ರಾಜಧಾನಿ ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನಾಗಸಂದ್ರದಲ್ಲಿ ಕ್ಷುಲ್ಲಕ ವಿಚಾರದಿಂದ ಆರಂಭವಾದ ದಂಪತಿಗಳ ಜಗಳ ಭೀಕರ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ.
ಬೆಳಗಾವಿ ಮೂಲದ ಕಾವ್ಯಾ (34) ಕೊಲೆಯಾದ ದುರ್ದೈವಿ ಮಹಿಳೆ. ಪತ್ನಿಯನ್ನು ಹತ್ಯೆಗೈದ ಆರೋಪದ ಮೇಲೆ ಪತಿ ದರಿಯಪ್ಪನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮೂಲತಃ ಬೆಳಗಾವಿಯವರಾದ ಈ ದಂಪತಿಗಳು ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದರು. ದರಿಯಪ್ಪ ಗುತ್ತಿಗೆ ಕೆಲಸ ಮಾಡುತ್ತಿದ್ದನು. ದಂಪತಿಗಳಿಗೆ ಇಬ್ಬರು ಮಕ್ಕಳು ಇದ್ದು, ಕಳೆದ ಒಂದು ವಾರದಿಂದ ಹಣಕಾಸು ಮತ್ತು ಆಸ್ತಿ ವಿಚಾರವಾಗಿ ಇವರ ನಡುವೆ ನಿರಂತರವಾಗಿ ಕಲಹ ನಡೆಯುತ್ತಿತ್ತು ಎಂದು ತಿಳಿದುಬಂದಿದೆ.
ಇತ್ತೀಚೆಗೆ ದರಿಯಪ್ಪ ಮನೆಗೆ ಸುಮಾರು 2 ಲಕ್ಷ ರೂಪಾಯಿ ಹಣ ತಂದಿದ್ದನು. ಈ ಹಣವನ್ನು ತನ್ನ ಅಣ್ಣನಿಗೆ ನೀಡಬೇಕು ಎಂದು ಕಾವ್ಯಾ ಒತ್ತಾಯಿಸಿದ್ದಾಳೆ. ಇದೇ ವಿಚಾರವಾಗಿ ಗುರುವಾರ ಬೆಳಿಗ್ಗೆ ಇಬ್ಬರ ನಡುವೆ ತೀವ್ರ ವಾಗ್ವಾದ ಉಂಟಾಗಿದೆ.
ಈ ವೇಳೆ ಆಕ್ರೋಶಗೊಂಡ ದರಿಯಪ್ಪ, ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಕಾವ್ಯಾ ಕೆಳಗೆ ಬಿದ್ದಾಗ, ಆಕೆಯ ಕುತ್ತಿಗೆಯ ಮೇಲೆ ಕಾಲಿಟ್ಟು ಬಲವಾಗಿ ತುಳಿದಿದ್ದಾನೆ. ಪರಿಣಾಮವಾಗಿ ಉಸಿರುಗಟ್ಟಿಕೆ ಹಾಗೂ ತೀವ್ರ ಗಾಯಗಳಿಂದ ಕಾವ್ಯಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಘಟನೆಯ ಮಾಹಿತಿ ತಿಳಿದ ತಕ್ಷಣ ಪೀಣ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…