ಸಿಲಿಕಾನ್ ಸಿಟಿಯಲ್ಲಿ ಎಷ್ಟೇಲ್ಲಾ ಕಳ್ಳತನ ಪ್ರಕರಣಗಳನ್ನು ನೋಡಿರುತ್ತೇವೆ ಆದರೆ ಮನೆಮಂದಿಯಲ್ಲಾ ಕಳ್ಳತನದ ಕೆಲಸಕ್ಕೆ ಇಳಿಯುವುದು ನೋಡಿದ್ರೆ ಆಶ್ಚರ್ಯವಾಗುತ್ತೆ. ಪಿಕ್ ಪಾಕೆಟ್ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡ ತಂಡದ ವಿಚಾರಣೆ ಮಾಡಿದ ಪೊಲೀಸರಿಗೆ ಅವರ ಇಡೀ ಕುಟುಂಬವೇ ಕಳ್ಳತನ ಮಾಡುವ ಕುಟುಂಬ ಎಂದು ತಿಳಿದು ಪೊಲೀಸರೇ ಶಾಕ್ ಆದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಎಸ್.ಆರ್ ನಗರದ ಪೊಲೀಸರು ಪಿಕ್ ಪಾಕೆಟ್ ಪ್ರಕರಣದಲ್ಲಿ ತಂಡವೊಂದನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಈ ವಿಷಯ ಹೊರಬಿದ್ದಿದೆ. ಗಂಡ, ಹೆಂಡತಿ, ಅಣ್ಣ, ಭಾವ, ಮಕ್ಕಳು ಸೇರಿದಂತೆ ಆ ಕುಟುಂಬದ ಪ್ರತಿಯೊಬ್ಬರು ಕೂಡಾ ಕಳ್ಳರೇ ಆಗಿದ್ದರು. ಕಳ್ಳತನವೇ ಇವರ ಫುಲ್ ಟೈಂ ಜಾಬ್ ಆಗಿತ್ತು. ಅದರಿಂದಲೇ ಬೆಂಗಳೂರಿನಲ್ಲಿ ಜೀವನ ಸಾಗಿಸುತ್ತಿದ್ದಾರೆ ಎಂಬ ವಿಷಯವನ್ನು ಕೇಳಿ ಪೊಲೀಸರು ಇಂತಹವರು ಇರುತ್ತಾರ ಎಂದು ದಂಗಾಗಿದ್ದಾರೆ.
ಬನಶಂಕರಿ ನಿವಾಸಿಗಳಾದ ವೇಲು, ಸುಂದರ್ರಾಜ್, ಮಹೇಶ್, ಸೇರಿದಂತೆ ಎಲ್ಲರೂ ಬೆಳಗಾದರೆ ಒಟ್ಟಿಗೆ ಒಂದು ಮೀಟಿಂಗ್ ಮಾಡುತ್ತಾರೆ. ಇಂದು ಯಾರು ಯಾವ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಯಾವ ಬಸ್ ರೂಟ್ ಅಲ್ಲಿ ಪಿಕ್ಪಾಕೆಟ್ ಮಾಡಬೇಕು ಎಂಬುದನ್ನು ನಿರ್ಧರಿಸಿ ಕುಟುಂಬದ ಎಂಟೂ ಜನ ಬೇರೆ ಬೇರೆ ಕಡೆ ತೆರಳುತ್ತಿದ್ದರು. ಅದರಂತೆ ಕೆಲವರು ಜನರ ಗಮನವನ್ನು ಬೇರೆಡೆ ಸೆಳೆಯುವಂತೆ ಮಾಡಿ ಚಿನ್ನಾಭರಣ ಕಳ್ಳತನ ಮಾಡಿದರೆ ಇನ್ನೂ ಕೆಲವರು ರಶ್ ಇರುವ ಬಿಎಂಟಿಸಿ ಬಸ್ಗಳಲ್ಲಿ ಹತ್ತಿಕೊಂಡು ಪರ್ಸ್, ಮೊಬೈಲ್ಗಳನ್ನು ಕದ್ದು ಎಸ್ಕೇಪ್ ಆಗುತ್ತಿದ್ದರು.
ಸಂಜೆ ಕದ್ದ ಮಾಲನ್ನು ಮಾರಿ ಬಿಂದಾಸ್ ಜೀವನ ನಡೆಸುತ್ತಿದ್ದರು. ಪರ್ಸ್, ಮೊಬೈಲ್, ಸಣ್ಣ ಪ್ರಮಾಣದ ಹಣಗಳನ್ನು ಕದ್ದರೆ ಜನರು ಅದನ್ನು ಅಷ್ಟು ಸೀರಿಯಸ್ ಆಗಿ ತೆಗೆದುಕೊಳ್ಳುವುದಿಲ್ಲ. ಅಲ್ಲದೇ ಇಂತಹ ಸಣ್ಣ ಪುಟ್ಟ ವಿಷಯಗಳಿಗೆ ಪೊಲೀಸರಿಗೆ ದೂರು ನೀಡುವುದಿಲ್ಲ ಎಂಬ ಧೈರ್ಯದ ಮೇಲೆ ಇದನ್ನೇ ಫುಲ್ಟೈಂ ವೃತ್ತಿಯನ್ನಾಗಿ ಮಾಡಿಕೊಂಡಿದ್ದರು. ಇದೀಗ ಖತರ್ನಾಕ್ ಕಳ್ಳರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…