Categories: Latest

10ನೇ ತರಗತಿಯು ಓದದವ 20 ವರ್ಷಗಳಿಂದ ದಂತ ವೈದ್ಯ

ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಹಲ್ಲು ಕೀಳಿಸಲು ಹೋದ ಮಹಿಳೆಯೊಬ್ಬರು ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ ಘಟನೆ ಇನ್ನೂ ಮಂಕಾಗುವ ಮುನ್ನವೇ, ಹೈದರಾಬಾದ್‌ನಲ್ಲಿ ನಕಲಿ ದಂತವೈದ್ಯನೊಬ್ಬ ಸಿಕ್ಕಿಬಿದ್ದಿದ್ದಾನೆ.

ಉತ್ತರ ಪ್ರದೇಶ ಮೂಲದ ರಮೇಶ್ ಎಂಬಾತ, 10ನೇ ತರಗತಿಯನ್ನು ಕೂಡ ಪೂರ್ಣಗೊಳಿಸದೇ, ನಕಲಿ ಬಿ.ಡಿ.ಎಸ್ ಪ್ರಮಾಣಪತ್ರಗಳ ಸಹಾಯದಿಂದ ಕಳೆದ 20 ವರ್ಷಗಳಿಂದ ದಂತವೈದ್ಯನಂತೆ ಕೆಲಸ ಮಾಡುತ್ತಿದ್ದನು. ಮಲ್ಕಾಜ್‌ಗಿರಿ ಎಸ್‌ಒಟಿ ತಂಡ ನಡೆಸಿದ ದಾಳಿಯಲ್ಲಿ ಈತನ ಅಕ್ರಮ ಕ್ಲಿನಿಕ್ ಪತ್ತೆಯಾಗಿದ್ದು, ಸಿಕಂದರಾಬಾದ್‌ನ ನರೆಡ್ಮೆಟ್‌ನಲ್ಲಿ ಬಂಧಿಸಲಾಗಿದೆ.

ರಮೇಶ್ ತಡರಾತ್ರಿ ರಿಂದ ಬೆಳಗಿನ ಜಾವದವರೆಗೆ ಕ್ಲಿನಿಕ್ ನಡೆಸುತ್ತಿದ್ದನು. ಅವನ ಅನುಮಾನಾಸ್ಪದ ಸಮಯದ ಬಗ್ಗೆ ಸ್ಥಳೀಯರಿಗೆ ಶಂಕೆ ಮೂಡಿದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಿ, ಅವನಿಗೆ ಯಾವುದೇ ಮಾನ್ಯ ವೈದ್ಯಕೀಯ ಅರ್ಹತೆ ಇಲ್ಲ ಎಂಬುದನ್ನು ದೃಢಪಡಿಸಿದ್ದಾರೆ.

ಇಷ್ಟೊಂದು ವರ್ಷಗಳಿಂದ ಯಾವುದೇ ಅನುಮತಿ ಅಥವಾ ಪರಿಶೀಲನೆ ಇಲ್ಲದೆ ಈತ ದಂತವೈದ್ಯನಾಗಿ ಕಾರ್ಯನಿರ್ವಹಿಸಿರುವುದು ಆಶ್ಚರ್ಯ ಮೂಡಿಸಿದೆ. ಅವನು ಎಷ್ಟು ಜನರಿಗೆ ಚಿಕಿತ್ಸೆ ನೀಡಿದ್ದಾನೆ ಎಂಬುದರ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಇದೇ ರೀತಿಯಲ್ಲಿ, ಕೆಲ ಸಮಯದ ಹಿಂದೆ ಎಸ್‌ಎಸ್‌ಎಲ್‌ಸಿ ಮಟ್ಟದ ಶಿಕ್ಷಣ ಹೊಂದಿದ್ದ ಇಬ್ಬರು ನಕಲಿ ವೈದ್ಯರು ಸ್ತ್ರೀರೋಗ ತಜ್ಞರಾಗಿ ಕೆಲಸ ಮಾಡಿ, ಹೆರಿಗೆಯ ವೇಳೆ ಮಹಿಳೆಯೊಬ್ಬರ ಸಾವಿಗೆ ಕಾರಣರಾಗಿದ್ದರು. ಈ ಘಟನೆಗಳು ನಕಲಿ ವೈದ್ಯರ ಅಪಾಯದ ಬಗ್ಗೆ ಮತ್ತೊಮ್ಮೆ ಎಚ್ಚರಿಕೆ ನೀಡುತ್ತಿವೆ.

