Latest

ಪಾಳುಬಿದ್ದ ಸಾರ್ವಜನಿಕ ಶೌಚಾಲಯ; ಊರೆಲ್ಲ ಶೌಚಾ ಮಾಡುತ್ತಿರುವ ಸಾರ್ವಜನಿಕರು!

ಕುಂದಗೋಳ: ಬಳಕೆಗೂ ಬರೆದ, ಉಪಯೋಗಕ್ಕೆ ಮೊದಲೇ ಇಲ್ಲಿದ, ಪಾಳು ಬಿದ್ದು, ದೃಷ್ಟಿಗೆ ಮಾತ್ರ ಎದ್ದು ಕಾಣುವ ಈ ಸಾರ್ವಜನಿಕ ಶೌಚಾಲಯ ಪರಿಸ್ಥಿತಿ ನಾವು ಹೇಳ್ತೀವಿ ಕೇಳಿ.
ಕುಂದಗೋಳ ಪಟ್ಟಣದ ಗುಡೇನಕಟ್ಟಿ ಮತ್ತು ಯರಗುಪ್ಪಿ ರಸ್ತೆ ಬದಿಯಲ್ಲಿ ನಿರ್ಮಿಸಲಾಗಿದ ಸಾರ್ವಜನಿಕ ಶೌಚಾಲಯ ಕಥೆ ಇದು. ಸ್ವಚ್ಚ & ಸುಂದರ ವಾತಾವರಣ ನಿರ್ಮಾಣ ಮಾಡಬೇಕೆಂದು ಸರಕಾರ ಲಕ್ಷಾಂತರ ರೂಪಾಯಿ ವ್ಯಯ ಮಾಡಿ ನಿರ್ಮಿಸಿರುವ ಈ ಶೌಚಾಲಯ ಪಾಳು ಬಿದ್ದಿದ್ದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಸ್ವಚ್ಚ ಭಾರತ ನಿರ್ಮಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಾನ ಹೆಸರುಗಳಲ್ಲಿ ನೂರಾರು ಯೋಜನೆಗಳನ್ನು ಘೋಷಿಸಿವೆ. ಆದರೂ ನಗರ ಪ್ರದೇಶಗಳಲ್ಲಿ ಸ್ವಚ್ಚತೆ ಮರೀಚಿಕೆಯಾಗಿದೆ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಕಟ್ಟಿದ ಶೌಚಾಲಯಗಳು ನಿರ್ವಹಣೆ ಇಲ್ಲದೆ ಪಾಳು ಬಿದ್ದವೆ. ಮೇಲ್ಚಾವಣಿ ಒಡೆದು ಹಾಳಾಗಿದೆ. ಸರ್ಮಪಕ ನೀರು ಸಂಪರ್ಕ ಇಲ್ಲದೆ ಶೌಚಾಲಯ ಪಾಳು ಬಿದ್ದಿದೆ. ಇದರಿಂದ ಬಯಲು ಬಹಿರ್ದೆಸೆ ಪ್ರವೃತ್ತಿ ಮುಂದುವರಿದ್ದಿದೆ. ಪಟ್ಟಣದಲ್ಲಿ ಬಹುಮುಖ್ಯವಾಗಿ ಬೇಕಾಗಿರುವುದು ಸಾರ್ವಜನಿಕ ಶೌಚಾಲಯ.
ಸ್ವಚ್ಛತೆ ಹಾಗೂ ಉತ್ತಮ ಆರೋಗ್ಯಕ್ಕಾಗಿ ಸಾರ್ವಜನಿಕ ಶೌಚಾಲಯ ಬಳಸಿ, ಚಿಕ್ಕವರಾಗಲಿ/ದೊಡ್ಡವರಾಗಲಿ ಎಲ್ಲರೂ ಶೌಚಾಲಯ ಬಳಸುವವರಾಗಲಿ, ಮಕ್ಕಳಿಗೆ ಶೌಚಾಲಯ ಬಳಿಕೆಯ ರೂಡಿ ಮಾಡಿಸಿ. ಶೌಚಾ ಮಾಡಿದ ಬಳಿಕೆ ಕಡ್ಡಾಯವಾಗಿ ಸಾಬೂನಿನಿಂದ ಕೈ ಕಾಲು ತೊಳೆಯರಿ ಹೀಗೆ ಸಾರ್ವಜನಿಕ ಶೌಚಾಲಯದಲ್ಲಿ ಜಾಹೀರಾತು ಮುಖಾಂತರ ಜನರಿಗೆ ತಿಳುವಳಿಕೆ ನೀಡುವ ಸರಕಾರ ಪಾಳುಬಿದ್ದಿರುವ ಶೌಚಾಲಯವನ್ನು ದುರಸ್ತಿ ಮಾಡಿಸಲು ಮಾತ್ರ ಹಿಂದೇಟು ಹಾಕುತ್ತಿದೆ. ಅಧಿಕಾರಿಗಳು ಇದನ್ನು ಕಂಡರೂ ಕಾಣದಂತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪಟ್ಟಣ ಪಂಚಾಯಿತಿ ಅಧಿಕಾರಿ ಪಟ್ಟಣದಲ್ಲಿ ಎರಡು ಸಾರ್ವಜನಿಕ ಶೌಚಾಲಯ ಇದ್ದು ಅವುಗಳ ದುರಸ್ತಿಗೆ ಈಗಾಗಲೇ ಯೋಜನೆ ಕೈಗೊಂಡಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗುತ್ತದೆ ಎಂದಿದ್ದಾರೆ.
ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಬಂಧನ

ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

10 hours ago

ನೈಸ್ ಯೋಜನೆ ಮತ್ತೆ ಕಾವೇರಿದ ವಿವಾದ: ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್ ಒತ್ತಾಯ

ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…

12 hours ago

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

2 days ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

2 days ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

2 days ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

2 days ago