Latest

ಪಾಳುಬಿದ್ದ ಸಾರ್ವಜನಿಕ ಶೌಚಾಲಯ; ಊರೆಲ್ಲ ಶೌಚಾ ಮಾಡುತ್ತಿರುವ ಸಾರ್ವಜನಿಕರು!

ಕುಂದಗೋಳ: ಬಳಕೆಗೂ ಬರೆದ, ಉಪಯೋಗಕ್ಕೆ ಮೊದಲೇ ಇಲ್ಲಿದ, ಪಾಳು ಬಿದ್ದು, ದೃಷ್ಟಿಗೆ ಮಾತ್ರ ಎದ್ದು ಕಾಣುವ ಈ ಸಾರ್ವಜನಿಕ ಶೌಚಾಲಯ ಪರಿಸ್ಥಿತಿ ನಾವು ಹೇಳ್ತೀವಿ ಕೇಳಿ.
ಕುಂದಗೋಳ ಪಟ್ಟಣದ ಗುಡೇನಕಟ್ಟಿ ಮತ್ತು ಯರಗುಪ್ಪಿ ರಸ್ತೆ ಬದಿಯಲ್ಲಿ ನಿರ್ಮಿಸಲಾಗಿದ ಸಾರ್ವಜನಿಕ ಶೌಚಾಲಯ ಕಥೆ ಇದು. ಸ್ವಚ್ಚ & ಸುಂದರ ವಾತಾವರಣ ನಿರ್ಮಾಣ ಮಾಡಬೇಕೆಂದು ಸರಕಾರ ಲಕ್ಷಾಂತರ ರೂಪಾಯಿ ವ್ಯಯ ಮಾಡಿ ನಿರ್ಮಿಸಿರುವ ಈ ಶೌಚಾಲಯ ಪಾಳು ಬಿದ್ದಿದ್ದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಸ್ವಚ್ಚ ಭಾರತ ನಿರ್ಮಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಾನ ಹೆಸರುಗಳಲ್ಲಿ ನೂರಾರು ಯೋಜನೆಗಳನ್ನು ಘೋಷಿಸಿವೆ. ಆದರೂ ನಗರ ಪ್ರದೇಶಗಳಲ್ಲಿ ಸ್ವಚ್ಚತೆ ಮರೀಚಿಕೆಯಾಗಿದೆ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಕಟ್ಟಿದ ಶೌಚಾಲಯಗಳು ನಿರ್ವಹಣೆ ಇಲ್ಲದೆ ಪಾಳು ಬಿದ್ದವೆ. ಮೇಲ್ಚಾವಣಿ ಒಡೆದು ಹಾಳಾಗಿದೆ. ಸರ್ಮಪಕ ನೀರು ಸಂಪರ್ಕ ಇಲ್ಲದೆ ಶೌಚಾಲಯ ಪಾಳು ಬಿದ್ದಿದೆ. ಇದರಿಂದ ಬಯಲು ಬಹಿರ್ದೆಸೆ ಪ್ರವೃತ್ತಿ ಮುಂದುವರಿದ್ದಿದೆ. ಪಟ್ಟಣದಲ್ಲಿ ಬಹುಮುಖ್ಯವಾಗಿ ಬೇಕಾಗಿರುವುದು ಸಾರ್ವಜನಿಕ ಶೌಚಾಲಯ.
ಸ್ವಚ್ಛತೆ ಹಾಗೂ ಉತ್ತಮ ಆರೋಗ್ಯಕ್ಕಾಗಿ ಸಾರ್ವಜನಿಕ ಶೌಚಾಲಯ ಬಳಸಿ, ಚಿಕ್ಕವರಾಗಲಿ/ದೊಡ್ಡವರಾಗಲಿ ಎಲ್ಲರೂ ಶೌಚಾಲಯ ಬಳಸುವವರಾಗಲಿ, ಮಕ್ಕಳಿಗೆ ಶೌಚಾಲಯ ಬಳಿಕೆಯ ರೂಡಿ ಮಾಡಿಸಿ. ಶೌಚಾ ಮಾಡಿದ ಬಳಿಕೆ ಕಡ್ಡಾಯವಾಗಿ ಸಾಬೂನಿನಿಂದ ಕೈ ಕಾಲು ತೊಳೆಯರಿ ಹೀಗೆ ಸಾರ್ವಜನಿಕ ಶೌಚಾಲಯದಲ್ಲಿ ಜಾಹೀರಾತು ಮುಖಾಂತರ ಜನರಿಗೆ ತಿಳುವಳಿಕೆ ನೀಡುವ ಸರಕಾರ ಪಾಳುಬಿದ್ದಿರುವ ಶೌಚಾಲಯವನ್ನು ದುರಸ್ತಿ ಮಾಡಿಸಲು ಮಾತ್ರ ಹಿಂದೇಟು ಹಾಕುತ್ತಿದೆ. ಅಧಿಕಾರಿಗಳು ಇದನ್ನು ಕಂಡರೂ ಕಾಣದಂತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪಟ್ಟಣ ಪಂಚಾಯಿತಿ ಅಧಿಕಾರಿ ಪಟ್ಟಣದಲ್ಲಿ ಎರಡು ಸಾರ್ವಜನಿಕ ಶೌಚಾಲಯ ಇದ್ದು ಅವುಗಳ ದುರಸ್ತಿಗೆ ಈಗಾಗಲೇ ಯೋಜನೆ ಕೈಗೊಂಡಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗುತ್ತದೆ ಎಂದಿದ್ದಾರೆ.
ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

9 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

11 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

22 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

22 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

22 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

23 hours ago