ಸಿಲಿಕಾನ್ ಸಿಟಿಯಲ್ಲಿ ಎಷ್ಟೇಲ್ಲಾ ಕಳ್ಳತನ ಪ್ರಕರಣಗಳನ್ನು ನೋಡಿರುತ್ತೇವೆ ಆದರೆ ಮನೆಮಂದಿಯಲ್ಲಾ ಕಳ್ಳತನದ ಕೆಲಸಕ್ಕೆ ಇಳಿಯುವುದು ನೋಡಿದ್ರೆ ಆಶ್ಚರ್ಯವಾಗುತ್ತೆ. ಪಿಕ್ ಪಾಕೆಟ್ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡ ತಂಡದ ವಿಚಾರಣೆ ಮಾಡಿದ ಪೊಲೀಸರಿಗೆ ಅವರ ಇಡೀ ಕುಟುಂಬವೇ ಕಳ್ಳತನ ಮಾಡುವ ಕುಟುಂಬ ಎಂದು ತಿಳಿದು ಪೊಲೀಸರೇ ಶಾಕ್ ಆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಎಸ್.ಆರ್ ನಗರದ ಪೊಲೀಸರು ಪಿಕ್ ಪಾಕೆಟ್ ಪ್ರಕರಣದಲ್ಲಿ ತಂಡವೊಂದನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಈ ವಿಷಯ ಹೊರಬಿದ್ದಿದೆ. ಗಂಡ, ಹೆಂಡತಿ, ಅಣ್ಣ, ಭಾವ, ಮಕ್ಕಳು ಸೇರಿದಂತೆ ಆ ಕುಟುಂಬದ ಪ್ರತಿಯೊಬ್ಬರು ಕೂಡಾ ಕಳ್ಳರೇ ಆಗಿದ್ದರು. ಕಳ್ಳತನವೇ ಇವರ ಫುಲ್ ಟೈಂ ಜಾಬ್ ಆಗಿತ್ತು. ಅದರಿಂದಲೇ ಬೆಂಗಳೂರಿನಲ್ಲಿ ಜೀವನ ಸಾಗಿಸುತ್ತಿದ್ದಾರೆ ಎಂಬ ವಿಷಯವನ್ನು ಕೇಳಿ ಪೊಲೀಸರು ಇಂತಹವರು ಇರುತ್ತಾರ ಎಂದು ದಂಗಾಗಿದ್ದಾರೆ.
ಬನಶಂಕರಿ ನಿವಾಸಿಗಳಾದ ವೇಲು, ಸುಂದರ್ರಾಜ್, ಮಹೇಶ್, ಸೇರಿದಂತೆ ಎಲ್ಲರೂ ಬೆಳಗಾದರೆ ಒಟ್ಟಿಗೆ ಒಂದು ಮೀಟಿಂಗ್ ಮಾಡುತ್ತಾರೆ. ಇಂದು ಯಾರು ಯಾವ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಯಾವ ಬಸ್ ರೂಟ್ ಅಲ್ಲಿ ಪಿಕ್ಪಾಕೆಟ್ ಮಾಡಬೇಕು ಎಂಬುದನ್ನು ನಿರ್ಧರಿಸಿ ಕುಟುಂಬದ ಎಂಟೂ ಜನ ಬೇರೆ ಬೇರೆ ಕಡೆ ತೆರಳುತ್ತಿದ್ದರು. ಅದರಂತೆ ಕೆಲವರು ಜನರ ಗಮನವನ್ನು ಬೇರೆಡೆ ಸೆಳೆಯುವಂತೆ ಮಾಡಿ ಚಿನ್ನಾಭರಣ ಕಳ್ಳತನ ಮಾಡಿದರೆ ಇನ್ನೂ ಕೆಲವರು ರಶ್ ಇರುವ ಬಿಎಂಟಿಸಿ ಬಸ್ಗಳಲ್ಲಿ ಹತ್ತಿಕೊಂಡು ಪರ್ಸ್, ಮೊಬೈಲ್ಗಳನ್ನು ಕದ್ದು ಎಸ್ಕೇಪ್ ಆಗುತ್ತಿದ್ದರು.
ಸಂಜೆ ಕದ್ದ ಮಾಲನ್ನು ಮಾರಿ ಬಿಂದಾಸ್ ಜೀವನ ನಡೆಸುತ್ತಿದ್ದರು. ಪರ್ಸ್, ಮೊಬೈಲ್, ಸಣ್ಣ ಪ್ರಮಾಣದ ಹಣಗಳನ್ನು ಕದ್ದರೆ ಜನರು ಅದನ್ನು ಅಷ್ಟು ಸೀರಿಯಸ್ ಆಗಿ ತೆಗೆದುಕೊಳ್ಳುವುದಿಲ್ಲ. ಅಲ್ಲದೇ ಇಂತಹ ಸಣ್ಣ ಪುಟ್ಟ ವಿಷಯಗಳಿಗೆ ಪೊಲೀಸರಿಗೆ ದೂರು ನೀಡುವುದಿಲ್ಲ ಎಂಬ ಧೈರ್ಯದ ಮೇಲೆ ಇದನ್ನೇ ಫುಲ್ಟೈಂ ವೃತ್ತಿಯನ್ನಾಗಿ ಮಾಡಿಕೊಂಡಿದ್ದರು. ಇದೀಗ ಖತರ್ನಾಕ್ ಕಳ್ಳರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಬಾಂಗ್ಲಾದೇಶದ ಕಿಶೋರ್ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…
ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…
66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…
ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…