ಭ್ರಷ್ಟರ ಬೇಟೆ

Recent Posts

ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿ: ಉನ್ನತ ಶಿಕ್ಷಣಕ್ಕೆ ಹೊಸ ಚೈತನ್ಯ

ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಸಿಬ್ಬಂದಿ ಕೊರತೆಯನ್ನು ನೀಗಿಸಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಖಾಲಿ ಇರುವ ಸುಮಾರು 4000 ಬೋಧಕ…

2 hours ago

ಪ್ರೀತಿಯ ಹೆಸರಿನಲ್ಲಿ ಮೋಸ: ಖಾಸಗಿ ವಿಡಿಯೋ ಹಂಚಿಕೆ..!

ಪ್ರೀತಿ ಮಾಡುವುದಾಗಿ ನಂಬಿಸಿ ಯುವತಿಯ ಖಾಸಗಿ ವಿಡಿಯೋವನ್ನು ದಾಖಲಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿದ ಆರೋಪದ ಮೇಲೆ ಸುಶಾಂತ್ ಪೂಜಾರಿ ಹಾಗೂ…

2 hours ago

ಗಂಡನ ಸ್ನೇಹಿತನೊಂದಿಗೆ ಶಬನಂ ಅಕ್ರಮ ಸಂಬಂಧ; ಪತ್ನಿ–ಸ್ನೇಹಿತನನ್ನು ಗುಂಡಿಕ್ಕಿ ಕೊಂದ ಪತಿ

ಉತ್ತರ ಪ್ರದೇಶದ ಘಾಜಿಯಾಬಾದ್‌ನ ಟ್ರೋನಿಕಾ ಸಿಟಿಯಲ್ಲಿ ದಾರುಣ ಘಟನೆ ನಡೆದಿದ್ದು, ಪತ್ನಿ ಹಾಗೂ ಆಪ್ತ ಸ್ನೇಹಿತನ ನಡುವೆ ಅಕ್ರಮ ಸಂಬಂಧವಿದೆ…

3 hours ago

ಬೆಳಗಾವಿಯಲ್ಲಿ ಇಂಧನ ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ – ಜಿಲ್ಲಾಧಿಕಾರಿ

ಬೆಳಗಾವಿ ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್ ಹಾಗೂ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಪಷ್ಟಪಡಿಸಿದ್ದಾರೆ. ಬಂಕ್‌ಗಳಲ್ಲಿ ಸ್ಟಾಕ್…

14 hours ago

ಅಂಕೋಲಾದಲ್ಲಿ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ ಮೇಲೆ ಕೊಲೆ ಯತ್ನ

ಅಂಕೋಲಾ: ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ ಅವರ ಮೇಲೆ ಇಂದು…

20 hours ago

ಅಕ್ರಮ ಸಾಗಾಟದಿಂದ ಪಾರಾದ 7 ಶ್ವಾನಗಳು 17 ಕಿ.ಮೀ. ನಡೆದು ಮನೆ ಸೇರಿ ಮನಸೂರೆಗೈದ ಕಥೆ

ಈಶಾನ್ಯ ಚೀನಾದಲ್ಲಿ ಹೃದಯಸ್ಪರ್ಶಿ ಘಟನೆ ಒಂದಾಗಿದೆ. ಅಕ್ರಮವಾಗಿ ಸಾಗಿಸಲಾಗುತ್ತಿದ್ದ 7 ಶ್ವಾನಗಳು ವಾಹನದಿಂದ ತಪ್ಪಿಸಿಕೊಂಡು, ಸುಮಾರು 17 ಕಿಲೋಮೀಟರ್‌ ದೂರವನ್ನು…

22 hours ago