Latest

ಪಾಳುಬಿದ್ದ ಸಾರ್ವಜನಿಕ ಶೌಚಾಲಯ; ಊರೆಲ್ಲ ಶೌಚಾ ಮಾಡುತ್ತಿರುವ ಸಾರ್ವಜನಿಕರು!

ಕುಂದಗೋಳ: ಬಳಕೆಗೂ ಬರೆದ, ಉಪಯೋಗಕ್ಕೆ ಮೊದಲೇ ಇಲ್ಲಿದ, ಪಾಳು ಬಿದ್ದು, ದೃಷ್ಟಿಗೆ ಮಾತ್ರ ಎದ್ದು ಕಾಣುವ ಈ ಸಾರ್ವಜನಿಕ ಶೌಚಾಲಯ ಪರಿಸ್ಥಿತಿ ನಾವು ಹೇಳ್ತೀವಿ ಕೇಳಿ.
ಕುಂದಗೋಳ ಪಟ್ಟಣದ ಗುಡೇನಕಟ್ಟಿ ಮತ್ತು ಯರಗುಪ್ಪಿ ರಸ್ತೆ ಬದಿಯಲ್ಲಿ ನಿರ್ಮಿಸಲಾಗಿದ ಸಾರ್ವಜನಿಕ ಶೌಚಾಲಯ ಕಥೆ ಇದು. ಸ್ವಚ್ಚ & ಸುಂದರ ವಾತಾವರಣ ನಿರ್ಮಾಣ ಮಾಡಬೇಕೆಂದು ಸರಕಾರ ಲಕ್ಷಾಂತರ ರೂಪಾಯಿ ವ್ಯಯ ಮಾಡಿ ನಿರ್ಮಿಸಿರುವ ಈ ಶೌಚಾಲಯ ಪಾಳು ಬಿದ್ದಿದ್ದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಸ್ವಚ್ಚ ಭಾರತ ನಿರ್ಮಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಾನ ಹೆಸರುಗಳಲ್ಲಿ ನೂರಾರು ಯೋಜನೆಗಳನ್ನು ಘೋಷಿಸಿವೆ. ಆದರೂ ನಗರ ಪ್ರದೇಶಗಳಲ್ಲಿ ಸ್ವಚ್ಚತೆ ಮರೀಚಿಕೆಯಾಗಿದೆ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಕಟ್ಟಿದ ಶೌಚಾಲಯಗಳು ನಿರ್ವಹಣೆ ಇಲ್ಲದೆ ಪಾಳು ಬಿದ್ದವೆ. ಮೇಲ್ಚಾವಣಿ ಒಡೆದು ಹಾಳಾಗಿದೆ. ಸರ್ಮಪಕ ನೀರು ಸಂಪರ್ಕ ಇಲ್ಲದೆ ಶೌಚಾಲಯ ಪಾಳು ಬಿದ್ದಿದೆ. ಇದರಿಂದ ಬಯಲು ಬಹಿರ್ದೆಸೆ ಪ್ರವೃತ್ತಿ ಮುಂದುವರಿದ್ದಿದೆ. ಪಟ್ಟಣದಲ್ಲಿ ಬಹುಮುಖ್ಯವಾಗಿ ಬೇಕಾಗಿರುವುದು ಸಾರ್ವಜನಿಕ ಶೌಚಾಲಯ.
ಸ್ವಚ್ಛತೆ ಹಾಗೂ ಉತ್ತಮ ಆರೋಗ್ಯಕ್ಕಾಗಿ ಸಾರ್ವಜನಿಕ ಶೌಚಾಲಯ ಬಳಸಿ, ಚಿಕ್ಕವರಾಗಲಿ/ದೊಡ್ಡವರಾಗಲಿ ಎಲ್ಲರೂ ಶೌಚಾಲಯ ಬಳಸುವವರಾಗಲಿ, ಮಕ್ಕಳಿಗೆ ಶೌಚಾಲಯ ಬಳಿಕೆಯ ರೂಡಿ ಮಾಡಿಸಿ. ಶೌಚಾ ಮಾಡಿದ ಬಳಿಕೆ ಕಡ್ಡಾಯವಾಗಿ ಸಾಬೂನಿನಿಂದ ಕೈ ಕಾಲು ತೊಳೆಯರಿ ಹೀಗೆ ಸಾರ್ವಜನಿಕ ಶೌಚಾಲಯದಲ್ಲಿ ಜಾಹೀರಾತು ಮುಖಾಂತರ ಜನರಿಗೆ ತಿಳುವಳಿಕೆ ನೀಡುವ ಸರಕಾರ ಪಾಳುಬಿದ್ದಿರುವ ಶೌಚಾಲಯವನ್ನು ದುರಸ್ತಿ ಮಾಡಿಸಲು ಮಾತ್ರ ಹಿಂದೇಟು ಹಾಕುತ್ತಿದೆ. ಅಧಿಕಾರಿಗಳು ಇದನ್ನು ಕಂಡರೂ ಕಾಣದಂತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪಟ್ಟಣ ಪಂಚಾಯಿತಿ ಅಧಿಕಾರಿ ಪಟ್ಟಣದಲ್ಲಿ ಎರಡು ಸಾರ್ವಜನಿಕ ಶೌಚಾಲಯ ಇದ್ದು ಅವುಗಳ ದುರಸ್ತಿಗೆ ಈಗಾಗಲೇ ಯೋಜನೆ ಕೈಗೊಂಡಿದ್ದು ಶೀಘ್ರದಲ್ಲೇ ಕಾಮಗಾರಿ ಪ್ರಾರಂಭವಾಗುತ್ತದೆ ಎಂದಿದ್ದಾರೆ.
ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

5 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

5 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು: ಖಾಸಗಿ ಆಸ್ಪತ್ರೆ ಸಿಬ್ಬಂದಿ ವಶಕ್ಕೆ

ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…

2 days ago