Latest

ಮೋಜಿಗಾಗಿ ಕಳ್ಳತನ ಮಾಡುವ ಫ್ಯಾಮಿಲಿ: ಕಥೆ ಕೇಳಿ ಪೊಲೀಸರೇ ಶಾಕ್

ಸಿಲಿಕಾನ್‌ ಸಿಟಿಯಲ್ಲಿ ಎಷ್ಟೇಲ್ಲಾ ಕಳ್ಳತನ ಪ್ರಕರಣಗಳನ್ನು ನೋಡಿರುತ್ತೇವೆ ಆದರೆ ಮನೆಮಂದಿಯಲ್ಲಾ ಕಳ್ಳತನದ ಕೆಲಸಕ್ಕೆ ಇಳಿಯುವುದು ನೋಡಿದ್ರೆ ಆಶ್ಚರ್ಯವಾಗುತ್ತೆ. ಪಿಕ್ ಪಾಕೆಟ್ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡ ತಂಡದ ವಿಚಾರಣೆ ಮಾಡಿದ ಪೊಲೀಸರಿಗೆ ಅವರ ಇಡೀ ಕುಟುಂಬವೇ ಕಳ್ಳತನ ಮಾಡುವ ಕುಟುಂಬ ಎಂದು ತಿಳಿದು ಪೊಲೀಸರೇ ಶಾಕ್ ಆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಎಸ್.ಆರ್ ನಗರದ ಪೊಲೀಸರು ಪಿಕ್ ಪಾಕೆಟ್ ಪ್ರಕರಣದಲ್ಲಿ ತಂಡವೊಂದನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಈ ವಿಷಯ ಹೊರಬಿದ್ದಿದೆ. ಗಂಡ, ಹೆಂಡತಿ, ಅಣ್ಣ, ಭಾವ, ಮಕ್ಕಳು ಸೇರಿದಂತೆ ಆ ಕುಟುಂಬದ ಪ್ರತಿಯೊಬ್ಬರು ಕೂಡಾ ಕಳ್ಳರೇ ಆಗಿದ್ದರು. ಕಳ್ಳತನವೇ ಇವರ ಫುಲ್ ಟೈಂ ಜಾಬ್ ಆಗಿತ್ತು. ಅದರಿಂದಲೇ ಬೆಂಗಳೂರಿನಲ್ಲಿ ಜೀವನ ಸಾಗಿಸುತ್ತಿದ್ದಾರೆ ಎಂಬ ವಿಷಯವನ್ನು ಕೇಳಿ ಪೊಲೀಸರು ಇಂತಹವರು ಇರುತ್ತಾರ ಎಂದು ದಂಗಾಗಿದ್ದಾರೆ.
ಬನಶಂಕರಿ ನಿವಾಸಿಗಳಾದ ವೇಲು, ಸುಂದರ್‌ರಾಜ್, ಮಹೇಶ್, ಸೇರಿದಂತೆ ಎಲ್ಲರೂ ಬೆಳಗಾದರೆ ಒಟ್ಟಿಗೆ ಒಂದು ಮೀಟಿಂಗ್ ಮಾಡುತ್ತಾರೆ. ಇಂದು ಯಾರು ಯಾವ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಯಾವ ಬಸ್ ರೂಟ್ ಅಲ್ಲಿ ಪಿಕ್‌ಪಾಕೆಟ್ ಮಾಡಬೇಕು ಎಂಬುದನ್ನು ನಿರ್ಧರಿಸಿ ಕುಟುಂಬದ ಎಂಟೂ ಜನ ಬೇರೆ ಬೇರೆ ಕಡೆ ತೆರಳುತ್ತಿದ್ದರು. ಅದರಂತೆ ಕೆಲವರು ಜನರ ಗಮನವನ್ನು ಬೇರೆಡೆ ಸೆಳೆಯುವಂತೆ ಮಾಡಿ ಚಿನ್ನಾಭರಣ ಕಳ್ಳತನ ಮಾಡಿದರೆ ಇನ್ನೂ ಕೆಲವರು ರಶ್ ಇರುವ ಬಿಎಂಟಿಸಿ ಬಸ್‌ಗಳಲ್ಲಿ ಹತ್ತಿಕೊಂಡು ಪರ್ಸ್, ಮೊಬೈಲ್‌ಗಳನ್ನು ಕದ್ದು ಎಸ್ಕೇಪ್ ಆಗುತ್ತಿದ್ದರು.
ಸಂಜೆ ಕದ್ದ ಮಾಲನ್ನು ಮಾರಿ ಬಿಂದಾಸ್ ಜೀವನ ನಡೆಸುತ್ತಿದ್ದರು. ಪರ್ಸ್, ಮೊಬೈಲ್, ಸಣ್ಣ ಪ್ರಮಾಣದ ಹಣಗಳನ್ನು ಕದ್ದರೆ ಜನರು ಅದನ್ನು ಅಷ್ಟು ಸೀರಿಯಸ್ ಆಗಿ ತೆಗೆದುಕೊಳ್ಳುವುದಿಲ್ಲ. ಅಲ್ಲದೇ ಇಂತಹ ಸಣ್ಣ ಪುಟ್ಟ ವಿಷಯಗಳಿಗೆ ಪೊಲೀಸರಿಗೆ ದೂರು ನೀಡುವುದಿಲ್ಲ ಎಂಬ ಧೈರ್ಯದ ಮೇಲೆ ಇದನ್ನೇ ಫುಲ್‌ಟೈಂ ವೃತ್ತಿಯನ್ನಾಗಿ ಮಾಡಿಕೊಂಡಿದ್ದರು. ಇದೀಗ ಖತರ್‌ನಾಕ್ ಕಳ್ಳರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

12 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

12 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

13 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago