲೀಸ್ ಕಚೇರಿಯಿಂದ ಸೋಕೋ ಅಧಿಕಾರಿಗಳು, ಬೆರಳು ಮುದ್ರೆ ಘಟಕದ ಅಧಿಕಾರಿಗಳು, ಶ್ವಾನ ದಳ ಭೇಟಿ ನೀಡಿ ಪರಿಶೀಲಿಸಿದ್ದಾರೆ. ತನಿಖೆ ಮುಂದುವರೆದಿದೆ.

ಭ್ರಷ್ಟರ ಬೇಟೆ

Recent Posts

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

1 hour ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

1 hour ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

1 hour ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

1 hour ago

ಲಿವ್-ಇನ್ ಸಂಬಂಧಕ್ಕೆ ವಿರೋಧಿಸಿದ್ದ ತಂದೆ-ತಾಯಿ, ತಂಗಿಯನ್ನೇ ಕೊಂದ ಯುವತಿ! ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಹತ್ಯೆ

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…

1 hour ago

ಸಿನಿಮಾ ಸ್ಟೈಲ್ ಲಾರಿ ದರೋಡೆ: 24 ಗಂಟೆಯಲ್ಲಿ ಆರೋಪಿಗಳ ಬಂಧನ

ಆನೇಕಲ್‌ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…

1 hour ago