Latest

ಪಾಳುಬಿದ್ದ ಸಾರ್ವಜನಿಕ ಶೌಚಾಲಯ; ಊರೆಲ್ಲ ಶೌಚಾ ಮಾಡುತ್ತಿರುವ ಸಾರ್ವಜನಿಕರು!

ಕುಂದಗೋಳ: ಬಳಕೆಗೂ ಬರೆದ, ಉಪಯೋಗಕ್ಕೆ ಮೊದಲೇ ಇಲ್ಲಿದ, ಪಾಳು ಬಿದ್ದು, ದೃಷ್ಟಿಗೆ ಮಾತ್ರ ಎದ್ದು ಕಾಣುವ ಈ ಸಾರ್ವಜನಿಕ ಶೌಚಾಲಯ ಪರಿಸ್ಥಿತಿ ನಾವು ಹೇಳ್ತೀವಿ ಕೇಳಿ.
ಕುಂದಗೋಳ ಪಟ್ಟಣದ ಗುಡೇನಕಟ್ಟಿ ಮತ್ತು ಯರಗುಪ್ಪಿ ರಸ್ತೆ ಬದಿಯಲ್ಲಿ ನಿರ್ಮಿಸಲಾಗಿದ ಸಾರ್ವಜನಿಕ ಶೌಚಾಲಯ ಕಥೆ ಇದು. ಸ್ವಚ್ಚ & ಸುಂದರ ವಾತಾವರಣ ನಿರ್ಮಾಣ ಮಾಡಬೇಕೆಂದು ಸರಕಾರ ಲಕ್ಷಾಂತರ ರೂಪಾಯಿ ವ್ಯಯ ಮಾಡಿ ನಿರ್ಮಿಸಿರುವ ಈ ಶೌಚಾಲಯ ಪಾಳು ಬಿದ್ದಿದ್ದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಸ್ವಚ್ಚ ಭಾರತ ನಿರ್ಮಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಾನ ಹೆಸರುಗಳಲ್ಲಿ ನೂರಾರು ಯೋಜನೆಗಳನ್ನು ಘೋಷಿಸಿವೆ. ಆದರೂ ನಗರ ಪ್ರದೇಶಗಳಲ್ಲಿ ಸ್ವಚ್ಚತೆ ಮರೀಚಿಕೆಯಾಗಿದೆ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಕಟ್ಟಿದ ಶೌಚಾಲಯಗಳು ನಿರ್ವಹಣೆ ಇಲ್ಲದೆ ಪಾಳು ಬಿದ್ದವೆ. ಮೇಲ್ಚಾವಣಿ ಒಡೆದು ಹಾಳಾಗಿದೆ. ಸರ್ಮಪಕ ನೀರು ಸಂಪರ್ಕ ಇಲ್ಲದೆ ಶೌಚಾಲಯ ಪಾಳು ಬಿದ್ದಿದೆ. ಇದರಿಂದ ಬಯಲು ಬಹಿರ್ದೆಸೆ ಪ್ರವೃತ್ತಿ ಮುಂದುವರಿದ್ದಿದೆ. ಪಟ್ಟಣದಲ್ಲಿ ಬಹುಮುಖ್ಯವಾಗಿ ಬೇಕಾಗಿರುವುದು ಸಾರ್ವಜನಿಕ ಶೌಚಾಲಯ.
ಸ್ವಚ್ಛತೆ ಹಾಗೂ ಉತ್ತಮ ಆರೋಗ್ಯಕ್ಕಾಗಿ ಸಾರ್ವಜನಿಕ ಶೌಚಾಲಯ ಬಳಸಿ, ಚಿಕ್ಕವರಾಗಲಿ/ದೊಡ್ಡವರಾಗಲಿ ಎಲ್ಲರೂ ಶೌಚಾಲಯ ಬಳಸುವವರಾಗಲಿ, ಮಕ್ಕಳಿಗೆ ಶೌಚಾಲಯ ಬಳಿಕೆಯ ರೂಡಿ ಮಾಡಿಸಿ. ಶೌಚಾ ಮಾಡಿದ ಬಳಿಕೆ ಕಡ್ಡಾಯವಾಗಿ ಸಾಬೂನಿನಿಂದ ಕೈ ಕಾಲು ತೊಳೆಯರಿ ಹೀಗೆ ಸಾರ್ವಜನಿಕ ಶೌಚಾಲಯದಲ್ಲಿ ಜಾಹೀರಾತು ಮುಖಾಂತರ ಜನರಿಗೆ ತಿಳುವಳಿಕೆ ನೀಡುವ ಸರಕಾರ ಪಾಳುಬಿದ್ದಿರುವ ಶೌಚಾಲಯವನ್ನು ದುರಸ್ತಿ ಮಾಡಿಸಲು ಮಾತ್ರ ಹಿಂದೇಟು ಹಾಕುತ್ತಿದೆ. ಅಧಿಕಾರಿಗಳು ಇದನ್ನು ಕಂಡರೂ ಕಾಣದಂತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪಟ್ಟಣ ಪಂಚಾಯಿತಿ ಅಧಿಕಾರಿ ಪಟ್ಟಣದಲ್ಲಿ ಎರಡು ಸಾರ್ವಜನಿಕ ಶೌಚಾಲಯ ಇದ್ದು ಅವುಗಳ ದುರಸ್ತಿಗೆ ಈಗಾಗಲೇ ಯೋಜನೆ ಕೈಗೊಂಡಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗುತ್ತದೆ ಎಂದಿದ್ದಾರೆ.
ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago